<p><strong>ಕೋಲ್ಕತ್ತ:</strong> 'ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಅಳಿಸಿ ಹಾಕಿರುವುದರಿಂದ ಬಿಜೆಪಿಗೆ ಗೆಲುವಾಗಿದೆ' ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಟೀಕಿಸಿದ್ದಾರೆ. </p><p>ಆ ಮೂಲಕ ಬಂಗಾಳದಲ್ಲಿ ಚೊಚ್ಚಲ ಬಾರಿಗೆ ಸರ್ಕಾರ ರಚಿಸಿರುವ ಬಿಜೆಪಿಯ ಗೆಲುವಿನ ಬಗ್ಗೆ ಸಂದೇಹವನ್ನು ವ್ಯಕ್ತಪಡಿಸಿದ್ದಾರೆ. </p><p>'ಸ್ಟ್ಯಾನ್ಫೋರ್ಡ್ ಇಂಡಿಯಾ ಸಮ್ಮೇಳನ'ದಲ್ಲಿ ಬಿಜೆಪಿ ವಿರುದ್ಧ ತೀಕ್ಷ್ಣವಾದ ಪ್ರಶ್ನೆಗಳನ್ನು ಎತ್ತಿರುವ ತರೂರ್, 'ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆಯಲ್ಲಿ (ಎಸ್ಐಆರ್) ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳನ್ನು ಅಳಿಸಿ ಹಾಕಲಾಗಿತ್ತು' ಎಂದು ಉಲ್ಲೇಖಿಸಿದ್ದಾರೆ. </p><p>'ಸುಮಾರು 34 ಲಕ್ಷ ಮಂದಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಮತದಾನದ ವೇಳೆ ಕೆಲವನ್ನು ಮಾತ್ರ ಬಗೆಹರಿಸಲಾಗಿದ್ದು, ಬಹುಪಾಲು ಬಗೆಹರಿಯದೆ ಉಳಿದಿದೆ. ಇದು ಫಲಿತಾಂಶದ ಮೇಲೆ ಪರಿಣಾಮ ಬೀರಿರಬಹುದು' ಎಂದು ಆಪಾದಿಸಿದ್ದಾರೆ. </p><p>'ಅಂಕಿಅಂಶಗಳನ್ನು ಗಮನಿಸಿದರೆ ಬಂಗಾಳದಲ್ಲಿ ಬಿಜೆಪಿ 30 ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಿದೆ. ಇದು ಬಾಕಿ ಇರುವ ಮತದಾರರ ಮೇಲ್ಮನವಿಗಳ ಸಂಖ್ಯೆಗೆ ಹೊಂದಿಕೆಯಾಗುತ್ತವೆ. ಈವಾಗ ನೀವೇ ಹೇಳಿ ಇದು ನ್ಯಾಯಯುತವೇ? ಪ್ರಜಾಸತ್ತಾತ್ಮಕವೇ' ಎಂದು ಪ್ರಶ್ನಿಸಿದ್ದಾರೆ. </p><p>'ಮತ್ತೊಂದೆಡೆ ಕೇರಳದಲ್ಲಿ ಎಸ್ಐಆರ್ ಪ್ರಕ್ರಿಯೆಯಿಂದ ನಕಲಿ ಮತದಾರರನ್ನು ಅಳಿಸಿ ಹಾಕಿದ್ದರಿಂದ ಕಾಂಗ್ರೆಸ್ಗೆ ನೆರವಾಗಿರಬಹುದು' ಎಂದು ತರೂರ್ ಅಂದಾಜಿಸಿದ್ದಾರೆ. </p>.ಫ್ಯಾಕ್ಟ್ಚೆಕ್: ಪಾಕ್ ವಿಚಾರದಲ್ಲಿ ಕೇಂದ್ರದ ವಿರುದ್ಧ ಶಶಿ ತರೂರ್ ಟೀಕಿಸಿಲ್ಲ.ಸುವೇಂದು ಪ್ರಮಾಣ: ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> 'ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಅಳಿಸಿ ಹಾಕಿರುವುದರಿಂದ ಬಿಜೆಪಿಗೆ ಗೆಲುವಾಗಿದೆ' ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಟೀಕಿಸಿದ್ದಾರೆ. </p><p>ಆ ಮೂಲಕ ಬಂಗಾಳದಲ್ಲಿ ಚೊಚ್ಚಲ ಬಾರಿಗೆ ಸರ್ಕಾರ ರಚಿಸಿರುವ ಬಿಜೆಪಿಯ ಗೆಲುವಿನ ಬಗ್ಗೆ ಸಂದೇಹವನ್ನು ವ್ಯಕ್ತಪಡಿಸಿದ್ದಾರೆ. </p><p>'ಸ್ಟ್ಯಾನ್ಫೋರ್ಡ್ ಇಂಡಿಯಾ ಸಮ್ಮೇಳನ'ದಲ್ಲಿ ಬಿಜೆಪಿ ವಿರುದ್ಧ ತೀಕ್ಷ್ಣವಾದ ಪ್ರಶ್ನೆಗಳನ್ನು ಎತ್ತಿರುವ ತರೂರ್, 'ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆಯಲ್ಲಿ (ಎಸ್ಐಆರ್) ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳನ್ನು ಅಳಿಸಿ ಹಾಕಲಾಗಿತ್ತು' ಎಂದು ಉಲ್ಲೇಖಿಸಿದ್ದಾರೆ. </p><p>'ಸುಮಾರು 34 ಲಕ್ಷ ಮಂದಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಮತದಾನದ ವೇಳೆ ಕೆಲವನ್ನು ಮಾತ್ರ ಬಗೆಹರಿಸಲಾಗಿದ್ದು, ಬಹುಪಾಲು ಬಗೆಹರಿಯದೆ ಉಳಿದಿದೆ. ಇದು ಫಲಿತಾಂಶದ ಮೇಲೆ ಪರಿಣಾಮ ಬೀರಿರಬಹುದು' ಎಂದು ಆಪಾದಿಸಿದ್ದಾರೆ. </p><p>'ಅಂಕಿಅಂಶಗಳನ್ನು ಗಮನಿಸಿದರೆ ಬಂಗಾಳದಲ್ಲಿ ಬಿಜೆಪಿ 30 ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಿದೆ. ಇದು ಬಾಕಿ ಇರುವ ಮತದಾರರ ಮೇಲ್ಮನವಿಗಳ ಸಂಖ್ಯೆಗೆ ಹೊಂದಿಕೆಯಾಗುತ್ತವೆ. ಈವಾಗ ನೀವೇ ಹೇಳಿ ಇದು ನ್ಯಾಯಯುತವೇ? ಪ್ರಜಾಸತ್ತಾತ್ಮಕವೇ' ಎಂದು ಪ್ರಶ್ನಿಸಿದ್ದಾರೆ. </p><p>'ಮತ್ತೊಂದೆಡೆ ಕೇರಳದಲ್ಲಿ ಎಸ್ಐಆರ್ ಪ್ರಕ್ರಿಯೆಯಿಂದ ನಕಲಿ ಮತದಾರರನ್ನು ಅಳಿಸಿ ಹಾಕಿದ್ದರಿಂದ ಕಾಂಗ್ರೆಸ್ಗೆ ನೆರವಾಗಿರಬಹುದು' ಎಂದು ತರೂರ್ ಅಂದಾಜಿಸಿದ್ದಾರೆ. </p>.ಫ್ಯಾಕ್ಟ್ಚೆಕ್: ಪಾಕ್ ವಿಚಾರದಲ್ಲಿ ಕೇಂದ್ರದ ವಿರುದ್ಧ ಶಶಿ ತರೂರ್ ಟೀಕಿಸಿಲ್ಲ.ಸುವೇಂದು ಪ್ರಮಾಣ: ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>