ದೆಹಲಿ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪ:
ಎಎಪಿ ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸ ನವೀಕರಣ ಕುರಿತು ಸಿಎಜಿಯಿಂದ ವಿಶೇಷ ಪರಿಶೋಧನೆಗೆ ಶಿಫಾರಸು ಮಾಡಿರುವುದು ಬಿಜೆಪಿಯ ಹತಾಶೆ ಹಾಗೂ ಸರ್ವಾಧಿಕಾರ ಪ್ರವೃತ್ತಿಯನ್ನು ತೋರಿಸುತ್ತದೆ’ ಎಂದು ಎಎಪಿ ಟೀಕಿಸಿದೆ. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಎಎಪಿ ‘ಕಳೆದ ವರ್ಷವೇ ಸಿಎಜಿ ಲೆಕ್ಕಪರಿಶೋಧನೆ ನಡೆಸಿದ್ದು ಅವ್ಯವಹಾರ ಕುರಿತು ಯಾವುದೇ ಸಾಕ್ಷ್ಯಗಳು ಸಿಕ್ಕಿರಲಿಲ್ಲ’ ಎಂದಿದೆ. ‘ಈಗ ಮತ್ತೊಮ್ಮೆ ಲೆಕ್ಕಪರಿಶೋಧನೆ ನಡೆಸುವುದು ಚುನಾಯಿತ ಸರ್ಕಾರದ ವ್ಯವಹಾರಗಳಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಿದಂತೆ. ಸಾಂವಿಧಾನಿಕ ತತ್ವಗಳ ಉಲ್ಲಂಘನೆಯೂ ಆಗುತ್ತದೆ’ ಎಂದು ಹೇಳಿದೆ.