ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಹ್ವಾನ ಪತ್ರಿಕೆ ಕಳುಹಿಸಿದೆ.
ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಹಾಗೂ ಎಚ್.ಡಿ ದೇವೇಗೌಡ ಅವರಿಗೂ ಆಹ್ವಾನ ನೀಡಲಾಗಿದೆ. ಟ್ರಸ್ಟ್ಗೆ ಸಂಬಂಧಿಸಿದ ನಿಯೋಗಗಳ ಮೂಲಕ ಇವರೆಲ್ಲರಿಗೂ ಆಹ್ವಾನ ಪತ್ರಿಕೆ ತಲುಪಿಸಲಾಗಿದೆ.
ಭವಿಷ್ಯದಲ್ಲಿ ಇನ್ನಷ್ಟು ಪ್ರತಿಪಕ್ಷಗಳ ನಾಯಕರಿಗೆ ಆಹ್ವಾನ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.