<p><strong>ನವದೆಹಲಿ: </strong>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತೆಯ ಸ್ಥಿತಿಗತಿಯ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.</p><p>ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಏಪ್ರಿಲ್ 22ರಂದು ಗುಂಡಿನ ದಾಳಿ ನಡೆಸಿದ್ದ ಉಗ್ರರು, 26 ಮಂದಿಯನ್ನು ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ, ಉಗ್ರರನ್ನು ಹತ್ತಿಕ್ಕಲು ಭಾರತ ಕಾರ್ಯಾಚರಣೆ ಆರಂಭಿಸಿದೆ.</p><p>ಜಾಗತಿಕ ಸಮುದಾಯವೂ ಈ ದಾಳಿಯನ್ನು ಖಂಡಿಸಿವೆ.</p><p>ಸಿಂಗ್ ಅವರು ಮೋದಿ ಅವರೊಂದಿಗೆ ಸಭೆ ನಡೆಸಿರುವ ಬಗ್ಗೆ ಈವರೆಗೆ ಅಧಿಕೃತ ಹೇಳಿಕೆಗಳು ಪ್ರಕಟವಾಗಿಲ್ಲ.</p><p>'ಮನದ ಮಾತು' ಮಾಸಿಕ ರೇಡಿಯೊ ಕಾರ್ಯಕ್ರಮವನ್ನುದ್ದೇಶಿಸಿ ಭಾನುವಾರ ಮಾತನಾಡಿದ್ದ ಪ್ರಧಾನಿ, ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ. 26 ನಾಗರಿಕರ ಹತ್ಯೆಯ ಹಿಂದಿರುವ ಭಯೋತ್ಪಾದಕರು ಮತ್ತು ಸಂಚುಕೋರರನ್ನು ಹುಡುಕಿ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಪುನರುಚ್ಚರಿಸಿದ್ದರು.</p><p>'ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇಡೀ ಜಗತ್ತು 140 ಕೋಟಿ ಭಾರತೀಯರೊಂದಿಗೆ ನಿಂತಿದೆ. ದಾಳಿಯ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಸಿಗಲಿದೆ ಎಂಬುದಾಗಿ ಮತ್ತೊಮ್ಮೆ ಭರವಸೆ ನೀಡುತ್ತೇನೆ' ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತೆಯ ಸ್ಥಿತಿಗತಿಯ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.</p><p>ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಏಪ್ರಿಲ್ 22ರಂದು ಗುಂಡಿನ ದಾಳಿ ನಡೆಸಿದ್ದ ಉಗ್ರರು, 26 ಮಂದಿಯನ್ನು ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ, ಉಗ್ರರನ್ನು ಹತ್ತಿಕ್ಕಲು ಭಾರತ ಕಾರ್ಯಾಚರಣೆ ಆರಂಭಿಸಿದೆ.</p><p>ಜಾಗತಿಕ ಸಮುದಾಯವೂ ಈ ದಾಳಿಯನ್ನು ಖಂಡಿಸಿವೆ.</p><p>ಸಿಂಗ್ ಅವರು ಮೋದಿ ಅವರೊಂದಿಗೆ ಸಭೆ ನಡೆಸಿರುವ ಬಗ್ಗೆ ಈವರೆಗೆ ಅಧಿಕೃತ ಹೇಳಿಕೆಗಳು ಪ್ರಕಟವಾಗಿಲ್ಲ.</p><p>'ಮನದ ಮಾತು' ಮಾಸಿಕ ರೇಡಿಯೊ ಕಾರ್ಯಕ್ರಮವನ್ನುದ್ದೇಶಿಸಿ ಭಾನುವಾರ ಮಾತನಾಡಿದ್ದ ಪ್ರಧಾನಿ, ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ. 26 ನಾಗರಿಕರ ಹತ್ಯೆಯ ಹಿಂದಿರುವ ಭಯೋತ್ಪಾದಕರು ಮತ್ತು ಸಂಚುಕೋರರನ್ನು ಹುಡುಕಿ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಪುನರುಚ್ಚರಿಸಿದ್ದರು.</p><p>'ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇಡೀ ಜಗತ್ತು 140 ಕೋಟಿ ಭಾರತೀಯರೊಂದಿಗೆ ನಿಂತಿದೆ. ದಾಳಿಯ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಸಿಗಲಿದೆ ಎಂಬುದಾಗಿ ಮತ್ತೊಮ್ಮೆ ಭರವಸೆ ನೀಡುತ್ತೇನೆ' ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>