<p><strong>ನವದೆಹಲಿ (ಪಿಟಿಐ):</strong> ‘ವಿದೇಶಕ್ಕೆ ಕಳುಹಿಸಲಾದ ಸರ್ಕಾರಿ ನಿಯೋಗದ ಭಾಗವಾಗಿದ್ದ ಸಂಸದ ಶಶಿ ತರೂರ್ ಅವರು, ನಿಯೋಗದ ಸದಸ್ಯರಾಗಿ ಸರ್ಕಾರವನ್ನು ಸಮರ್ಥಿಸಿಕೊಳ್ಳಲೇಬೇಕು’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಪೃಥ್ವಿರಾಜ್ ಚವಾಣ್ ಬುಧವಾರ ಹೇಳಿದರು.</p>.<p>ಈ ಕುರಿತು ಪಿಟಿಐ ಜತೆ ಮಾತನಾಡಿದ ಅವರು, ‘ಶಶಿ ತರೂರ್ ಅವರ ಭವಿಷ್ಯ ಏನಾಗಲಿದೆ’ ಎಂಬ ಪ್ರಶ್ನೆಗೆ ‘ನನಗೆ ತಿಳಿದಿಲ್ಲ ಮತ್ತು ಅದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ’ ಎಂದರು. </p>.<p>ಪಹಲ್ಗಾಮ್ ದಾಳಿ ಮತ್ತು ಆ ಬಳಿಕ ನಡೆದ ‘ಆಪರೇಷನ್ ಸಿಂಧೂರ್’, ಭಾರತ– ಪಾಕಿಸ್ತಾನ ಸಂಘರ್ಷದ ವಿಚಾರದಲ್ಲಿ ತರೂರ್ ಅವರು ಭಾರತ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದರು. ಅಲ್ಲದೆ ಕಾಂಗ್ರೆಸ್ ನಿಲುವಿಗೆ ವಿರುದ್ಧವಾಗಿ ಹೇಳಿಕೆಗಳನ್ನು ನೀಡಿದ್ದರು. ಇದು ಕಾಂಗ್ರೆಸ್ನ ಕೆಲ ನಾಯಕರನ್ನು ಕೆರಳುವಂತೆ ಮಾಡಿತ್ತು. </p>.<p>‘ಸರ್ಕಾರವನ್ನು ಸಮರ್ಥಿಸಿಕೊಳ್ಳುವುದು ನಿಯೋಗದ ಸದಸ್ಯರ ಕೆಲಸವಾಗಿರುತ್ತದೆಯೇ ಹೊರತು, ನಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಪ್ರದರ್ಶಿಸುವುದಲ್ಲ’ ಎಂದು ಚವಾಣ್ ಅವರು ಪ್ರತಿಕ್ರಿಯಿಸಿದರು.</p>.<p>‘ಆಪರೇಷನ್ ಸಿಂಧೂರ್’ ಬಳಿಕ ಭಾರತದ ನಿಲುವನ್ನು ತಿಳಿಸಲು ಅಮೆರಿಕ ಮತ್ತು ಇತರ ನಾಲ್ಕು ದೇಶಗಳಿಗೆ ಕಳುಹಿಸಿದ್ದ ಬಹುಪಕ್ಷಗಳ ಸಂಸದರ ನಿಯೋಗದ ನೇತೃತ್ವವನ್ನು ತರೂರ್ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ‘ವಿದೇಶಕ್ಕೆ ಕಳುಹಿಸಲಾದ ಸರ್ಕಾರಿ ನಿಯೋಗದ ಭಾಗವಾಗಿದ್ದ ಸಂಸದ ಶಶಿ ತರೂರ್ ಅವರು, ನಿಯೋಗದ ಸದಸ್ಯರಾಗಿ ಸರ್ಕಾರವನ್ನು ಸಮರ್ಥಿಸಿಕೊಳ್ಳಲೇಬೇಕು’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಪೃಥ್ವಿರಾಜ್ ಚವಾಣ್ ಬುಧವಾರ ಹೇಳಿದರು.</p>.<p>ಈ ಕುರಿತು ಪಿಟಿಐ ಜತೆ ಮಾತನಾಡಿದ ಅವರು, ‘ಶಶಿ ತರೂರ್ ಅವರ ಭವಿಷ್ಯ ಏನಾಗಲಿದೆ’ ಎಂಬ ಪ್ರಶ್ನೆಗೆ ‘ನನಗೆ ತಿಳಿದಿಲ್ಲ ಮತ್ತು ಅದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ’ ಎಂದರು. </p>.<p>ಪಹಲ್ಗಾಮ್ ದಾಳಿ ಮತ್ತು ಆ ಬಳಿಕ ನಡೆದ ‘ಆಪರೇಷನ್ ಸಿಂಧೂರ್’, ಭಾರತ– ಪಾಕಿಸ್ತಾನ ಸಂಘರ್ಷದ ವಿಚಾರದಲ್ಲಿ ತರೂರ್ ಅವರು ಭಾರತ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದರು. ಅಲ್ಲದೆ ಕಾಂಗ್ರೆಸ್ ನಿಲುವಿಗೆ ವಿರುದ್ಧವಾಗಿ ಹೇಳಿಕೆಗಳನ್ನು ನೀಡಿದ್ದರು. ಇದು ಕಾಂಗ್ರೆಸ್ನ ಕೆಲ ನಾಯಕರನ್ನು ಕೆರಳುವಂತೆ ಮಾಡಿತ್ತು. </p>.<p>‘ಸರ್ಕಾರವನ್ನು ಸಮರ್ಥಿಸಿಕೊಳ್ಳುವುದು ನಿಯೋಗದ ಸದಸ್ಯರ ಕೆಲಸವಾಗಿರುತ್ತದೆಯೇ ಹೊರತು, ನಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಪ್ರದರ್ಶಿಸುವುದಲ್ಲ’ ಎಂದು ಚವಾಣ್ ಅವರು ಪ್ರತಿಕ್ರಿಯಿಸಿದರು.</p>.<p>‘ಆಪರೇಷನ್ ಸಿಂಧೂರ್’ ಬಳಿಕ ಭಾರತದ ನಿಲುವನ್ನು ತಿಳಿಸಲು ಅಮೆರಿಕ ಮತ್ತು ಇತರ ನಾಲ್ಕು ದೇಶಗಳಿಗೆ ಕಳುಹಿಸಿದ್ದ ಬಹುಪಕ್ಷಗಳ ಸಂಸದರ ನಿಯೋಗದ ನೇತೃತ್ವವನ್ನು ತರೂರ್ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>