<p class="title"><strong>ಮಿದ್ನಾಪುರ (ಪಶ್ಚಿಮ ಬಂಗಾಳ) </strong>: ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಟೆಂಟ್ ಕುಸಿದು 67 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 13 ಮಹಿಳೆಯರಿದ್ದಾರೆ. ಮೋದಿ ಭಾಷಣ ಮಾಡುತ್ತಿದ್ದಾಗಲೇ ಈ ದುರ್ಘಟನೆ ನಡೆದಿದೆ.</p>.<p class="bodytext">ಸಮಾರಂಭ ನಡೆದ ಮೈದಾನದ ಮುಖ್ಯದ್ವಾರದ ಸಮೀಪದಲ್ಲಿ ಈ ಚಪ್ಪರ ಹಾಕಲಾಗಿತ್ತು. ಟೆಂಟ್ ಕುಸಿಯುತ್ತಿರುವುದನ್ನುಭಾಷಣದ ನಡುವೆಯೇ ಪ್ರಧಾನಿ ಗಮನಿಸಿದರು. ತಮ್ಮ ಬಳಿ ನಿಂತಿದ್ದ ವಿಶೇಷ ರಕ್ಷಣಾ ಪಡೆಯ (ಎಸ್ಪಿಜಿ) ಸಿಬ್ಬಂದಿಯನ್ನು ತಕ್ಷಣವೇ ಅಲ್ಲಿಗೆ ಧಾವಿಸುವಂತೆ ಸೂಚಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ಚಪ್ಪರದ ಅಡಿಯಲ್ಲಿ ಸಿಲುಕಿದವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲು ಎಸ್ಪಿಜಿ ಸಿಬ್ಬಂದಿಗೆ ಪ್ರಧಾನಿಯವರ ಆಪ್ತಸಿಬ್ಬಂದಿ ಮತ್ತು ಬಿಜೆಪಿಯ ಕಾರ್ಯಕರ್ತರು ನೆರವಾದರು. ಪ್ರಧಾನಿಯ ಬೆಂಗಾವಲು ಪಡೆಯಲ್ಲಿದ್ದ ಆಂಬುಲೆನ್ಸ್ನಲ್ಲಿಯೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ, ಮೋದಿ ಅವರು ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದರು.</p>.<p class="bodytext">ಚಪ್ಪರ ಕುಸಿದ ಬಳಿಕವೂ ಮೋದಿ ಭಾಷಣ ಮುಂದುವರಿಸಿದರು. ಜನರು ಶಿಸ್ತಿನಿಂದ ವರ್ತಿಸಿದರು ಮತ್ತು ಗಾಯಗೊಂಡವರಿಗೆ ನೆರವಾದವರು ಎಂದು ಅಲ್ಲಿ ಸೇರಿದ್ದವರನ್ನು ಶ್ಲಾಘಿಸಿದರು.</p>.<p class="bodytext">ಗಾಯಗೊಂಡವರಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮಿದ್ನಾಪುರ (ಪಶ್ಚಿಮ ಬಂಗಾಳ) </strong>: ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಟೆಂಟ್ ಕುಸಿದು 67 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 13 ಮಹಿಳೆಯರಿದ್ದಾರೆ. ಮೋದಿ ಭಾಷಣ ಮಾಡುತ್ತಿದ್ದಾಗಲೇ ಈ ದುರ್ಘಟನೆ ನಡೆದಿದೆ.</p>.<p class="bodytext">ಸಮಾರಂಭ ನಡೆದ ಮೈದಾನದ ಮುಖ್ಯದ್ವಾರದ ಸಮೀಪದಲ್ಲಿ ಈ ಚಪ್ಪರ ಹಾಕಲಾಗಿತ್ತು. ಟೆಂಟ್ ಕುಸಿಯುತ್ತಿರುವುದನ್ನುಭಾಷಣದ ನಡುವೆಯೇ ಪ್ರಧಾನಿ ಗಮನಿಸಿದರು. ತಮ್ಮ ಬಳಿ ನಿಂತಿದ್ದ ವಿಶೇಷ ರಕ್ಷಣಾ ಪಡೆಯ (ಎಸ್ಪಿಜಿ) ಸಿಬ್ಬಂದಿಯನ್ನು ತಕ್ಷಣವೇ ಅಲ್ಲಿಗೆ ಧಾವಿಸುವಂತೆ ಸೂಚಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ಚಪ್ಪರದ ಅಡಿಯಲ್ಲಿ ಸಿಲುಕಿದವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲು ಎಸ್ಪಿಜಿ ಸಿಬ್ಬಂದಿಗೆ ಪ್ರಧಾನಿಯವರ ಆಪ್ತಸಿಬ್ಬಂದಿ ಮತ್ತು ಬಿಜೆಪಿಯ ಕಾರ್ಯಕರ್ತರು ನೆರವಾದರು. ಪ್ರಧಾನಿಯ ಬೆಂಗಾವಲು ಪಡೆಯಲ್ಲಿದ್ದ ಆಂಬುಲೆನ್ಸ್ನಲ್ಲಿಯೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ, ಮೋದಿ ಅವರು ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದರು.</p>.<p class="bodytext">ಚಪ್ಪರ ಕುಸಿದ ಬಳಿಕವೂ ಮೋದಿ ಭಾಷಣ ಮುಂದುವರಿಸಿದರು. ಜನರು ಶಿಸ್ತಿನಿಂದ ವರ್ತಿಸಿದರು ಮತ್ತು ಗಾಯಗೊಂಡವರಿಗೆ ನೆರವಾದವರು ಎಂದು ಅಲ್ಲಿ ಸೇರಿದ್ದವರನ್ನು ಶ್ಲಾಘಿಸಿದರು.</p>.<p class="bodytext">ಗಾಯಗೊಂಡವರಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>