2014ರಲ್ಲಿ ದೇಶದಾದ್ಯಂತ ದಾಳಿ ನಡೆಸಲು ಭಯೋತ್ಪಾದಕರ ಗುಂಪು ಯೋಜನೆ ರೂಪಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದಲ್ಲಿ 13 ಮಂದಿ ಉಗ್ರರನ್ನು ಬಂಧಿಸಲಾಗಿತ್ತು. ಇವರಲ್ಲಿ 12 ಮಂದಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು ಎಂದು ದಿನೇಶ್ ವಿವರಿಸಿದರು. ಈ ಪ್ರಕರಣದಲ್ಲಿ ಸಂಚು ರೂಪಿಸಿರುವ ಆರೋಪ ಮಿರಾಜುದ್ದೀನ್ ಮೇಲಿತ್ತು ಎಂದೂ ಹೇಳಿದರು.