ಮುಂಬೈ: ಭಾರತದ ಪಶ್ಚಿಮ ಕರಾವಳಿ ಭಾಗದಲ್ಲಿ ತೀವ್ರ ಹಾನಿ ಮಾಡುತ್ತಿರುವ ತೌತೆ ಚಂಡಮಾರುತದಿಂದ ಮಹಾರಾಷ್ಟ್ರದಲ್ಲಿ ಈವರೆಗೂ 11 ಮಂದಿ ಸಾವಿಗೀಡಾಗಿದ್ದಾರೆ.
ವಾಣಿಜ್ಯ ನಗರಿ ಮುಂಬೈ, ಫಾಲ್ಘರ್, ಠಾಣೆ, ರತ್ನಗಿರಿ ಹಾಗೂ ಸಿಂಧುದುರ್ಗ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಹಲವು ಭಾಗಗಳಲ್ಲಿ ಬೆಳೆಗಳಿಗೆ ತೀವ್ರ ಹಾನಿಯಾಗಿದೆ.
ಅರಬ್ಬಿ ಸಮುದ್ರದ ಅಲೆಗಳ ರಭಸದಿಂದಾಗಿ ಹಲವು ಹಡಗುಗಳಿಗೆ ಹಾನಿಯಾಗಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿವೆ, ತಂತಿಗಳು ತುಂಡರಿಸಿ ಬಿದ್ದಿವೆ. ಇದರಿಂದಾಗಿ ವಿದ್ಯುತ್ ಸಂಪರ್ಕ ಹಾಗೂ ನೀರಿನ ಪೂರೈಕೆ, ಇಂಟರ್ನೆಟ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.
ವರದಿಗಳ ಪ್ರಕಾರ, 46 ಲಕ್ಷಕ್ಕೂ ಹೆಚ್ಚು ಜನರು ವಿದ್ಯುತ್ ಸಂಪರ್ಕ ವ್ಯತ್ಯಯ ಅನುಭವಿಸಿದ್ದಾರೆ.