<p><strong>ಅಲಿಗಢ:</strong> ಭಯೋತ್ಪಾದಕ ಬೆದರಿಕೆಯ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಎಚ್ಚರಿಕೆ ಬಂದ ಬೆನ್ನಲ್ಲೇ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (ಎಎಂಯು) ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.</p>.ಅಲಿಗಢ ಮುಸ್ಲಿಂ ವಿವಿಯಲ್ಲಿ ನಡೆದ ಬೀಫ್ ಬಿರಿಯಾನಿ ಪ್ರಕರಣ: ಮೂವರ ವಿರುದ್ಧ FIR.<p>ಪ್ರವೇಶ ದ್ವಾರಗಳಲ್ಲಿ ತಪಾಸಣೆ ಕಾರ್ಯವಿಧಾನಗಳನ್ನು ಹೆಚ್ಚಿಸಿದ್ದೇವೆ ಎಂದು ಎಎಂಯು ಶಿಸ್ತುಪಾಲಕ ಮೊಹಮ್ಮದ್ ವಸೀಮ್ ಅಲಿ ಹೇಳಿದ್ದಾರೆ.</p><p>ಲಭ್ಯವಿರುವ ಸಂಪನ್ಮೂಲಗಳ ಮಿತಿಯೊಳಗೆ ಎಲ್ಲಾ ಸಂಭಾವ್ಯ ಭದ್ರತಾ ಕ್ರಮಗಳನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.ಊಟದ ಮೆನುವಿನಲ್ಲಿ ಬೀಫ್ ಬಿರಿಯಾನಿ: ಅಲಿಗಢ ವಿವಿಯಲ್ಲಿ ವಿವಾದ .<p>ಭದ್ರತಾ ವ್ಯವಸ್ಥೆಗಳ ಬಗ್ಗೆ ಜಿಲ್ಲಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಯೋಜಿಸಿದ್ದಾರೆ ಎಂದು ಅಲಿ ಹೇಳಿದ್ದಾರೆ.</p><p>ವಿಶ್ವವಿದ್ಯಾಲಯದ ಅಧಿಕಾರಿಗಳು ನಮ್ಮನ್ನು ಸಂಪರ್ಕಿಸಿದರೆ, ನಾವು ನಮ್ಮ ಕಡೆಯಿಂದ ಸಿದ್ಧತೆಗಳನ್ನು ಪರಿಶೀಲಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.</p> .ಅಲಿಗಢ ವಿ.ವಿಗೆ ಬಾಂಬ್ ಬೆದರಿಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲಿಗಢ:</strong> ಭಯೋತ್ಪಾದಕ ಬೆದರಿಕೆಯ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಎಚ್ಚರಿಕೆ ಬಂದ ಬೆನ್ನಲ್ಲೇ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (ಎಎಂಯು) ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.</p>.ಅಲಿಗಢ ಮುಸ್ಲಿಂ ವಿವಿಯಲ್ಲಿ ನಡೆದ ಬೀಫ್ ಬಿರಿಯಾನಿ ಪ್ರಕರಣ: ಮೂವರ ವಿರುದ್ಧ FIR.<p>ಪ್ರವೇಶ ದ್ವಾರಗಳಲ್ಲಿ ತಪಾಸಣೆ ಕಾರ್ಯವಿಧಾನಗಳನ್ನು ಹೆಚ್ಚಿಸಿದ್ದೇವೆ ಎಂದು ಎಎಂಯು ಶಿಸ್ತುಪಾಲಕ ಮೊಹಮ್ಮದ್ ವಸೀಮ್ ಅಲಿ ಹೇಳಿದ್ದಾರೆ.</p><p>ಲಭ್ಯವಿರುವ ಸಂಪನ್ಮೂಲಗಳ ಮಿತಿಯೊಳಗೆ ಎಲ್ಲಾ ಸಂಭಾವ್ಯ ಭದ್ರತಾ ಕ್ರಮಗಳನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.ಊಟದ ಮೆನುವಿನಲ್ಲಿ ಬೀಫ್ ಬಿರಿಯಾನಿ: ಅಲಿಗಢ ವಿವಿಯಲ್ಲಿ ವಿವಾದ .<p>ಭದ್ರತಾ ವ್ಯವಸ್ಥೆಗಳ ಬಗ್ಗೆ ಜಿಲ್ಲಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಯೋಜಿಸಿದ್ದಾರೆ ಎಂದು ಅಲಿ ಹೇಳಿದ್ದಾರೆ.</p><p>ವಿಶ್ವವಿದ್ಯಾಲಯದ ಅಧಿಕಾರಿಗಳು ನಮ್ಮನ್ನು ಸಂಪರ್ಕಿಸಿದರೆ, ನಾವು ನಮ್ಮ ಕಡೆಯಿಂದ ಸಿದ್ಧತೆಗಳನ್ನು ಪರಿಶೀಲಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.</p> .ಅಲಿಗಢ ವಿ.ವಿಗೆ ಬಾಂಬ್ ಬೆದರಿಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>