ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾಪ್ರಭುತ್ವ ಉಳಿಸಿದ ಸುಪ್ರೀಂ ಕೋರ್ಟ್‌ಗೆ ಧನ್ಯವಾದ: ಅರವಿಂದ ಕೇಜ್ರಿವಾಲ್

ಚಂಡೀಗಢ ಮೇಯರ್ ಚುನಾವಣೆ
Published 20 ಫೆಬ್ರುವರಿ 2024, 14:09 IST
Last Updated 20 ಫೆಬ್ರುವರಿ 2024, 14:09 IST
ಅಕ್ಷರ ಗಾತ್ರ

ನವದೆಹಲಿ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಕೌನ್ಸಿಲರ್ ಕುಲದೀಪ್ ಕುಮಾರ್ ಅವರನ್ನು ವಿಜಯಿ ಎಂದು ಸುಪ್ರೀಂ ಕೋರ್ಟ್ ಘೋಷಿಸಿದ್ದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಕಷ್ಟದ ಸಮಯದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಹೇಳಿದ್ದಾರೆ.

ಚಂಡೀಗಢ ಮೇಯರ್ ಚುನಾವಣೆಯಲ್ಲಿ 8 ಮತಗಳ ಅನರ್ಹತೆಯಿಂದ ಪರಾಭವಗೊಂಡಿದ್ದ ಎಎಪಿಯ ಕುಲದೀಪ್ ಕುಮಾರ್ ಅವರನ್ನು ಮೇಯರ್ ಎಂದು ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ಘೋಷಿಸಿದೆ. ಜತೆಗೆ ಚುನಾವಣೆಯಲ್ಲಿ ಅಕ್ರಮ ಎಸಗಿದ ಚುನಾವಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಆದೇಶಿಸಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾ. ಜೆ.ಬಿ.ಪರದಿವಾಲಾ ಹಾಗೂ ನ್ಯಾ. ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದರು.

ಕುಲದೀಪ್ ಕುಮಾರ್ ಪರವಾಗಿ ಚಲಾವಣೆಯಾಗಿದ್ದ ಎಂಟು ಮತಗಳನ್ನು ಚುನಾವಣಾಧಿಕಾರಿ ಉದ್ದೇಶಪೂರ್ವಕವಾಗಿ ವಿರೂಪಗೊಳಿಸಿ ಅಸಿಂಧುಗೊಳಿಸಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿ ಅನಿಲ್ ಮಾಸಿ ಅವರೇ ಅಕ್ರಮ ಎಸಗಿದ್ದಾರೆ ಎಂದು ಮನೋಜ್ ಆರೋಪಿಸಿದ್ದರು.

ಜ. 30ರಂದು ನಡೆದಿದ್ದ ಚಂಡೀಗಢ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಜಯಸಾಧಿಸಿತ್ತು. ಇದರಲ್ಲಿ 8 ಮತಗಳು ಅನರ್ಹಗೊಂಡಿದ್ದವು. ಇದರಲ್ಲಿ ಎಎಪಿ–ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕುಲದೀಪ್ ಕುಮಾರ್ ಪರಾಭವಗೊಂಡಿದ್ದ ಬೆನ್ನಲ್ಲೇ, ಮತಪತ್ರಗಳನ್ನು ಅಕ್ರಮವಾಗಿ ವಿರೂಪಗೊಳಿಸಿ ಅಸಿಂಧುಗೊಳಿಸಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

24 ಮತಗಳಲ್ಲಿ 8 ಮತಗಳು ಅನರ್ಹಗೊಂಡಿದ್ದವು. 16 ಮತಗಳಲ್ಲಿ ಮನೋಜನ್ ಸೋನಕರ್ ಅವರು 12 ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT