<p><strong>ಶ್ರೀ ಸತ್ಯಸಾಯಿ :</strong> ಧರ್ಮಾವರಂನ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ಶೇಖ್ ಕೊತ್ವಾಲ್ ನೂರ್ ಮೊಹಮ್ಮದ್ ಎಂಬಾತ ಪಾಕಿಸ್ತಾನ ಮೂಲದ ಭಯೋತ್ಪಾದನ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆಂಬ ಆರೋಪದಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಮೊಹಮ್ಮದ್ನ(42) ಅನುಮಾನಸ್ಪದ ವರ್ತನೆಯನ್ನು ಗಮನಿಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಿಚಾರಣೆಗೆ ಒಳಪಡಿಸಿದಾಗ ನಿಷೇಧಿತ ಭಯೋತ್ಪಾದಕ ಗುಂಪುಗಳಾದ ಜೈಶ್-ಎ-ಮೊಹಮ್ಮದ್ ನಂತಹ ಉಗ್ರಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವುದು ತಿಳಿದು ಬಂದಿದೆ. </p><p>ಮೊಹಮ್ಮದ್ ಉಗ್ರ ಸಂಘಟನೆಯ ಪ್ರಭಾವಕ್ಕೆ ಒಳಗಾಗಿ ತರಬೇತಿಯನ್ನು ಪಡೆದಿದ್ದಾನೆ. ಆದರೆ ಯಾವುದೇ ಕೃತ್ಯದಲ್ಲಿ ಈವರೆಗೆ ಭಾಗಿಯಾಗಿಲ್ಲ ಎಂದು ಧರ್ಮಾವರಂನ ಪ್ರಭಾರ ಉಪವಿಭಾಗದ ಪೊಲೀಸ್ ಅಧಿಕಾರಿ ನರಸಿಂಗಪ್ಪ ಹೇಳಿದ್ದಾರೆ. </p><p>ಮೊಹಮ್ಮದ್ ಭಾರತೀಯ ಪ್ರಜೆಯಾಗಿದ್ದಾನೆ. ಅವನ ಪೂರ್ವಜರು ಧರ್ಮಾವರಂ ನವರೇ ಆಗಿದ್ದಾರೆ. ವಿದೇಶಿ ಸಂಘಟನೆಗಳಿಗಾಗಿ ಕೆಲಸ ಮಾಡುತ್ತಿದ್ದನು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಮುಂದಿನ ತನಿಖೆಯಲ್ಲಿ ಆತನ ಯೋಜನೆಗಳು ಹಾಗೂ ತಂತ್ರಗಳ ಬಗ್ಗೆ ತಿಳಿಯಲಿದೆ ಎಂದು ನರಸಿಂಗಪ್ಪ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀ ಸತ್ಯಸಾಯಿ :</strong> ಧರ್ಮಾವರಂನ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ಶೇಖ್ ಕೊತ್ವಾಲ್ ನೂರ್ ಮೊಹಮ್ಮದ್ ಎಂಬಾತ ಪಾಕಿಸ್ತಾನ ಮೂಲದ ಭಯೋತ್ಪಾದನ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆಂಬ ಆರೋಪದಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಮೊಹಮ್ಮದ್ನ(42) ಅನುಮಾನಸ್ಪದ ವರ್ತನೆಯನ್ನು ಗಮನಿಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಿಚಾರಣೆಗೆ ಒಳಪಡಿಸಿದಾಗ ನಿಷೇಧಿತ ಭಯೋತ್ಪಾದಕ ಗುಂಪುಗಳಾದ ಜೈಶ್-ಎ-ಮೊಹಮ್ಮದ್ ನಂತಹ ಉಗ್ರಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವುದು ತಿಳಿದು ಬಂದಿದೆ. </p><p>ಮೊಹಮ್ಮದ್ ಉಗ್ರ ಸಂಘಟನೆಯ ಪ್ರಭಾವಕ್ಕೆ ಒಳಗಾಗಿ ತರಬೇತಿಯನ್ನು ಪಡೆದಿದ್ದಾನೆ. ಆದರೆ ಯಾವುದೇ ಕೃತ್ಯದಲ್ಲಿ ಈವರೆಗೆ ಭಾಗಿಯಾಗಿಲ್ಲ ಎಂದು ಧರ್ಮಾವರಂನ ಪ್ರಭಾರ ಉಪವಿಭಾಗದ ಪೊಲೀಸ್ ಅಧಿಕಾರಿ ನರಸಿಂಗಪ್ಪ ಹೇಳಿದ್ದಾರೆ. </p><p>ಮೊಹಮ್ಮದ್ ಭಾರತೀಯ ಪ್ರಜೆಯಾಗಿದ್ದಾನೆ. ಅವನ ಪೂರ್ವಜರು ಧರ್ಮಾವರಂ ನವರೇ ಆಗಿದ್ದಾರೆ. ವಿದೇಶಿ ಸಂಘಟನೆಗಳಿಗಾಗಿ ಕೆಲಸ ಮಾಡುತ್ತಿದ್ದನು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಮುಂದಿನ ತನಿಖೆಯಲ್ಲಿ ಆತನ ಯೋಜನೆಗಳು ಹಾಗೂ ತಂತ್ರಗಳ ಬಗ್ಗೆ ತಿಳಿಯಲಿದೆ ಎಂದು ನರಸಿಂಗಪ್ಪ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>