ಚಂಡೀಗಢ: ಹರಿಯಾಣ ರಾಜ್ಯದಲ್ಲಿರುವ ಥಲಸ್ಸೆಮಿಯಾ ಹಾಗೂ ಹಿಮೋಫಿಲಿಯಾ ರೋಗಿಗಳು ಮಾಸಿಕ ₹ 3 ಸಾವಿರ ಪಿಂಚಣಿ ಪಡೆಯಲಿದ್ದಾರೆ.
ಮುಖ್ಯಮಂತ್ರಿ ಮನೋಹರ್ ಖಟ್ಟರ್ ಅಧ್ಯಕ್ಷತೆಯಲ್ಲಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.
ಇದರಿಂದ ರಾಜ್ಯದ 2,083 ರೋಗಿಗಳಿಗೆ ಪ್ರಯೋಜನವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ₹7.49 ಕೋಟಿ ಹೊರೆ ಬೀಳಲಿದೆ ಎಂದು ಅಂದಾಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.