<p><strong>ನವದೆಹಲಿ:</strong> ಭಯೋತ್ಪಾದನೆ ವಿರುದ್ಧ ಹೋರಾಡಲು ಜಾಗತಿಕ ಮಟ್ಟದಲ್ಲಿ ವಿಧಾನವೊಂದನ್ನು ರೂಪಿಸಲು ಶ್ರಮಿಸುವುದು ಸೇರಿ ವಿವಿಧ ವಿಚಾರಗಳಲ್ಲಿ ಸಹಕಾರ ವೃದ್ಧಿಸುವ ಸಂಬಂಧ ಭಾರತ ಹಾಗೂ ಇಸ್ರೇಲ್ ಮಂಗಳವಾರ ಚರ್ಚಿಸಿದವು.</p>.<p>ವ್ಯಾಪಾರ, ಮೂಲಸೌಕರ್ಯ ಅಭಿವೃದ್ಧಿ, ಕೃಷಿ ಹಾಗೂ ಸಂವಹನ ಕ್ಷೇತ್ರದಲ್ಲಿನ ಸಹಕಾರ ಹೆಚ್ಚಿಸುವ ಬಗ್ಗೆ ಉಭಯ ದೇಶಗಳ ವಿದೇಶಾಂಗ ಸಚಿವರಾದ ಎಸ್.ಜೈಶಂಕರ್ ಹಾಗೂ ಗಿಡಿಯನ್ ಸಾರ್ ಮಾತುಕತೆ ನಡೆಸಿದರು. </p>.<p>ಬರುವ ದಿನಗಳಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಅದಕ್ಕೆ ಪೂರಕವಾಗಿ ಉಭಯ ನಾಯಕರು ಹಲವು ವಿಚಾರಗಳ ಕುರಿತು ಚರ್ಚಿಸಿದರು ಎಂದು ತಿಳಿದುಬಂದಿದೆ.</p>.<p>‘ಅಮೆರಿಕ ರೂಪಿಸಿರುವ ಕದನ ವಿರಾಮವು ನಿರೀಕ್ಷಿತ ಫಲ ನೀಡಿ, ಇಸ್ರೇಲ್ ಹಾಗೂ ಗಾಜಾ ಪಟ್ಟಿಯಲ್ಲಿ ಶಾಶ್ವತ ಶಾಂತಿ ನೆಲಸುವಂತಾಗಲಿ’ ಎಂದು ಮಾತುಕತೆ ವೇಳೆ ಜೈಶಂಕರ್ ಆಶಿಸಿದರು ಎಂದೂ ಗೊತ್ತಾಗಿದೆ.</p>.<p>ಪ್ರಾದೇಶಿಕ ಸಂಪರ್ಕ ಹೆಚ್ಚಿಸುವ ಸಲುವಾಗಿ ಮಧ್ಯಪ್ರಾಚ್ಯ–ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಬಗ್ಗೆಯೂ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.</p>.<div><blockquote>ಭಾರತ ಹಾಗೂ ಇಸ್ರೇಲ್ ಭಯೋತ್ಪಾದನೆಯ ಸವಾಲು ಎದುರಿಸುತ್ತಿವೆ. ಎಲ್ಲ ಬಗೆಯ ಭಯೋತ್ಪಾದನೆ ಮಟ್ಟ ಹಾಕಲು ಉಭಯ ದೇಶಗಳು ವಿಧಾನವೊಂದನ್ನು ರೂಪಿಸಬೇಕಿದೆ</blockquote><span class="attribution">ಎಸ್.ಜೈಶಂಕರ್ ವಿದೇಶಾಂಗ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಯೋತ್ಪಾದನೆ ವಿರುದ್ಧ ಹೋರಾಡಲು ಜಾಗತಿಕ ಮಟ್ಟದಲ್ಲಿ ವಿಧಾನವೊಂದನ್ನು ರೂಪಿಸಲು ಶ್ರಮಿಸುವುದು ಸೇರಿ ವಿವಿಧ ವಿಚಾರಗಳಲ್ಲಿ ಸಹಕಾರ ವೃದ್ಧಿಸುವ ಸಂಬಂಧ ಭಾರತ ಹಾಗೂ ಇಸ್ರೇಲ್ ಮಂಗಳವಾರ ಚರ್ಚಿಸಿದವು.</p>.<p>ವ್ಯಾಪಾರ, ಮೂಲಸೌಕರ್ಯ ಅಭಿವೃದ್ಧಿ, ಕೃಷಿ ಹಾಗೂ ಸಂವಹನ ಕ್ಷೇತ್ರದಲ್ಲಿನ ಸಹಕಾರ ಹೆಚ್ಚಿಸುವ ಬಗ್ಗೆ ಉಭಯ ದೇಶಗಳ ವಿದೇಶಾಂಗ ಸಚಿವರಾದ ಎಸ್.ಜೈಶಂಕರ್ ಹಾಗೂ ಗಿಡಿಯನ್ ಸಾರ್ ಮಾತುಕತೆ ನಡೆಸಿದರು. </p>.<p>ಬರುವ ದಿನಗಳಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಅದಕ್ಕೆ ಪೂರಕವಾಗಿ ಉಭಯ ನಾಯಕರು ಹಲವು ವಿಚಾರಗಳ ಕುರಿತು ಚರ್ಚಿಸಿದರು ಎಂದು ತಿಳಿದುಬಂದಿದೆ.</p>.<p>‘ಅಮೆರಿಕ ರೂಪಿಸಿರುವ ಕದನ ವಿರಾಮವು ನಿರೀಕ್ಷಿತ ಫಲ ನೀಡಿ, ಇಸ್ರೇಲ್ ಹಾಗೂ ಗಾಜಾ ಪಟ್ಟಿಯಲ್ಲಿ ಶಾಶ್ವತ ಶಾಂತಿ ನೆಲಸುವಂತಾಗಲಿ’ ಎಂದು ಮಾತುಕತೆ ವೇಳೆ ಜೈಶಂಕರ್ ಆಶಿಸಿದರು ಎಂದೂ ಗೊತ್ತಾಗಿದೆ.</p>.<p>ಪ್ರಾದೇಶಿಕ ಸಂಪರ್ಕ ಹೆಚ್ಚಿಸುವ ಸಲುವಾಗಿ ಮಧ್ಯಪ್ರಾಚ್ಯ–ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಬಗ್ಗೆಯೂ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.</p>.<div><blockquote>ಭಾರತ ಹಾಗೂ ಇಸ್ರೇಲ್ ಭಯೋತ್ಪಾದನೆಯ ಸವಾಲು ಎದುರಿಸುತ್ತಿವೆ. ಎಲ್ಲ ಬಗೆಯ ಭಯೋತ್ಪಾದನೆ ಮಟ್ಟ ಹಾಕಲು ಉಭಯ ದೇಶಗಳು ವಿಧಾನವೊಂದನ್ನು ರೂಪಿಸಬೇಕಿದೆ</blockquote><span class="attribution">ಎಸ್.ಜೈಶಂಕರ್ ವಿದೇಶಾಂಗ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>