<p><strong>ನವದೆಹಲಿ</strong>: ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಉಕ್ಕಿ ಹರಿಯುತ್ತಿರುವ ನದಿ, ಕೆರೆಕಟ್ಟೆಗಳು, ಭೂಕುಸಿತ, ತಗ್ಗುಪ್ರದೇಶಗಳ ಮುಳುಗಡೆ ಮುಂತಾದ ಮಳೆ ಸಂಬಂಧಿತ ಸಂಕಷ್ಟಕ್ಕೆ ಜನ ಸಿಲುಕಿದ್ದಾರೆ.</p><p> ಈ ನಡುವೆ, 22 ರಾಜ್ಯಗಳಿಗೆ ₹7,532 ಕೋಟಿ ಮೊತ್ತದ ರಾಜ್ಯ ವಿಕೋಪ ಸ್ಪಂದನೆ ನಿಧಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.</p>. <p>ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ₹1,420 ಕೋಟಿ ನೀಡಲಾಗಿದೆ. ಕರ್ನಾಟಕಕ್ಕೆ ₹348 ಕೋಟಿ, ಉತ್ತರ ಪ್ರದೇಶಕ್ಕೆ ₹812 ಕೋಟಿ, ಒಡಿಶಾಕ್ಕೆ ₹707 ಕೋಟಿ, ಬಿಹಾರಕ್ಕೆ ₹624 ಕೋಟಿ ನೀಡಲಾಗಿದೆ. </p><p>'ಮಳೆಯಿಂದ ದೇಶ ತತ್ತರಿಸುತ್ತಿರುವ ಹಿನ್ನೆಲೆಯಲ್ಲಿ ಕಳೆದ ವರ್ಷದ ಹಣಕಾಸು ವರ್ಷದಲ್ಲಿ ಬಿಡುಗಡೆಯಾದ ಹಣ ಬಳಕೆಯ ಪ್ರಮಾಣಪತ್ರಕ್ಕೆ ಕಾಯದೇ ಮಾರ್ಗಸೂಚಿಗಳಲ್ಲಿ ವಿನಾಯಿತಿ ನೀಡಿ ಕೂಡಲೇ ಹಣ ಬಿಡುಗಡೆ ಮಾಡಲಾಗಿದೆ’ಎಂದು ಹಣಕಾಸು ಸಚಿವಾಲಯ ತಿಳಿಸಿದೆ.</p><p>ವಿಪತ್ತು ನಿರ್ವಹಣಾ ಕಾಯ್ದೆ, 2005ರ ಸೆಕ್ಷನ್ 48(1)(ಎ) ಅಡಿಯಲ್ಲಿ ಪ್ರತಿ ರಾಜ್ಯದಲ್ಲಿ ರಾಜ್ಯ ವಿಕೋಪ ಸ್ಪಂದನೆ ನಿಧಿ ಸ್ಥಾಪಿಸಲಾಗಿದೆ. ವಿಪತ್ತುಗಳ ಸಂದರ್ಭದಲ್ಲಿ ರಾಜ್ಯ ಸರ್ಕಾರಗಳು ಈ ಹಣವನ್ನು ಬಳಸಬಹುದಾಗಿದೆ. ಈಶಾನ್ಯ ಮತ್ತು ಹಿಮಾಲಯದ ತಪ್ಪಲಿನ ರಾಜ್ಯಗಳ ಎಸ್ಡಿಆರ್ಎಫ್ ನಿಧಿಗೆ ಕೇಂದ್ರ ಶೇ.90ರಷ್ಟು ಹಣ ಒದಗಿಸಿದರೆ, ಇತರೆ ರಾಜ್ಯಗಳಿಗೆ ಶೇ.75ರಷ್ಟು ನಿಧಿಯನ್ನು ಕೇಂದ್ರ ಸರ್ಕಾರ ನೀಡುತ್ತದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಉಕ್ಕಿ ಹರಿಯುತ್ತಿರುವ ನದಿ, ಕೆರೆಕಟ್ಟೆಗಳು, ಭೂಕುಸಿತ, ತಗ್ಗುಪ್ರದೇಶಗಳ ಮುಳುಗಡೆ ಮುಂತಾದ ಮಳೆ ಸಂಬಂಧಿತ ಸಂಕಷ್ಟಕ್ಕೆ ಜನ ಸಿಲುಕಿದ್ದಾರೆ.</p><p> ಈ ನಡುವೆ, 22 ರಾಜ್ಯಗಳಿಗೆ ₹7,532 ಕೋಟಿ ಮೊತ್ತದ ರಾಜ್ಯ ವಿಕೋಪ ಸ್ಪಂದನೆ ನಿಧಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.</p>. <p>ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ₹1,420 ಕೋಟಿ ನೀಡಲಾಗಿದೆ. ಕರ್ನಾಟಕಕ್ಕೆ ₹348 ಕೋಟಿ, ಉತ್ತರ ಪ್ರದೇಶಕ್ಕೆ ₹812 ಕೋಟಿ, ಒಡಿಶಾಕ್ಕೆ ₹707 ಕೋಟಿ, ಬಿಹಾರಕ್ಕೆ ₹624 ಕೋಟಿ ನೀಡಲಾಗಿದೆ. </p><p>'ಮಳೆಯಿಂದ ದೇಶ ತತ್ತರಿಸುತ್ತಿರುವ ಹಿನ್ನೆಲೆಯಲ್ಲಿ ಕಳೆದ ವರ್ಷದ ಹಣಕಾಸು ವರ್ಷದಲ್ಲಿ ಬಿಡುಗಡೆಯಾದ ಹಣ ಬಳಕೆಯ ಪ್ರಮಾಣಪತ್ರಕ್ಕೆ ಕಾಯದೇ ಮಾರ್ಗಸೂಚಿಗಳಲ್ಲಿ ವಿನಾಯಿತಿ ನೀಡಿ ಕೂಡಲೇ ಹಣ ಬಿಡುಗಡೆ ಮಾಡಲಾಗಿದೆ’ಎಂದು ಹಣಕಾಸು ಸಚಿವಾಲಯ ತಿಳಿಸಿದೆ.</p><p>ವಿಪತ್ತು ನಿರ್ವಹಣಾ ಕಾಯ್ದೆ, 2005ರ ಸೆಕ್ಷನ್ 48(1)(ಎ) ಅಡಿಯಲ್ಲಿ ಪ್ರತಿ ರಾಜ್ಯದಲ್ಲಿ ರಾಜ್ಯ ವಿಕೋಪ ಸ್ಪಂದನೆ ನಿಧಿ ಸ್ಥಾಪಿಸಲಾಗಿದೆ. ವಿಪತ್ತುಗಳ ಸಂದರ್ಭದಲ್ಲಿ ರಾಜ್ಯ ಸರ್ಕಾರಗಳು ಈ ಹಣವನ್ನು ಬಳಸಬಹುದಾಗಿದೆ. ಈಶಾನ್ಯ ಮತ್ತು ಹಿಮಾಲಯದ ತಪ್ಪಲಿನ ರಾಜ್ಯಗಳ ಎಸ್ಡಿಆರ್ಎಫ್ ನಿಧಿಗೆ ಕೇಂದ್ರ ಶೇ.90ರಷ್ಟು ಹಣ ಒದಗಿಸಿದರೆ, ಇತರೆ ರಾಜ್ಯಗಳಿಗೆ ಶೇ.75ರಷ್ಟು ನಿಧಿಯನ್ನು ಕೇಂದ್ರ ಸರ್ಕಾರ ನೀಡುತ್ತದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>