<p><strong>ಠಾಣೆ:</strong> ಮಹಾರಾಷ್ಟ್ರದ ಠಾಣೆ ನಗರದ ಖಾಸಗಿ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ದೆಹಲಿಯ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ; ನಾಲ್ವರು ಸಾವು.<p>ರುತು ಪಾರ್ಕ್ನಲ್ಲಿರುವ ಎರಡು ಅಂತಸ್ತಿನ ಆಸ್ಪತ್ರೆಯಲ್ಲಿ ಬೆಳಿಗ್ಗೆ 10.37ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಸಣ್ಣ ಅವಘಡ ಇದಾಗಿದ್ದು ಯಾರೂ ಗಾಯಗೊಂಡಿಲ್ಲ ಎಂದು ಠಾಣೆ ಮುನ್ಸಿಪಲ್ ಕಾರ್ಪೊರೇಷನ್ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತಡ್ವಿ ತಿಳಿಸಿದ್ದಾರೆ.</p><p>ಆಸ್ಪತ್ರೆಯ ತೀವ್ರ ನಿಗಾ ಘಟಕದ (ಐಸಿಯು) ವೆಂಟಿಲೇಟರ್ಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಗೆ ಕಾರಣವೇನೆಂದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.</p>.ಹಾವೇರಿ: ದೇವಸ್ಥಾನ ದೀಪದ ಬೆಂಕಿ ತಗುಲಿ ಬಾಲಕಿ ಸಾವು.<p>ಘಟನೆ ವೇಳೆ ಆರು ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಲ್ಲಿ 66 ವರ್ಷ ವಯಸ್ಸಿನ ಒಬ್ಬರು ಐಸಿಯುನಲ್ಲಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದ್ದಾರೆ.</p><p>ಸಾಮಾನ್ಯ ವಾರ್ಡ್ನಲ್ಲಿರುವ ಇತರ ರೋಗಿಗಳು ಸಹ ಸುರಕ್ಷಿತವಾಗಿದ್ದಾರೆ ಎಂದು ತಡ್ವಿ ತಿಳಿಸಿದ್ದಾರೆ.</p><p>ಮಾಹಿತಿ ತಿಳಿದ ನಂತರ, ಸ್ಥಳೀಯ ಅಗ್ನಿಶಾಮಕ ದಳ ಮತ್ತು ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶದ ತಂಡವು ಸ್ಥಳಕ್ಕೆ ಧಾವಿಸಿ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಬೆಂಕಿಯನ್ನು ನಂದಿಸಿತು ಎಂದು ಅವರು ಮಾಹಿತಿ ನೀಡಿದ್ದಾರೆ.</p> .ಸಿಂಗಪುರ ಹಡಗಿಗೆ ಬೆಂಕಿ: ಇಬ್ಬರು ನೌಕಾ ಸಿಬ್ಬಂದಿ ಸ್ಥಿತಿ ಗಂಭೀರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ:</strong> ಮಹಾರಾಷ್ಟ್ರದ ಠಾಣೆ ನಗರದ ಖಾಸಗಿ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ದೆಹಲಿಯ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ; ನಾಲ್ವರು ಸಾವು.<p>ರುತು ಪಾರ್ಕ್ನಲ್ಲಿರುವ ಎರಡು ಅಂತಸ್ತಿನ ಆಸ್ಪತ್ರೆಯಲ್ಲಿ ಬೆಳಿಗ್ಗೆ 10.37ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಸಣ್ಣ ಅವಘಡ ಇದಾಗಿದ್ದು ಯಾರೂ ಗಾಯಗೊಂಡಿಲ್ಲ ಎಂದು ಠಾಣೆ ಮುನ್ಸಿಪಲ್ ಕಾರ್ಪೊರೇಷನ್ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತಡ್ವಿ ತಿಳಿಸಿದ್ದಾರೆ.</p><p>ಆಸ್ಪತ್ರೆಯ ತೀವ್ರ ನಿಗಾ ಘಟಕದ (ಐಸಿಯು) ವೆಂಟಿಲೇಟರ್ಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಗೆ ಕಾರಣವೇನೆಂದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.</p>.ಹಾವೇರಿ: ದೇವಸ್ಥಾನ ದೀಪದ ಬೆಂಕಿ ತಗುಲಿ ಬಾಲಕಿ ಸಾವು.<p>ಘಟನೆ ವೇಳೆ ಆರು ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಲ್ಲಿ 66 ವರ್ಷ ವಯಸ್ಸಿನ ಒಬ್ಬರು ಐಸಿಯುನಲ್ಲಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದ್ದಾರೆ.</p><p>ಸಾಮಾನ್ಯ ವಾರ್ಡ್ನಲ್ಲಿರುವ ಇತರ ರೋಗಿಗಳು ಸಹ ಸುರಕ್ಷಿತವಾಗಿದ್ದಾರೆ ಎಂದು ತಡ್ವಿ ತಿಳಿಸಿದ್ದಾರೆ.</p><p>ಮಾಹಿತಿ ತಿಳಿದ ನಂತರ, ಸ್ಥಳೀಯ ಅಗ್ನಿಶಾಮಕ ದಳ ಮತ್ತು ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶದ ತಂಡವು ಸ್ಥಳಕ್ಕೆ ಧಾವಿಸಿ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಬೆಂಕಿಯನ್ನು ನಂದಿಸಿತು ಎಂದು ಅವರು ಮಾಹಿತಿ ನೀಡಿದ್ದಾರೆ.</p> .ಸಿಂಗಪುರ ಹಡಗಿಗೆ ಬೆಂಕಿ: ಇಬ್ಬರು ನೌಕಾ ಸಿಬ್ಬಂದಿ ಸ್ಥಿತಿ ಗಂಭೀರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>