ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ರುಚಿಯಾದ ಅಡುಗೆ ಮಾಡಿಲ್ಲವೆಂದು ತಾಯಿಯನ್ನೇ ಕೊಂದ ಮಗ

ಊಟದ ವಿಚಾರವಾಗಿ ತಾಯಿ ಮಗನ ನಡುವೆ ಗಲಾಟೆ–ಕೊಲೆಯಲ್ಲಿ ಅಂತ್ಯ– ಮಹಾರಾಷ್ಟ್ರದ ಠಾಣೆಯಲ್ಲಿ ಘಟನೆ
Published 28 ನವೆಂಬರ್ 2023, 5:20 IST
Last Updated 28 ನವೆಂಬರ್ 2023, 5:20 IST
ಅಕ್ಷರ ಗಾತ್ರ

ಠಾಣೆ(ಮಹಾರಾಷ್ಟ್ರ): ತಾಯಿಯ ತ್ಯಾಗಕ್ಕೆ, ಪ್ರೀತಿಗೆ ಸರಿಸಾಟಿಯಿಲ್ಲ ಎಂಬ ಮಾತಿದೆ. ಆದರೆ ಇಲ್ಲೊಬ್ಬ ಮಗ ಅಡುಗೆ ವಿಚಾರವಾಗಿ ತನ್ನ ತಾಯಿಯನ್ನೇ ಕುಡಗೋಲಿನಿಂದ ಹಲ್ಲೆ ಮಾಡಿ ಕೊಲೆಗೈದ ಘಟನೆ ಮಹಾರಾಷ್ಟ್ರದ ಠಾಣೆಯಲ್ಲಿ ನಡೆದಿದೆ.

ಮುರ್ಬಾದ್ ತಾಲೂಕಿನ ವೇಲು ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಮನೆಯ ವಿಚಾರವಾಗಿ ತಾಯಿ ಮತ್ತು ಮಗನ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಭಾನುವಾರ ಕೂಡ ಜಗಳ ನಡೆದಿದೆ.

'ರುಚಿಯಾದ ಅಡುಗೆ ಮಾಡಿ ಬಡಿಸಿಲ್ಲವೆಂದು ‌ಆರೋಪಿ ಕೋಪದ ಭರದಲ್ಲಿ ತಾಯಿಯ ಕುತ್ತಿಗೆಯ ಮೇಲೆ ಕುಡಗೋಲಿನಿಂದ ಹಲ್ಲೆ ಮಾಡಿದ್ದಾನೆ. ಇದರಿಂದ ತೀವ್ರ ಗಾಯಗೊಂಡ ಆಕೆ ಕುಸಿದು ಸಾವನ್ನಪ್ಪಿದ್ದಾಳೆ' ಎಂದು ಠಾಣೆ ಗ್ರಾಮಾಂತರ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅಕ್ಕಪಕ್ಕ ಮನೆಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಘಟನೆಯ ಬಳಿಕ ಆರೋಪಿ ನಿದ್ದೆ ಮಾತ್ರೆಗಳನ್ನು ಸೇವಿದ್ದು, ‌ಸಂಬಂಧಿಕರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತನನ್ನು ‌ಇನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಸೋಮವಾರ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT