ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಕೇಜ್ರಿವಾಲ್‌ ನಿವಾಸ ನವೀಕರಣದಲ್ಲಿ ಅವ್ಯವಹಾರ ಆರೋಪ: ಸಿಎಜಿಯಿಂದ ವಿಶೇಷ ಪರಿಶೋಧನೆ

ಮುಖ್ಯಮಂತ್ರಿ ಕೇಜ್ರಿವಾಲ್‌ ಅಧಿಕೃತ ನಿವಾಸ ನವೀಕರಣದಲ್ಲಿ ಅವ್ಯವಹಾರ ಆರೋಪ
Published : 27 ಜೂನ್ 2023, 15:52 IST
Last Updated : 27 ಜೂನ್ 2023, 15:52 IST
ಫಾಲೋ ಮಾಡಿ
Comments
ದೆಹಲಿ ಹಾಗೂ ನಂತರ ನಡೆದ ವಿಧಾನಸಭಾ ಚುನಾವಣೆಗಳಲ್ಲಿನ ಸೋಲಿನಿಂದ ಬಿಜೆಪಿ ಕಂಗೆಟ್ಟಿದೆ. ಕೇಜ್ರಿವಾಲ್‌ ನೇತೃತ್ವದ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದೆ
– ಎಎಪಿ
ದೆಹಲಿ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪ:
ಎಎಪಿ ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಅಧಿಕೃತ ನಿವಾಸ ನವೀಕರಣ ಕುರಿತು ಸಿಎಜಿಯಿಂದ ವಿಶೇಷ ಪರಿಶೋಧನೆಗೆ ಶಿಫಾರಸು ಮಾಡಿರುವುದು ಬಿಜೆಪಿಯ ಹತಾಶೆ ಹಾಗೂ ಸರ್ವಾಧಿಕಾರ ಪ್ರವೃತ್ತಿಯನ್ನು ತೋರಿಸುತ್ತದೆ’ ಎಂದು ಎಎಪಿ ಟೀಕಿಸಿದೆ. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಎಎಪಿ ‘ಕಳೆದ ವರ್ಷವೇ ಸಿಎಜಿ ಲೆಕ್ಕಪರಿಶೋಧನೆ ನಡೆಸಿದ್ದು ಅವ್ಯವಹಾರ ಕುರಿತು ಯಾವುದೇ ಸಾಕ್ಷ್ಯಗಳು ಸಿಕ್ಕಿರಲಿಲ್ಲ’ ಎಂದಿದೆ. ‘ಈಗ ಮತ್ತೊಮ್ಮೆ ಲೆಕ್ಕಪರಿಶೋಧನೆ ನಡೆಸುವುದು ಚುನಾಯಿತ ಸರ್ಕಾರದ ವ್ಯವಹಾರಗಳಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಿದಂತೆ. ಸಾಂವಿಧಾನಿಕ ತತ್ವಗಳ ಉಲ್ಲಂಘನೆಯೂ ಆಗುತ್ತದೆ’ ಎಂದು ಹೇಳಿದೆ.
ಸಮಗ್ರ ತನಿಖೆ ಅಗತ್ಯ:
ಕಾಂಗ್ರೆಸ್‌ ನಾಯಕ ಮಾಕೆನ್ ನವದೆಹಲಿ (ಪಿಟಿಐ): ‘ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅಧಿಕೃತ ನಿವಾಸದ ನವೀಕರಣಕ್ಕೆ ₹ 171 ಕೋಟಿ ಖರ್ಚು ಮಾಡಲಾಗಿದೆ. ಈ ಬಗ್ಗೆ ಸಮಗ್ರವಾದ ಕ್ರಿಮಿನಲ್ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಅಜಯ್ ಮಾಕೆನ್ ಮಂಗಳವಾರ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು ‘ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿರುವ ಕುರಿತು ಸಿಎಜಿಯಿಂದ ವಿಶೇಷ ಪರಿಶೋಧನೆ ನಡೆಸುತ್ತಿರುವುದು ಸ್ವಾಗತಾರ್ಹ’ ಎಂದಿದ್ದಾರೆ. ‘ಮಾರ್ಬಲ್‌ಗಳನ್ನು ಆಮದು ಮಾಡಿಕೊಳ್ಳಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಪರದೆಗಳು ಅಡುಗೆ ಮನೆ ಉಪಕರಣಗಳನ್ನು ಖರೀದಿಸಲಾಗಿದೆ. ಬ್ರಿಟಿಷ್‌ ಕಾಲದ ಪಾರಂಪರಿಕ ಕಟ್ಟಡವನ್ನು ಕೆಡವಿ ಮರಗಳನ್ನು ನಾಶ ಮಾಡಿ ಹೊಸ ನಿವಾಸ ನಿರ್ಮಿಸಲಾಗಿದ್ದು ಆ ಮೂಲಕ ಜನರ ಹಣವನ್ನು ದುರ್ಬಳಕೆ ಮಾಡಲಾಗಿದೆ’ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT