<p>ಶ್ರೀನಗರ: 'ವೈಟ್ ಕಾಲರ್ ಭಯೋತ್ಪಾದನಾ ಜಾಲ' ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ವೈದ್ಯರ ನಿವಾಸದ ಮೇಲೆ ಕಾಶ್ಮೀರದ ಕೌಂಟರ್ ಇಂಟೆಲಿಜೆನ್ಸ್(ಸಿಐಕೆ) ಭಾನುವಾರ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಅನಂತನಾಗ್ ಪ್ರದೇಶದ ಮಲಕ್ನಾಗ್ನಲ್ಲಿರುವ ಮನೆ ಮೇಲೆ ಸಿಐಕೆ ಅಧಿಕಾರಿಗಳು ರಾತ್ರಿಯ ಸಮಯದಲ್ಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಶೋಧದ ಸಮಯದಲ್ಲಿ, ಹರಿಯಾಣ ಮೂಲದ ಮಹಿಳಾ ವೈದ್ಯೆಯೊಬ್ಬರ ಮನೆಯಲ್ಲಿ ಬಾಡಿಗೆದಾರರಾಗಿ ವಾಸಿಸುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.</p><p>ಸಿಐಕೆ ಅಧಿಕಾರಿಗಳು ಮನೆಯಿಂದ ಮೊಬೈಲ್ ಫೋನ್ ವಶಪಡಿಸಿಕೊಂಡು ವಿಧಿವಿಜ್ಞಾನ ವಿಶ್ಲೇಷಣೆಗಾಗಿ ಕಳುಹಿಸಿದ್ದಾರೆ.</p><p>ಈ ಮಧ್ಯೆ, ಭಯೋತ್ಪಾದನಾ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೈ ಫ್ರೂಟ್ ಮಾರಾಟಗಾರ ಬಿಲಾಲ್ ಅಹ್ಮದ್ ವಾನಿ ಮತ್ತು ಅವರ ಮಗ ಜಾಸಿರ್ ಬಿಲಾಲ್ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಈ ಸಂದರ್ಭ ಬಿಲಾಲ್ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಬಳಿಕ, ಅವರನ್ನು ಅನಂತ್ನಾಗ್ನ ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಗರ: 'ವೈಟ್ ಕಾಲರ್ ಭಯೋತ್ಪಾದನಾ ಜಾಲ' ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ವೈದ್ಯರ ನಿವಾಸದ ಮೇಲೆ ಕಾಶ್ಮೀರದ ಕೌಂಟರ್ ಇಂಟೆಲಿಜೆನ್ಸ್(ಸಿಐಕೆ) ಭಾನುವಾರ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಅನಂತನಾಗ್ ಪ್ರದೇಶದ ಮಲಕ್ನಾಗ್ನಲ್ಲಿರುವ ಮನೆ ಮೇಲೆ ಸಿಐಕೆ ಅಧಿಕಾರಿಗಳು ರಾತ್ರಿಯ ಸಮಯದಲ್ಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಶೋಧದ ಸಮಯದಲ್ಲಿ, ಹರಿಯಾಣ ಮೂಲದ ಮಹಿಳಾ ವೈದ್ಯೆಯೊಬ್ಬರ ಮನೆಯಲ್ಲಿ ಬಾಡಿಗೆದಾರರಾಗಿ ವಾಸಿಸುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.</p><p>ಸಿಐಕೆ ಅಧಿಕಾರಿಗಳು ಮನೆಯಿಂದ ಮೊಬೈಲ್ ಫೋನ್ ವಶಪಡಿಸಿಕೊಂಡು ವಿಧಿವಿಜ್ಞಾನ ವಿಶ್ಲೇಷಣೆಗಾಗಿ ಕಳುಹಿಸಿದ್ದಾರೆ.</p><p>ಈ ಮಧ್ಯೆ, ಭಯೋತ್ಪಾದನಾ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೈ ಫ್ರೂಟ್ ಮಾರಾಟಗಾರ ಬಿಲಾಲ್ ಅಹ್ಮದ್ ವಾನಿ ಮತ್ತು ಅವರ ಮಗ ಜಾಸಿರ್ ಬಿಲಾಲ್ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಈ ಸಂದರ್ಭ ಬಿಲಾಲ್ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಬಳಿಕ, ಅವರನ್ನು ಅನಂತ್ನಾಗ್ನ ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>