ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಕೇಂದ್ರ ಸರ್ಕಾರ ಬದ್ಧಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಈ ಬಗ್ಗೆ ಮಾತನಾಡಿದಅವರು, ‘ನೆರೆ ರಾಷ್ಟ್ರಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಯಾವುದೇ ಮಟ್ಟದ ವಿರೋಧ ವ್ಯಕ್ತವಾದರೂ, ಈ ಕಾಯ್ದೆಯನ್ನು ತಡೆಯಲು ಸಾಧ್ಯವಿಲ್ಲ’ಎಂದು ಸ್ಪಷ್ಟಪಡಿಸಿದ್ದಾರೆ.
Home Minister Amit Shah in Delhi on #CitizenshipAmendmentAct: Aapko jo rajnitik virodh karna hai wo karo, Bharatiya Janata Party ki Modi sarkar firm hai. Ye sabhi sharanarthiyo ko nagrikata milegi, vo Bharat ke nagrik banenge aur samman ke sath duniya me rahenge. pic.twitter.com/JKyTbDMx4K
'ವಿರೋಧ ಪಕ್ಷಗಳು ದೇಶದ ಜನರನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿವೆ. ಇಲ್ಲಿನ ಅಲ್ಪಸಂಖ್ಯಾತರ ಪೌರತ್ವ ಕಸಿದುಕೊಳ್ಳುವ ಪ್ರಶ್ನೆಯೇ ಉದ್ಬವಿಸುವುದಿಲ್ಲ,'ಎಂದು ಶಾ ತಿಳಿಸಿದ್ದಾರೆ.
‘ಪೌರತ್ವ ತಿದ್ದುಪಡಿ ಕಾಯ್ದೆಯ ಅಂಶಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಈ ಕಾಯ್ದೆಯಿಂದ ಜನರಿಗೆ ಯಾವುದೇ ರೀತಿಯ ಅನ್ಯಾಯ ಆಗುವುದಿಲ್ಲ. ನಾವು ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.