<p><strong>ನವದೆಹಲಿ:</strong> ‘ಭಯೋತ್ಪಾದನೆಗೆ ಬಲಿಪಶುವಾದವರನ್ನು ಮತ್ತು ಭಯೋತ್ಪಾದಕರನ್ನು ಸಮಾನವಾಗಿ ನೋಡಲು ಸಾಧ್ಯವಿಲ್ಲ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದರು.</p>.<p>ವಿಶ್ವಸಂಸ್ಥೆಯ 80ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ಪಾಕಿಸ್ತಾನದ ಹೆಸರು ಉಲ್ಲೇಖಿಸದೆ ವಾಗ್ದಾಳಿ ನಡೆಸಿದ ಅವರು,‘ ಪಹಲ್ಗಾಮ್ ದಾಳಿಯ ಹೊಣೆ ಹೊತ್ತುಕೊಂಡಿರುವ ಲಷ್ಕರ್–ಎ–ತಯಬಾ (ಎಲ್ಇಟಿ) ಮತ್ತು ಅದರ ಅಂಗಸಂಸ್ಥೆ ‘ದಿ ರೆಸಿಸ್ಟನ್ಸ್ ಫ್ರಂಟ್’ (ಟಿಆರ್ಎಫ್) ಅನ್ನು ರಕ್ಷಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸದಸ್ಯ ದೇಶವೊಂದು ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದರು. </p>.<p>ಪಹಲ್ಗಾಮ್ ದಾಳಿಯಲ್ಲಿ ‘ಟಿಆರ್ಎಫ್‘ ಪಾತ್ರದ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಆದರೆ, ಈ ಉಲ್ಲೇಖವನ್ನು ತೆಗೆದುಹಾಕಲು ಸದಸ್ಯ ದೇಶವೊಂದು ಪ್ರಯತ್ನಿಸುತ್ತಿದೆ’ ಎಂದು ಜೈಶಂಕರ್ ಹೇಳಿದರು. </p>.<p>‘ವಿಶ್ವಸಂಸ್ಥೆಯ ಚರ್ಚೆಗಳು ಈಗ ಹೆಚ್ಚು ಧ್ರುವೀಕರಣಗೊಂಡಿವೆ. ಭಯೋತ್ಪಾದನೆ ಸೇರಿದಂತೆ ಜಾಗತಿಕ ಸವಾಲುಗಳಿಗೆ ಸುಸ್ಥಿರ ಪರಿಹಾರವನ್ನು ಹುಡುಕಬೇಕಾದ ವಿಶ್ವಸಂಸ್ಥೆಯೇ ಬಿಕ್ಕಟ್ಟಿನಲ್ಲಿರುವಂತೆ ಕಾಣುತ್ತದೆ’ ಎಂದೂ ಜೈಶಂಕರ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಭಯೋತ್ಪಾದನೆಗೆ ಬಲಿಪಶುವಾದವರನ್ನು ಮತ್ತು ಭಯೋತ್ಪಾದಕರನ್ನು ಸಮಾನವಾಗಿ ನೋಡಲು ಸಾಧ್ಯವಿಲ್ಲ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದರು.</p>.<p>ವಿಶ್ವಸಂಸ್ಥೆಯ 80ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ಪಾಕಿಸ್ತಾನದ ಹೆಸರು ಉಲ್ಲೇಖಿಸದೆ ವಾಗ್ದಾಳಿ ನಡೆಸಿದ ಅವರು,‘ ಪಹಲ್ಗಾಮ್ ದಾಳಿಯ ಹೊಣೆ ಹೊತ್ತುಕೊಂಡಿರುವ ಲಷ್ಕರ್–ಎ–ತಯಬಾ (ಎಲ್ಇಟಿ) ಮತ್ತು ಅದರ ಅಂಗಸಂಸ್ಥೆ ‘ದಿ ರೆಸಿಸ್ಟನ್ಸ್ ಫ್ರಂಟ್’ (ಟಿಆರ್ಎಫ್) ಅನ್ನು ರಕ್ಷಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸದಸ್ಯ ದೇಶವೊಂದು ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದರು. </p>.<p>ಪಹಲ್ಗಾಮ್ ದಾಳಿಯಲ್ಲಿ ‘ಟಿಆರ್ಎಫ್‘ ಪಾತ್ರದ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಆದರೆ, ಈ ಉಲ್ಲೇಖವನ್ನು ತೆಗೆದುಹಾಕಲು ಸದಸ್ಯ ದೇಶವೊಂದು ಪ್ರಯತ್ನಿಸುತ್ತಿದೆ’ ಎಂದು ಜೈಶಂಕರ್ ಹೇಳಿದರು. </p>.<p>‘ವಿಶ್ವಸಂಸ್ಥೆಯ ಚರ್ಚೆಗಳು ಈಗ ಹೆಚ್ಚು ಧ್ರುವೀಕರಣಗೊಂಡಿವೆ. ಭಯೋತ್ಪಾದನೆ ಸೇರಿದಂತೆ ಜಾಗತಿಕ ಸವಾಲುಗಳಿಗೆ ಸುಸ್ಥಿರ ಪರಿಹಾರವನ್ನು ಹುಡುಕಬೇಕಾದ ವಿಶ್ವಸಂಸ್ಥೆಯೇ ಬಿಕ್ಕಟ್ಟಿನಲ್ಲಿರುವಂತೆ ಕಾಣುತ್ತದೆ’ ಎಂದೂ ಜೈಶಂಕರ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>