<p class="bodytext"><strong>ನವದೆಹಲಿ:</strong> ‘ಕೋವಿಡ್ ಪರಿಸ್ಥಿತಿ ಎದುರಿಸಲು ರಾಷ್ಟ್ರೀಯ ನೀತಿಯನ್ನು ರೂಪಿಸುವುದು ಅಗತ್ಯವಾಗಿದ್ದು, ಈ ಬಗ್ಗೆ ಚರ್ಚಿಸಲು ಸಂಸತ್ತಿನ ಎರಡು ದಿನಗಳ ವಿಶೇಷ ಅಧಿವೇಶನ ಕರೆಯಬೇಕು’ ಎಂದು ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಒತ್ತಾಯಿಸಿದ್ದಾರೆ.</p>.<p class="bodytext">ದೇಶವನ್ನು ದುರಂತ ಆವರಿಸುತ್ತಿದೆ. ಇಂತಹ ಸಂದರ್ಭದಲ್ಲಿ ವಿಶೇಷ ಅಧಿವೇಶನ ಕರೆಯಲು ರಾಷ್ಟ್ರಪತಿ ಅವರು ತಮ್ಮ ವಿಶೇಷ ಅಧಿಕಾರ ಬಳಸಬೇಕು ಎಂದು ಕೋರಿದ್ದಾರೆ. ಸದ್ಯ, ದೇಶದಲ್ಲಿ ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯುತ್ತಿಲ್ಲ. ಹಾಸಿಗೆಗಳು, ಆಮ್ಲಜನಕ, ಜೀವರಕ್ಷಕ ಪರಿಕರಗಳ ಕೊರತೆಯೂ ಇದೆ ಎಂದು ಹೇಳಿದ್ದಾರೆ.</p>.<p>‘ದೇಶದಾದ್ಯಂತ ಪರಿಸ್ಥಿತಿ ಗಂಭೀರವಾಗುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಲಸಿಕೆ ಕೊರತೆ ಇದೆ. ಆದರೆ, ದೇಶ ಹೊತ್ತಿ ಉರಿಯುವ ಈ ಸಂದರ್ಭದಲ್ಲಿ ಬಿಜೆಪಿಯ ನೀರೊ ಪಶ್ಚಿಮ ಬಂಗಾಳದಲ್ಲಿ ರಾಜಕಾರಣ ಮಾಡುತ್ತಿದ್ದಾರೆ’ ಎಂದು ತಿವಾರಿ ಈ ಕುರಿತ ಮಾಡಿರುವ ಟ್ವೀಟ್ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಕೋವಿಡ್ ಸಾವುಗಳನ್ನು ನಿಭಾಯಿಸಲು ಆಗದ ಸ್ಥಿತಿ ವಿವಿಧ ಚಿತಾಗಾರ, ರುದ್ರಭೂಮಿಗಳಲ್ಲಿ ಇದೆ. ಒಟ್ಟು ಪರಿಸ್ಥಿತಿ ನಿರ್ವಹಿಸಲು ರಾಷ್ಟ್ರೀಯ ನೀತಿ ಅಗತ್ಯವಿದ್ದು, ಸಂಸತ್ತಿನ ಅಧಿವೇಶನ ಅಗತ್ಯವಾಗಿದೆ ಎಂದು ತಿವಾರಿ ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ:</strong> ‘ಕೋವಿಡ್ ಪರಿಸ್ಥಿತಿ ಎದುರಿಸಲು ರಾಷ್ಟ್ರೀಯ ನೀತಿಯನ್ನು ರೂಪಿಸುವುದು ಅಗತ್ಯವಾಗಿದ್ದು, ಈ ಬಗ್ಗೆ ಚರ್ಚಿಸಲು ಸಂಸತ್ತಿನ ಎರಡು ದಿನಗಳ ವಿಶೇಷ ಅಧಿವೇಶನ ಕರೆಯಬೇಕು’ ಎಂದು ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಒತ್ತಾಯಿಸಿದ್ದಾರೆ.</p>.<p class="bodytext">ದೇಶವನ್ನು ದುರಂತ ಆವರಿಸುತ್ತಿದೆ. ಇಂತಹ ಸಂದರ್ಭದಲ್ಲಿ ವಿಶೇಷ ಅಧಿವೇಶನ ಕರೆಯಲು ರಾಷ್ಟ್ರಪತಿ ಅವರು ತಮ್ಮ ವಿಶೇಷ ಅಧಿಕಾರ ಬಳಸಬೇಕು ಎಂದು ಕೋರಿದ್ದಾರೆ. ಸದ್ಯ, ದೇಶದಲ್ಲಿ ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯುತ್ತಿಲ್ಲ. ಹಾಸಿಗೆಗಳು, ಆಮ್ಲಜನಕ, ಜೀವರಕ್ಷಕ ಪರಿಕರಗಳ ಕೊರತೆಯೂ ಇದೆ ಎಂದು ಹೇಳಿದ್ದಾರೆ.</p>.<p>‘ದೇಶದಾದ್ಯಂತ ಪರಿಸ್ಥಿತಿ ಗಂಭೀರವಾಗುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಲಸಿಕೆ ಕೊರತೆ ಇದೆ. ಆದರೆ, ದೇಶ ಹೊತ್ತಿ ಉರಿಯುವ ಈ ಸಂದರ್ಭದಲ್ಲಿ ಬಿಜೆಪಿಯ ನೀರೊ ಪಶ್ಚಿಮ ಬಂಗಾಳದಲ್ಲಿ ರಾಜಕಾರಣ ಮಾಡುತ್ತಿದ್ದಾರೆ’ ಎಂದು ತಿವಾರಿ ಈ ಕುರಿತ ಮಾಡಿರುವ ಟ್ವೀಟ್ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಕೋವಿಡ್ ಸಾವುಗಳನ್ನು ನಿಭಾಯಿಸಲು ಆಗದ ಸ್ಥಿತಿ ವಿವಿಧ ಚಿತಾಗಾರ, ರುದ್ರಭೂಮಿಗಳಲ್ಲಿ ಇದೆ. ಒಟ್ಟು ಪರಿಸ್ಥಿತಿ ನಿರ್ವಹಿಸಲು ರಾಷ್ಟ್ರೀಯ ನೀತಿ ಅಗತ್ಯವಿದ್ದು, ಸಂಸತ್ತಿನ ಅಧಿವೇಶನ ಅಗತ್ಯವಾಗಿದೆ ಎಂದು ತಿವಾರಿ ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>