<p><strong>ಶ್ರೀನಗರ:</strong> ಘೋಷಿತ ಉಗ್ರ ಸಜ್ಜದ್ ಅಹ್ಮದ್ ಶೇಖ್ ಅಲಿಯಾಸ್ ಸಜ್ಜದ್ ಗುಲ್ ಕುಟುಂಬಕ್ಕೆ ಸೇರಿದ ₹ 2 ಕೋಟಿ ಮೌಲ್ಯದ ಆಸ್ತಿಯನ್ನು ಜಮ್ಮು–ಕಾಶ್ಮೀರ ಪೊಲೀಸರು ಶನಿವಾರ ಮುಟ್ಟುಗೋಲು ಹಾಕಿಕೊಂಡಿದ್ದಾರೆ. </p>.<p>ಗಡಿ ಭಾಗದಲ್ಲಿ ಭಯೋತ್ಪಾದಕರ ಸಂಪರ್ಕ ಜಾಲ ಮತ್ತು ಬೆಂಬಲಿಗರಿಗೆ ಮತ್ತಷ್ಟು ಕಡಿವಾಣ ಹಾಕುವ ಭಾಗವಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ರೋಸ್ ಅವೆನ್ಯೂ ಪ್ರದೇಶದ ಖುಷಿಪೋರಾದಲ್ಲಿ ಸಜ್ಜದ್ ತಂದೆ ಹೆಸರಿನಲ್ಲಿದ್ದ ಮೂರು ಅಂತಸ್ತಿನ ವಸತಿ ಕಟ್ಟಡವನ್ನು ವಶಕ್ಕೆ ಪಡೆಯಲಾಗಿದೆ.</p>.<p class="title">ಸಜ್ಜದ್ ಗುಲ್ ಪೊಲೀಸರಿಗೆ ಬೇಕಿರುವ ವ್ಯಕ್ತಿಗಳ ಪಟ್ಟಿಯಲ್ಲಿದ್ದ. ಯುಎಪಿಎ ಕಾಯ್ದೆ ಅಡಿಯಲ್ಲಿ ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">‘ಸಜ್ಜದ್ ಪಾಕಿಸ್ತಾನದ ನಿರ್ದೇಶನದಂತೆ ಕೆಲಸ ಮಾಡುತ್ತಿದ್ದ. ಉಗ್ರ ಸಂಘಟನೆಯ ಮಾಧ್ಯಮ ನಿರ್ವಹಣೆ ಜವಾಬ್ದಾರಿ ಹೊತ್ತಿದ್ದ. ಸಾಮಾಜಿಕ ಮಾಧ್ಯಮಗಳ ಮೂಲಕ ದೇಶ ವಿರೋಧಿ ಪ್ರಚಾರ ಮಾಡುತ್ತಿದ್ದ. ಜಮ್ಮು–ಕಾಶ್ಮೀರ ಯುವಕರನ್ನು ಉಗ್ರ ಸಂಘಟನೆಗಳತ್ತ ಸೆಳೆಯಲು ಪ್ರಚೋದಿಸುತ್ತಿದ್ದ‘ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಘೋಷಿತ ಉಗ್ರ ಸಜ್ಜದ್ ಅಹ್ಮದ್ ಶೇಖ್ ಅಲಿಯಾಸ್ ಸಜ್ಜದ್ ಗುಲ್ ಕುಟುಂಬಕ್ಕೆ ಸೇರಿದ ₹ 2 ಕೋಟಿ ಮೌಲ್ಯದ ಆಸ್ತಿಯನ್ನು ಜಮ್ಮು–ಕಾಶ್ಮೀರ ಪೊಲೀಸರು ಶನಿವಾರ ಮುಟ್ಟುಗೋಲು ಹಾಕಿಕೊಂಡಿದ್ದಾರೆ. </p>.<p>ಗಡಿ ಭಾಗದಲ್ಲಿ ಭಯೋತ್ಪಾದಕರ ಸಂಪರ್ಕ ಜಾಲ ಮತ್ತು ಬೆಂಬಲಿಗರಿಗೆ ಮತ್ತಷ್ಟು ಕಡಿವಾಣ ಹಾಕುವ ಭಾಗವಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ರೋಸ್ ಅವೆನ್ಯೂ ಪ್ರದೇಶದ ಖುಷಿಪೋರಾದಲ್ಲಿ ಸಜ್ಜದ್ ತಂದೆ ಹೆಸರಿನಲ್ಲಿದ್ದ ಮೂರು ಅಂತಸ್ತಿನ ವಸತಿ ಕಟ್ಟಡವನ್ನು ವಶಕ್ಕೆ ಪಡೆಯಲಾಗಿದೆ.</p>.<p class="title">ಸಜ್ಜದ್ ಗುಲ್ ಪೊಲೀಸರಿಗೆ ಬೇಕಿರುವ ವ್ಯಕ್ತಿಗಳ ಪಟ್ಟಿಯಲ್ಲಿದ್ದ. ಯುಎಪಿಎ ಕಾಯ್ದೆ ಅಡಿಯಲ್ಲಿ ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">‘ಸಜ್ಜದ್ ಪಾಕಿಸ್ತಾನದ ನಿರ್ದೇಶನದಂತೆ ಕೆಲಸ ಮಾಡುತ್ತಿದ್ದ. ಉಗ್ರ ಸಂಘಟನೆಯ ಮಾಧ್ಯಮ ನಿರ್ವಹಣೆ ಜವಾಬ್ದಾರಿ ಹೊತ್ತಿದ್ದ. ಸಾಮಾಜಿಕ ಮಾಧ್ಯಮಗಳ ಮೂಲಕ ದೇಶ ವಿರೋಧಿ ಪ್ರಚಾರ ಮಾಡುತ್ತಿದ್ದ. ಜಮ್ಮು–ಕಾಶ್ಮೀರ ಯುವಕರನ್ನು ಉಗ್ರ ಸಂಘಟನೆಗಳತ್ತ ಸೆಳೆಯಲು ಪ್ರಚೋದಿಸುತ್ತಿದ್ದ‘ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>