<p><strong>ನವದೆಹಲಿ</strong>: ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ‘ಫ್ಯಾಕ್ಟ್ ಚೆಕಿಂಗ್ ಘಟಕ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ನಡೆಗೆ ಭಾರತೀಯ ಸಂಪಾದಕರ ಒಕ್ಕೂಟ (ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ) ಭಾನುವಾರ ಕಳವಳ ವ್ಯಕ್ತಪಡಿಸಿದೆ.</p>.<p>‘ಕರ್ನಾಟಕ ಸರ್ಕಾರದ ಇಂಥ ಕ್ರಮವು ಭಿನ್ನ ಧ್ವನಿಗಳನ್ನು ಹತ್ತಿಕ್ಕುವುದಕ್ಕೆ ಕಾರಣವಾಗಲಿದೆ’ ಎಂದು ಒಕ್ಕೂಟದ ಅಧ್ಯಕ್ಷೆ ಸೀಮಾ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಅನಂತನಾಥ್ ಹಾಗೂ ಖಜಾಂಚಿ ಶ್ರೀರಾಮ್ ಪವಾರ್ ಹೇಳಿದ್ದಾರೆ.</p>.<p>‘ಈ ಉದ್ದೇಶಿತ ಫ್ಯಾಕ್ಟ್ ಚೆಕಿಂಗ್ ಘಟಕದ ವ್ಯಾಪ್ತಿ ಮತ್ತು ಅಧಿಕಾರಗಳು ಹಾಗೂ ಈ ಘಟಕ ಯಾವ ವಿಧಾನದಡಿ ಕಾರ್ಯ ನಿರ್ವಹಿಸಲಿದೆ ಎಂಬ ಬಗ್ಗೆ ಸರ್ಕಾರ ಸ್ಪಷ್ಟಪಡಿಸಬೇಕು’ ಎಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.</p>.<p>ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗಳನ್ನು ಉಲ್ಲೇಖಿಸಿರುವ ಅವರು, ‘ಈ ಘಟಕಕ್ಕೆ ಸಂಬಂಧಿಸಿದ ಚೌಕಟ್ಟು ರಚನೆಗೂ ಮುನ್ನ ಪತ್ರಿಕಾ ಸಂಘಟನೆಗಳೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ‘ಫ್ಯಾಕ್ಟ್ ಚೆಕಿಂಗ್ ಘಟಕ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ನಡೆಗೆ ಭಾರತೀಯ ಸಂಪಾದಕರ ಒಕ್ಕೂಟ (ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ) ಭಾನುವಾರ ಕಳವಳ ವ್ಯಕ್ತಪಡಿಸಿದೆ.</p>.<p>‘ಕರ್ನಾಟಕ ಸರ್ಕಾರದ ಇಂಥ ಕ್ರಮವು ಭಿನ್ನ ಧ್ವನಿಗಳನ್ನು ಹತ್ತಿಕ್ಕುವುದಕ್ಕೆ ಕಾರಣವಾಗಲಿದೆ’ ಎಂದು ಒಕ್ಕೂಟದ ಅಧ್ಯಕ್ಷೆ ಸೀಮಾ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಅನಂತನಾಥ್ ಹಾಗೂ ಖಜಾಂಚಿ ಶ್ರೀರಾಮ್ ಪವಾರ್ ಹೇಳಿದ್ದಾರೆ.</p>.<p>‘ಈ ಉದ್ದೇಶಿತ ಫ್ಯಾಕ್ಟ್ ಚೆಕಿಂಗ್ ಘಟಕದ ವ್ಯಾಪ್ತಿ ಮತ್ತು ಅಧಿಕಾರಗಳು ಹಾಗೂ ಈ ಘಟಕ ಯಾವ ವಿಧಾನದಡಿ ಕಾರ್ಯ ನಿರ್ವಹಿಸಲಿದೆ ಎಂಬ ಬಗ್ಗೆ ಸರ್ಕಾರ ಸ್ಪಷ್ಟಪಡಿಸಬೇಕು’ ಎಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.</p>.<p>ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗಳನ್ನು ಉಲ್ಲೇಖಿಸಿರುವ ಅವರು, ‘ಈ ಘಟಕಕ್ಕೆ ಸಂಬಂಧಿಸಿದ ಚೌಕಟ್ಟು ರಚನೆಗೂ ಮುನ್ನ ಪತ್ರಿಕಾ ಸಂಘಟನೆಗಳೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>