<p class="title"><strong>ನವದೆಹಲಿ (ಪಿಟಿಐ):</strong>‘ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳ ಸತತ ಕಾರ್ಯಾಚರಣೆಯಿಂದ ಭಯೋತ್ಪಾದಕರ ಸಂಖ್ಯೆ ಕ್ಷೀಣಿಸುತ್ತಿದೆ. ಎರಡು ವರ್ಷಗಳಲ್ಲಿ 360 ಭಯೋತ್ಪಾದಕರನ್ನು ಕೊಲ್ಲಲಾಗಿದೆ’ ಎಂದು ಸಿಆರ್ಪಿಎಫ್ ಮಹಾನಿರ್ದೇಶಕರಾಜೀವ್ ರಾಯ್ ಭಟ್ನಾಗರ್ ತಿಳಿಸಿದ್ದಾರೆ.</p>.<p class="title">‘ಸ್ಥಳೀಯ ಯುವಕರ ದಾರಿ ತಪ್ಪಿಸಿ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಯುವಕರು ಶಸ್ತ್ರಾಸ್ತ್ರಗಳನ್ನು ಕೈಗೆತ್ತುಕೊಳ್ಳದಂತೆ ತಡೆಯಲು ಭದ್ರತಾ ಪಡೆಗಳು ಅವಿತರವಾಗಿ ಪ್ರಯತ್ನಿಸುತ್ತಿವೆ’ ಎಂದು ತಿಳಿಸಿದರು.</p>.<p class="title">‘ಭಯೋತ್ಪಾದನೆಯ ಶಮನವನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಭಯೋತ್ಪಾದನೆಯಲ್ಲಿ ತೊಡಗಿಸಿಕೊಂಡವರ ಮನ ವೊಲಿಸಲು ಪ್ರಯತ್ನಿಸುತ್ತಿದ್ದೇವೆ. ಬಂದೂಕಿನಿಂದ ಉದ್ದೇಶದ ಸಾಧನೆ ಸಾಧ್ಯವಿಲ್ಲ ಎಂದು ಅವರಿಗೂ ಅರಿವಾಗಿದೆ.ಹಲವರು ಶರಣಾಗಿದ್ದಾರೆ’ ಎಂದು ಹೇಳಿದ್ದಾರೆ.</p>.<p class="title">‘ಕಾಶ್ಮೀರಿ ಕಣಿವೆಯಲ್ಲಿ ಅರವತ್ತು ಬೆಟಾಲಿಯನ್ಗಳನ್ನು ನಿಯೋಜಿಸಲಾಗಿದೆ. ನಾವೊಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ.ಇದರಿಂದ ಅದ್ಭುತ ಫಲಿತಾಂಶ ದೊರಕಿದೆ.ಈ ವರ್ಷ 142 ಭಯೋತ್ಪಾದಕರು ತಟಸ್ಥರಾಗಿದ್ದರು. ಕಳೆದ ವರ್ಷ 220 ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಭದ್ರತಾ ಸವಾಲುಗಳನ್ನು ಗಮನದಲ್ಲಿರಿಸಿಕೊಂಡು ಸಿಆರ್ಪಿಎಫ್ ಪಡೆಗೆ ಹೆಚ್ಚಿನ ಸುರಕ್ಷತೆ ಒದಗಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ):</strong>‘ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳ ಸತತ ಕಾರ್ಯಾಚರಣೆಯಿಂದ ಭಯೋತ್ಪಾದಕರ ಸಂಖ್ಯೆ ಕ್ಷೀಣಿಸುತ್ತಿದೆ. ಎರಡು ವರ್ಷಗಳಲ್ಲಿ 360 ಭಯೋತ್ಪಾದಕರನ್ನು ಕೊಲ್ಲಲಾಗಿದೆ’ ಎಂದು ಸಿಆರ್ಪಿಎಫ್ ಮಹಾನಿರ್ದೇಶಕರಾಜೀವ್ ರಾಯ್ ಭಟ್ನಾಗರ್ ತಿಳಿಸಿದ್ದಾರೆ.</p>.<p class="title">‘ಸ್ಥಳೀಯ ಯುವಕರ ದಾರಿ ತಪ್ಪಿಸಿ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಯುವಕರು ಶಸ್ತ್ರಾಸ್ತ್ರಗಳನ್ನು ಕೈಗೆತ್ತುಕೊಳ್ಳದಂತೆ ತಡೆಯಲು ಭದ್ರತಾ ಪಡೆಗಳು ಅವಿತರವಾಗಿ ಪ್ರಯತ್ನಿಸುತ್ತಿವೆ’ ಎಂದು ತಿಳಿಸಿದರು.</p>.<p class="title">‘ಭಯೋತ್ಪಾದನೆಯ ಶಮನವನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಭಯೋತ್ಪಾದನೆಯಲ್ಲಿ ತೊಡಗಿಸಿಕೊಂಡವರ ಮನ ವೊಲಿಸಲು ಪ್ರಯತ್ನಿಸುತ್ತಿದ್ದೇವೆ. ಬಂದೂಕಿನಿಂದ ಉದ್ದೇಶದ ಸಾಧನೆ ಸಾಧ್ಯವಿಲ್ಲ ಎಂದು ಅವರಿಗೂ ಅರಿವಾಗಿದೆ.ಹಲವರು ಶರಣಾಗಿದ್ದಾರೆ’ ಎಂದು ಹೇಳಿದ್ದಾರೆ.</p>.<p class="title">‘ಕಾಶ್ಮೀರಿ ಕಣಿವೆಯಲ್ಲಿ ಅರವತ್ತು ಬೆಟಾಲಿಯನ್ಗಳನ್ನು ನಿಯೋಜಿಸಲಾಗಿದೆ. ನಾವೊಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ.ಇದರಿಂದ ಅದ್ಭುತ ಫಲಿತಾಂಶ ದೊರಕಿದೆ.ಈ ವರ್ಷ 142 ಭಯೋತ್ಪಾದಕರು ತಟಸ್ಥರಾಗಿದ್ದರು. ಕಳೆದ ವರ್ಷ 220 ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಭದ್ರತಾ ಸವಾಲುಗಳನ್ನು ಗಮನದಲ್ಲಿರಿಸಿಕೊಂಡು ಸಿಆರ್ಪಿಎಫ್ ಪಡೆಗೆ ಹೆಚ್ಚಿನ ಸುರಕ್ಷತೆ ಒದಗಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>