ನವದಹೆಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ಸಂಸದ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದೆ.
ಈ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರ ಸಿಬ್ಬಂದಿ ಮತ್ತು ಅವರೊಂದಿಗೆ ಸಂಬಂಧ ಹೊಂದಿರುವವರನ್ನು ಈ ಹಿಂದೆ ಇಡಿ ವಿಚಾರಣೆ ನಡೆಸಿತ್ತು.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ಆಲಿಸುವ ನಿರೀಕ್ಷೆಯಿದೆ. ಈ ನಡುವೆ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.