<p><strong>ನವದೆಹಲಿ:</strong> ಕೆಂಪು ಕೋಟೆ ಬಳಿ ಸ್ಫೋಟಗೊಂಡ ಕಾರಿನ ಚಾಲಕ ಡಾ. ಉಮರ್ ನಬಿಗೆ ಪರಿಚಿತರಾಗಿದ್ದ ಹರಿಯಾಣದ ಅಲ್ ಫಲಾಹ್ ವಿಶ್ವವಿದ್ಯಾಲಯದ ಇಬ್ಬರು ವೈದ್ಯರು ಸೇರಿದಂತೆ ಮೂವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p>.<p>ಶುಕ್ರವಾರ ರಾತ್ರಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡದ ಸಹಾಯದಿಂದ ದೆಹಲಿ ಪೊಲೀಸ್ ವಿಶೇಷ ಘಟಕ ಹರಿಯಾಣದ ಧೌಜ್, ನುಹ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಅಲ್ ಫಲಾಹ್ ವಿಶ್ವವಿದ್ಯಾಲಯದ ವೈದ್ಯರಾದ ಮೊಹಮ್ಮದ್ ಮತ್ತು ಮುಸ್ತಕಿಮ್ ಬಂಧಿತರು.</p>.<p>'ವೈಟ್ ಕಾಲರ್' ಭಯೋತ್ಪಾದನೆ ಜಾಲ ಪ್ರಕರಣದ ತನಿಖೆಯ ಭಾಗವಾಗಿ ಬಂಧಿಸಲ್ಪಟ್ಟಿರುವ ಡಾ. ಮುಜಮ್ಮಿಲ್ ಗನೈ ಅವರೊಂದಿಗೆ ಈ ಇಬ್ಬರೂ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ಆತ (ಮುಜಮ್ಮಿಲ್) ಡಾ. ಉಮರ್ ನಬಿಯವರ ಆಪ್ತ ಸ್ನೇಹಿತ ಎಂದು ಮೂಲಗಳು ತಿಳಿಸಿವೆ.</p>.<p>ಬಂಧಿತ ವೈದ್ಯರಲ್ಲಿ ಒಬ್ಬರು ಸ್ಫೋಟ ಸಂಭವಿಸಿದ ದಿನ ದೆಹಲಿಯಲ್ಲಿದ್ದರು ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ಸಂದರ್ಶನಕ್ಕಾಗಿ ರಾಷ್ಟ್ರ ರಾಜಧಾನಿಗೆ ಬಂದಿದ್ದರು ಎಂದು ಅವರು ಹೇಳಿದ್ದಾರೆ.</p>.<p>ಡಾ.ಗನೈ ಅವರೊಂದಿಗೆ ನಂಟು ಹೊಂದಿದ್ದಾರೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಫೋಟ ಪ್ರಕರಣದಲ್ಲಿ ಅವರ ಪಾತ್ರವಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮೊಹಮ್ಮದ್ ಮತ್ತು ಮುಸ್ತಕಿಮ್ ಅವರನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p>ನುಹ್ನಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ, ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ಮಾರಾಟ ಮಾಡಿದ್ದ ಆರೋಪದಡಿ ದಿನೇಶ್ ಅಲಿಯಾಸ್ 'ಡಬ್ಬು' ಎಂದು ಗುರುತಿಸಲಾದ ಮತ್ತೊಬ್ಬ ವ್ಯಕ್ತಿಯನ್ನು ತನಿಖಾ ಸಂಸ್ಥೆಗಳು ಬಂಧಿಸಿವೆ.</p>.Delhi Blast | ಕಾರು ಚಲಾಯಿಸುತ್ತಿದ್ದದ್ದು ಉಮರ್ ನಬಿ: DNA ಪರೀಕ್ಷೆಯಲ್ಲಿ ದೃಢ.<p>ಶಂಕಿತ ಉಗ್ರರು ಸ್ಫೋಟಕಗಳನ್ನು ಖರೀದಿಸಲು ₹25 ಲಕ್ಷದಿಂದ ₹30 ಲಕ್ಷವನ್ನು ಸಂಗ್ರಹಿಸಿದ್ದರು ಎಂಬ ಮಾಹಿತಿ ತನಿಖೆಯಿಂದ ಗೊತ್ತಾಗಿದೆ. </p>.<p>ವೈದ್ಯರಾದ ಉಮರ್, ಮುಜಮ್ಮಿಲ್ ಗನಿ, ಆದಿಲ್ ಅಹ್ಮದ್ ರಾಠರ್, ಶಾಹೀನ್ ಸಯೀದ್ ಸ್ಫೋಟಕಗಳನ್ನು ಖರೀದಿಸಲು ಇಷ್ಟು ಹಣ ಹೊಂದಿಸಿದ್ದರು. ಗುರುಗ್ರಾಮ, ನೂಹ್ ಮತ್ತು ಇತರ ಪಟ್ಟಣಗಳಿಂದ ₹3 ಲಕ್ಷ ಪಾವತಿಸಿ ಸುಮಾರು 26 ಕ್ವಿಂಟಲ್ ಎನ್ಪಿಕೆ ಗೊಬ್ಬರ ಖರೀದಿಸಿದ್ದರು. ಅದನ್ನು ಕಚ್ಚಾ ಬಾಂಬ್ಗಳ (ಐಇಡಿ) ತಯಾರಿಕೆಗೆ ಬಳಸುತ್ತಿದ್ದರು ಎಂಬುದು ಗೊತ್ತಾಗಿದೆ ಎಂದು ತನಿಖಾಧಿಕಾರಿಗಳು ಗುರುವಾರ ಹೇಳಿದ್ದಾರೆ.</p>.<p>ದಿನೇಶ್, ರಸಗೊಬ್ಬರವನ್ನು ಆರೋಪಿಗಳಿಗೆ ಮಾರಾಟ ಮಾಡಿದ್ದಾನೆಯೇ ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.Delhi Blast: ಪುಲ್ವಾಮಾದ ಶಂಕಿತ ಆರೋಪಿ ಡಾ. ಉಮರ್ ನಬಿ ಮನೆ ಧ್ವಂಸ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೆಂಪು ಕೋಟೆ ಬಳಿ ಸ್ಫೋಟಗೊಂಡ ಕಾರಿನ ಚಾಲಕ ಡಾ. ಉಮರ್ ನಬಿಗೆ ಪರಿಚಿತರಾಗಿದ್ದ ಹರಿಯಾಣದ ಅಲ್ ಫಲಾಹ್ ವಿಶ್ವವಿದ್ಯಾಲಯದ ಇಬ್ಬರು ವೈದ್ಯರು ಸೇರಿದಂತೆ ಮೂವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p>.<p>ಶುಕ್ರವಾರ ರಾತ್ರಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡದ ಸಹಾಯದಿಂದ ದೆಹಲಿ ಪೊಲೀಸ್ ವಿಶೇಷ ಘಟಕ ಹರಿಯಾಣದ ಧೌಜ್, ನುಹ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಅಲ್ ಫಲಾಹ್ ವಿಶ್ವವಿದ್ಯಾಲಯದ ವೈದ್ಯರಾದ ಮೊಹಮ್ಮದ್ ಮತ್ತು ಮುಸ್ತಕಿಮ್ ಬಂಧಿತರು.</p>.<p>'ವೈಟ್ ಕಾಲರ್' ಭಯೋತ್ಪಾದನೆ ಜಾಲ ಪ್ರಕರಣದ ತನಿಖೆಯ ಭಾಗವಾಗಿ ಬಂಧಿಸಲ್ಪಟ್ಟಿರುವ ಡಾ. ಮುಜಮ್ಮಿಲ್ ಗನೈ ಅವರೊಂದಿಗೆ ಈ ಇಬ್ಬರೂ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ಆತ (ಮುಜಮ್ಮಿಲ್) ಡಾ. ಉಮರ್ ನಬಿಯವರ ಆಪ್ತ ಸ್ನೇಹಿತ ಎಂದು ಮೂಲಗಳು ತಿಳಿಸಿವೆ.</p>.<p>ಬಂಧಿತ ವೈದ್ಯರಲ್ಲಿ ಒಬ್ಬರು ಸ್ಫೋಟ ಸಂಭವಿಸಿದ ದಿನ ದೆಹಲಿಯಲ್ಲಿದ್ದರು ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ಸಂದರ್ಶನಕ್ಕಾಗಿ ರಾಷ್ಟ್ರ ರಾಜಧಾನಿಗೆ ಬಂದಿದ್ದರು ಎಂದು ಅವರು ಹೇಳಿದ್ದಾರೆ.</p>.<p>ಡಾ.ಗನೈ ಅವರೊಂದಿಗೆ ನಂಟು ಹೊಂದಿದ್ದಾರೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಫೋಟ ಪ್ರಕರಣದಲ್ಲಿ ಅವರ ಪಾತ್ರವಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮೊಹಮ್ಮದ್ ಮತ್ತು ಮುಸ್ತಕಿಮ್ ಅವರನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p>ನುಹ್ನಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ, ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ಮಾರಾಟ ಮಾಡಿದ್ದ ಆರೋಪದಡಿ ದಿನೇಶ್ ಅಲಿಯಾಸ್ 'ಡಬ್ಬು' ಎಂದು ಗುರುತಿಸಲಾದ ಮತ್ತೊಬ್ಬ ವ್ಯಕ್ತಿಯನ್ನು ತನಿಖಾ ಸಂಸ್ಥೆಗಳು ಬಂಧಿಸಿವೆ.</p>.Delhi Blast | ಕಾರು ಚಲಾಯಿಸುತ್ತಿದ್ದದ್ದು ಉಮರ್ ನಬಿ: DNA ಪರೀಕ್ಷೆಯಲ್ಲಿ ದೃಢ.<p>ಶಂಕಿತ ಉಗ್ರರು ಸ್ಫೋಟಕಗಳನ್ನು ಖರೀದಿಸಲು ₹25 ಲಕ್ಷದಿಂದ ₹30 ಲಕ್ಷವನ್ನು ಸಂಗ್ರಹಿಸಿದ್ದರು ಎಂಬ ಮಾಹಿತಿ ತನಿಖೆಯಿಂದ ಗೊತ್ತಾಗಿದೆ. </p>.<p>ವೈದ್ಯರಾದ ಉಮರ್, ಮುಜಮ್ಮಿಲ್ ಗನಿ, ಆದಿಲ್ ಅಹ್ಮದ್ ರಾಠರ್, ಶಾಹೀನ್ ಸಯೀದ್ ಸ್ಫೋಟಕಗಳನ್ನು ಖರೀದಿಸಲು ಇಷ್ಟು ಹಣ ಹೊಂದಿಸಿದ್ದರು. ಗುರುಗ್ರಾಮ, ನೂಹ್ ಮತ್ತು ಇತರ ಪಟ್ಟಣಗಳಿಂದ ₹3 ಲಕ್ಷ ಪಾವತಿಸಿ ಸುಮಾರು 26 ಕ್ವಿಂಟಲ್ ಎನ್ಪಿಕೆ ಗೊಬ್ಬರ ಖರೀದಿಸಿದ್ದರು. ಅದನ್ನು ಕಚ್ಚಾ ಬಾಂಬ್ಗಳ (ಐಇಡಿ) ತಯಾರಿಕೆಗೆ ಬಳಸುತ್ತಿದ್ದರು ಎಂಬುದು ಗೊತ್ತಾಗಿದೆ ಎಂದು ತನಿಖಾಧಿಕಾರಿಗಳು ಗುರುವಾರ ಹೇಳಿದ್ದಾರೆ.</p>.<p>ದಿನೇಶ್, ರಸಗೊಬ್ಬರವನ್ನು ಆರೋಪಿಗಳಿಗೆ ಮಾರಾಟ ಮಾಡಿದ್ದಾನೆಯೇ ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.Delhi Blast: ಪುಲ್ವಾಮಾದ ಶಂಕಿತ ಆರೋಪಿ ಡಾ. ಉಮರ್ ನಬಿ ಮನೆ ಧ್ವಂಸ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>