<p><strong>ಠಾಣೆ:</strong> 17 ವರ್ಷದ ಮಗಳನ್ನು ಮಹಾರಾಷ್ಟ್ರದ ಠಾಣೆ ರೈಲ್ವೆ ನಿಲ್ದಾಣದಲ್ಲಿ ಭಿಕ್ಷಾಟನೆ ಮಾಡಿಸಿದ ಆರೋಪದಲ್ಲಿ ದಂಪತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.</p><p>ಸೋಮವಾರ ರಾತ್ರಿ ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ಹದಿಹರೆಯದ ಬಾಲಕಿ ಭಿಕ್ಷೆ ಬೇಡುತ್ತಿರುವುದು ಮಕ್ಕಳ ಕಲ್ಯಾಣ ತಂಡದ ಸದಸ್ಯರ ಕಣ್ಣಿಗೆ ಬಿದ್ದಿತ್ತು. ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. </p>.ಭಿಕ್ಷಾಟನೆ ಮಾಡುತ್ತಿದ್ದ ಮಕ್ಕಳು: ಟ್ವೀಟ್ ಆಧರಿಸಿ ರಕ್ಷಣೆ!.<p>ಕಲ್ವಾ ಪ್ರದೇಶದಲ್ಲಿ ವಾಸಿಸುತ್ತಿದ್ದ ದಂಪತಿ, ತಮ್ಮ ಮಗಳನ್ನು ನಿಲ್ದಾಣದಲ್ಲಿ ಭಿಕ್ಷೆ ಬೇಡಿಸಿ, ಅದರಿಂದ ಬಂದ ಹಣದಿಂದ ಜೀವನ ಸಾಗಿಸುತ್ತಿದ್ದರು ಎಂದು ಠಾಣೆ ಸರ್ಕಾರಿ ರೈಲ್ವೆ ಪೊಲಿಸ್ನ ಹಿರಿಯ ಇನ್ಸ್ಪೆಕ್ಟರ್ ಅರ್ಚನಾ ಧುಸಾನೆ ಹೇಳಿದ್ದಾರೆ.</p><p>ಬಾಲಕಿಗೆ ಮಾದಕ ಪಾನೀಯ ಸೇವಿಸುವಂತೆಯೂ ಅವರು ಒತ್ತಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಾಲಕಿಯನ್ನು ರಕ್ಷಣಾ ಗೃಹಕ್ಕೆ ಕಳುಹಿಸಲಾಗಿದೆ. ಬಾಲ ನ್ಯಾಯ ಕಾಯ್ದೆಯಡಿ ಪೋಷಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p> .ಬೆಂಗಳೂರು: ಮೆಟ್ರೊದಲ್ಲಿ ಭಿಕ್ಷಾಟನೆ ನಡೆಸಿ ಇಳಿದು ಹೋದ ಅಂಗವಿಕಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ:</strong> 17 ವರ್ಷದ ಮಗಳನ್ನು ಮಹಾರಾಷ್ಟ್ರದ ಠಾಣೆ ರೈಲ್ವೆ ನಿಲ್ದಾಣದಲ್ಲಿ ಭಿಕ್ಷಾಟನೆ ಮಾಡಿಸಿದ ಆರೋಪದಲ್ಲಿ ದಂಪತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.</p><p>ಸೋಮವಾರ ರಾತ್ರಿ ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ಹದಿಹರೆಯದ ಬಾಲಕಿ ಭಿಕ್ಷೆ ಬೇಡುತ್ತಿರುವುದು ಮಕ್ಕಳ ಕಲ್ಯಾಣ ತಂಡದ ಸದಸ್ಯರ ಕಣ್ಣಿಗೆ ಬಿದ್ದಿತ್ತು. ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. </p>.ಭಿಕ್ಷಾಟನೆ ಮಾಡುತ್ತಿದ್ದ ಮಕ್ಕಳು: ಟ್ವೀಟ್ ಆಧರಿಸಿ ರಕ್ಷಣೆ!.<p>ಕಲ್ವಾ ಪ್ರದೇಶದಲ್ಲಿ ವಾಸಿಸುತ್ತಿದ್ದ ದಂಪತಿ, ತಮ್ಮ ಮಗಳನ್ನು ನಿಲ್ದಾಣದಲ್ಲಿ ಭಿಕ್ಷೆ ಬೇಡಿಸಿ, ಅದರಿಂದ ಬಂದ ಹಣದಿಂದ ಜೀವನ ಸಾಗಿಸುತ್ತಿದ್ದರು ಎಂದು ಠಾಣೆ ಸರ್ಕಾರಿ ರೈಲ್ವೆ ಪೊಲಿಸ್ನ ಹಿರಿಯ ಇನ್ಸ್ಪೆಕ್ಟರ್ ಅರ್ಚನಾ ಧುಸಾನೆ ಹೇಳಿದ್ದಾರೆ.</p><p>ಬಾಲಕಿಗೆ ಮಾದಕ ಪಾನೀಯ ಸೇವಿಸುವಂತೆಯೂ ಅವರು ಒತ್ತಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಾಲಕಿಯನ್ನು ರಕ್ಷಣಾ ಗೃಹಕ್ಕೆ ಕಳುಹಿಸಲಾಗಿದೆ. ಬಾಲ ನ್ಯಾಯ ಕಾಯ್ದೆಯಡಿ ಪೋಷಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p> .ಬೆಂಗಳೂರು: ಮೆಟ್ರೊದಲ್ಲಿ ಭಿಕ್ಷಾಟನೆ ನಡೆಸಿ ಇಳಿದು ಹೋದ ಅಂಗವಿಕಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>