ಸೋಮವಾರ ಗಡಿಯ ಅವಳಿ ಜಿಲ್ಲೆಗಳಿಗೆ ಭೇಟಿ ನೀಡಿ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಿದ ಅವರು ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸುವಂತೆ ಸ್ಥಳೀಯ ಕಮಾಂಡರ್ಗಳಿಗೆ ಸೂಚನೆ ನೀಡಿದ್ದಾರೆ. ಎಲೆ, ರೆಂಬೆಗಳ ದಟ್ಟ ಗೊಂಚಲಿನ ಕೆಳಗೆ ಯಾರಿಗೂ ಕಾಣದಂತಿರುವ ಗುಹೆಗಳನ್ನು ನಾಶ ಮಾಡುವಂತೆಯೂ ಹೇಳಿದ್ದಾರೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.