<p><strong>ಹೈದರಾಬಾದ್:</strong> ತೆಲಂಗಾಣ ವಿಧಾನಸಭೆಯನ್ನು ಅವಧಿಗೂ ಮುನ್ನವೇ ಗುರುವಾರ ವಿಸರ್ಜಿಸಲಾಗಿದೆ.<br /><br />ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರಳುವ ನಿರ್ಣಯಕ್ಕೆ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ನಂತರ ರಾಜಭವನಕ್ಕೆ ತೆರಳಿದ ರಾವ್ ಅವರು ರಾಜ್ಯಪಾಲ ಇ.ಎಸ್.ಎಲ್. ನರಸಿಂಹನ್ ಅವರಿಗೆ ನಿರ್ಣಯವನ್ನು ಹಸ್ತಾಂತರಿಸಿದರು. ರಾಜ್ಯಪಾಲರು ನಿರ್ಣಯವನ್ನು ಅಂಗೀಕರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.<br /><br />ಆದರೆ, ಅವಧಿಗೂ ಮುನ್ನ ಚುನಾವಣೆ ನಡೆಯಲಿದೆಯೇ ಎಂಬುದು ಚುನಾವಣಾ ಆಯೋಗದ ನಿರ್ಧಾರದ ಮೇಲೆ ಅವಲಂಬಿತವಾಗಿದೆ.<br /><br />ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಸರ್ಕಾರ ಅವಧಿಗೂ ಮುನ್ನ ವಿಧಾನಸಭೆ ವಿಸರ್ಜಿಸಲಿದೆ ಎಂಬ ಬಗ್ಗೆ ಕಳೆದ ಕೆಲವು ದಿನಗಳಿಂದ ದೇಶದಾದ್ಯಂತ ಚರ್ಚೆಯಾಗುತ್ತಿತ್ತು.<br /><br /><strong>ಇನ್ನೂ ಎಂಟು ತಿಂಗಳ ಅವಧಿ ಬಾಕಿ</strong><br /><br />ಟಿಆರ್ಎಸ್ ಸರ್ಕಾರಕ್ಕೆ ಇನ್ನೂ ಎಂಟು ತಿಂಗಳ ಅವಧಿ ಬಾಕಿ ಇದೆ. ಅವಧಿ ಪೂರ್ಣಗೊಳ್ಳುವವರೆಗೂ ಅಧಿಕಾರ ನಡೆಸಿದ್ದೇ ಆದಲ್ಲಿ 2019ರ ಮೇ ವರೆಗೂ ಟಿಆರ್ಎಸ್ ಸರ್ಕಾರ ಅಸ್ತಿತ್ವದಲ್ಲಿರಬೇಕಿತ್ತು. ಅಲ್ಲದೆ, 2019ರ ಲೋಕಸಭೆ ಚುನಾವಣೆ ಜತೆಗೇ ವಿಧಾನಸಭೆ ಚುನಾವಣೆಯೂ ನಡೆಯುವ ಸಾಧ್ಯತೆ ಇತ್ತು.<br /><br />‘ಮುಂದಿನ ಸಚಿವ ಸಂಪುಟ ಸಭೆಯ ಬಳಿಕ ನಮ್ಮ ಪಕ್ಷದ ನಾಯಕನಿಂದ ಮಹತ್ವದ ನಿರ್ಧಾರ ಪ್ರಕಟವಾಗಲಿರುವುದನ್ನು ನೀವು ನಿರೀಕ್ಷಿಸಬಹುದು. ನಂತರ ರಾಜ್ಯದ ರಾಜಕೀಯ ಕಾವೇರಲಿದೆ’ ಎಂದು ಮುಖ್ಯಮಂತ್ರಿಗಳ ಪುತ್ರ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಕೆ.ಟಿ. ರಾಮ ರಾವ್ ಶನಿವಾರ ಹೇಳಿಕೆ ನೀಡಿದ್ದನ್ನು ಸುದ್ದಿವಾಹಿನಿಯೊಂದು ಬಿತ್ತರಿಸಿತ್ತು. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.<br /><br /><strong>ಮೋದಿಯನ್ನು ಭೇಟಿಯಾಗಿದ್ದ ರಾವ್</strong><br /><br />ತೆಲಂಗಾಣದ ಮುಖ್ಯಮಂತ್ರಿಗಳು ಆಗಸ್ಟ್ನಲ್ಲಿ ಎರಡು ಬಾರಿ ಪ್ರಧಾನಿ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಿದ್ದರು. ನಂತರ, ಅವಧಿಗೂ ಮುನ್ನ ವಿಧಾನಸಭೆ ವಿಸರ್ಜನೆಯಾಗುವ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲಂಗಾಣ ವಿಧಾನಸಭೆಯನ್ನು ಅವಧಿಗೂ ಮುನ್ನವೇ ಗುರುವಾರ ವಿಸರ್ಜಿಸಲಾಗಿದೆ.<br /><br />ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರಳುವ ನಿರ್ಣಯಕ್ಕೆ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ನಂತರ ರಾಜಭವನಕ್ಕೆ ತೆರಳಿದ ರಾವ್ ಅವರು ರಾಜ್ಯಪಾಲ ಇ.ಎಸ್.ಎಲ್. ನರಸಿಂಹನ್ ಅವರಿಗೆ ನಿರ್ಣಯವನ್ನು ಹಸ್ತಾಂತರಿಸಿದರು. ರಾಜ್ಯಪಾಲರು ನಿರ್ಣಯವನ್ನು ಅಂಗೀಕರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.<br /><br />ಆದರೆ, ಅವಧಿಗೂ ಮುನ್ನ ಚುನಾವಣೆ ನಡೆಯಲಿದೆಯೇ ಎಂಬುದು ಚುನಾವಣಾ ಆಯೋಗದ ನಿರ್ಧಾರದ ಮೇಲೆ ಅವಲಂಬಿತವಾಗಿದೆ.<br /><br />ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಸರ್ಕಾರ ಅವಧಿಗೂ ಮುನ್ನ ವಿಧಾನಸಭೆ ವಿಸರ್ಜಿಸಲಿದೆ ಎಂಬ ಬಗ್ಗೆ ಕಳೆದ ಕೆಲವು ದಿನಗಳಿಂದ ದೇಶದಾದ್ಯಂತ ಚರ್ಚೆಯಾಗುತ್ತಿತ್ತು.<br /><br /><strong>ಇನ್ನೂ ಎಂಟು ತಿಂಗಳ ಅವಧಿ ಬಾಕಿ</strong><br /><br />ಟಿಆರ್ಎಸ್ ಸರ್ಕಾರಕ್ಕೆ ಇನ್ನೂ ಎಂಟು ತಿಂಗಳ ಅವಧಿ ಬಾಕಿ ಇದೆ. ಅವಧಿ ಪೂರ್ಣಗೊಳ್ಳುವವರೆಗೂ ಅಧಿಕಾರ ನಡೆಸಿದ್ದೇ ಆದಲ್ಲಿ 2019ರ ಮೇ ವರೆಗೂ ಟಿಆರ್ಎಸ್ ಸರ್ಕಾರ ಅಸ್ತಿತ್ವದಲ್ಲಿರಬೇಕಿತ್ತು. ಅಲ್ಲದೆ, 2019ರ ಲೋಕಸಭೆ ಚುನಾವಣೆ ಜತೆಗೇ ವಿಧಾನಸಭೆ ಚುನಾವಣೆಯೂ ನಡೆಯುವ ಸಾಧ್ಯತೆ ಇತ್ತು.<br /><br />‘ಮುಂದಿನ ಸಚಿವ ಸಂಪುಟ ಸಭೆಯ ಬಳಿಕ ನಮ್ಮ ಪಕ್ಷದ ನಾಯಕನಿಂದ ಮಹತ್ವದ ನಿರ್ಧಾರ ಪ್ರಕಟವಾಗಲಿರುವುದನ್ನು ನೀವು ನಿರೀಕ್ಷಿಸಬಹುದು. ನಂತರ ರಾಜ್ಯದ ರಾಜಕೀಯ ಕಾವೇರಲಿದೆ’ ಎಂದು ಮುಖ್ಯಮಂತ್ರಿಗಳ ಪುತ್ರ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಕೆ.ಟಿ. ರಾಮ ರಾವ್ ಶನಿವಾರ ಹೇಳಿಕೆ ನೀಡಿದ್ದನ್ನು ಸುದ್ದಿವಾಹಿನಿಯೊಂದು ಬಿತ್ತರಿಸಿತ್ತು. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.<br /><br /><strong>ಮೋದಿಯನ್ನು ಭೇಟಿಯಾಗಿದ್ದ ರಾವ್</strong><br /><br />ತೆಲಂಗಾಣದ ಮುಖ್ಯಮಂತ್ರಿಗಳು ಆಗಸ್ಟ್ನಲ್ಲಿ ಎರಡು ಬಾರಿ ಪ್ರಧಾನಿ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಿದ್ದರು. ನಂತರ, ಅವಧಿಗೂ ಮುನ್ನ ವಿಧಾನಸಭೆ ವಿಸರ್ಜನೆಯಾಗುವ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>