<p><strong>ಹೈದರಾಬಾದ್:</strong> ಕೃಷಿ ಸಾಲ ಮನ್ನಾ ಯೋಜನೆಗೆ ಅನುಮೋದನೆ ನೀಡಿರುವ ತೆಲಂಗಾಣ ಸಚಿವ ಸಂಪುಟ, ‘ರೈತು ಭರೋಸಾ’ ಯೋಜನೆ ಅನುಷ್ಠಾನದಲ್ಲಿ ಪಾರದರ್ಶಕತೆ ಖಾತ್ರಿಪಡಿಸುವ ಸಲುವಾಗಿ ಸಂಪುಟ ಉಪಸಮಿತಿ ನೇಮಕ ಮಾಡಲು ಶುಕ್ರವಾರ ನಿರ್ಧರಿಸಿದೆ.</p>.<p>ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ, ‘ವಿಧಾನಸಭೆ ಚುನಾವಣೆಗೂ ಮುನ್ನ ವರಂಗಲ್ನಲ್ಲಿ ಪ್ರಕಟಿಸಿದ ‘ರೈತ ಘೋಷಣೆ’ಯಲ್ಲಿ ಹೇಳಿರುವಂತೆ ಕೃಷಿ ಸಾಲ ಮನ್ನಾ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ’ ಎಂದರು.</p>.<p>‘2018ರ ಡಿಸೆಂಬರ್ 12ರಿಂದ 2023ರ ಡಿಸೆಂಬರ್ 9ರ ವರೆಗಿನ ಅವಧಿಯಲ್ಲಿ ರೈತರು ತೆಗೆದುಕೊಂಡಿರುವ ಕೃಷಿ ಸಾಲವನ್ನು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ₹31 ಸಾವಿರ ಕೋಟಿ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ’ ಎಂದರು. </p>.<p>‘ರೈತು ಭರೋಸಾ’ ಯೋಜನೆ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಪಾಡುವುದಕ್ಕಾಗಿ ರಚಿಸಿರುವ ಸಂಪುಟ ಉಪಸಮಿತಿ ನೇತೃತ್ವವನ್ನು ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ವಹಿಸುವರು. ಈ ಉಪಸಮಿತಿಯು ಜುಲೈ 15ರ ಒಳಗಾಗಿ ತನ್ನ ವರದಿ ಸಲ್ಲಿಸಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಕೃಷಿ ಸಾಲ ಮನ್ನಾ ಯೋಜನೆಗೆ ಅನುಮೋದನೆ ನೀಡಿರುವ ತೆಲಂಗಾಣ ಸಚಿವ ಸಂಪುಟ, ‘ರೈತು ಭರೋಸಾ’ ಯೋಜನೆ ಅನುಷ್ಠಾನದಲ್ಲಿ ಪಾರದರ್ಶಕತೆ ಖಾತ್ರಿಪಡಿಸುವ ಸಲುವಾಗಿ ಸಂಪುಟ ಉಪಸಮಿತಿ ನೇಮಕ ಮಾಡಲು ಶುಕ್ರವಾರ ನಿರ್ಧರಿಸಿದೆ.</p>.<p>ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ, ‘ವಿಧಾನಸಭೆ ಚುನಾವಣೆಗೂ ಮುನ್ನ ವರಂಗಲ್ನಲ್ಲಿ ಪ್ರಕಟಿಸಿದ ‘ರೈತ ಘೋಷಣೆ’ಯಲ್ಲಿ ಹೇಳಿರುವಂತೆ ಕೃಷಿ ಸಾಲ ಮನ್ನಾ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ’ ಎಂದರು.</p>.<p>‘2018ರ ಡಿಸೆಂಬರ್ 12ರಿಂದ 2023ರ ಡಿಸೆಂಬರ್ 9ರ ವರೆಗಿನ ಅವಧಿಯಲ್ಲಿ ರೈತರು ತೆಗೆದುಕೊಂಡಿರುವ ಕೃಷಿ ಸಾಲವನ್ನು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ₹31 ಸಾವಿರ ಕೋಟಿ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ’ ಎಂದರು. </p>.<p>‘ರೈತು ಭರೋಸಾ’ ಯೋಜನೆ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಪಾಡುವುದಕ್ಕಾಗಿ ರಚಿಸಿರುವ ಸಂಪುಟ ಉಪಸಮಿತಿ ನೇತೃತ್ವವನ್ನು ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ವಹಿಸುವರು. ಈ ಉಪಸಮಿತಿಯು ಜುಲೈ 15ರ ಒಳಗಾಗಿ ತನ್ನ ವರದಿ ಸಲ್ಲಿಸಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>