<p>ಅಯೋಧ್ಯೆ: ಇಲ್ಲಿನ ರಾಮ ಮಂದಿರದ ಗರ್ಭಗುಡಿಯೊಳಗೆ ಶ್ರೀರಾಮನ ಮೂರ್ತಿಯನ್ನು ತರಲಾಯಿತು. ಬುಧವಾರ ರಾತ್ರಿ ಕ್ರೇನ್ ಮೂಲಕ ಮೂರ್ತಿಯನ್ನು ಗರ್ಭಗುಡಿಯೊಳಗೆ ತರಲಾಯಿತು.</p><p>ಈ ವೇಳೆ ವಿಶೇಷ ಪೂಜೆಗಳು ಜರುಗಿದವು ಎಂದು ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.</p>.ಅಯೋಧ್ಯೆ | ಧಾರ್ಮಿಕ ಆಚರಣೆ ರಾಮ ಮಂದಿರ ಸಂಕೀರ್ಣಕ್ಕೆ ಸ್ಥಳಾಂತರ.<p>ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಕಪ್ಪು ಶಿಲೆಯ ಮೂರ್ತಿಯನ್ನು ಗರ್ಭಗುಡಿಯೊಳಗೆ ತರಲಾಯಿತು. 150–200 ಕೆ.ಜಿ ತೂಗುವ ಈ ಮೂರ್ತಿಯನ್ನು ಹೂವುಗಳಿಂದ ಅಲಂಕರಿಸಿದ ಟ್ರಕ್ ಮೂಲಕ ಮೆರವಣಿಗೆಯಲ್ಲಿ ದೇಗುಲದ ಆವರಣಕ್ಕೆ ತರಲಾಯಿತು. ದಾರಿ ಮಧ್ಯೆ ಹನುಮಾನ್ಗಡಿಯಲ್ಲಿ ಕೆಲ ಹೊತ್ತು ತಂಗಿ, ಮೆರವಣಿಗೆ ಮುಂದುವರಿಯಿತು.</p><p>ಇಂದು (ಗುರುವಾರ) ಮೂರ್ತಿಯ ಪ್ರತಿಷ್ಠಾಪನೆ ನಡೆಯುವ ಸಂಭವವಿದೆ ಎಂದು ಮಂದಿರ ನಿರ್ಮಾಣ ಸಮಿತಿಯ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.</p>.ರಾಮ ಮಂದಿರ ನಿರ್ಮಾಣ ಪೂರ್ಣ: ವಿವಾದಕ್ಕೆ ತೆರೆ ಎಳೆದ ಸಮಿತಿ ಮುಖ್ಯಸ್ಥ ನೃಪೇಂದ್ರ.<p>ಜ.22 ರಂದು ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಜ.23 ರಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ.</p><p>ಜ.22 ರಂದು ಮಧ್ಯಾಹ್ನ 12.20ರ ವೇಳೆಗೆ ಪ್ರಾಣ ಪ್ರತಿಷ್ಠಾಪನೆಯ ವಿಧಿ ವಿಧಾನಗಳು ಪ್ರಾರಂಭವಾಗಲಿದ್ದು, ಸುಮಾರು 1ಗಂಟೆವರೆಗೂ ನಡೆಯಲಿದೆ.</p> .ಶಿಡ್ಲಘಟ್ಟ | ರಾಮ ಮಂದಿರ ಆವರಣದಲ್ಲಿ ವಾಲ್ಮೀಕಿ ದೇಗುಲ ನಿರ್ಮಾಣಕ್ಕೆ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಯೋಧ್ಯೆ: ಇಲ್ಲಿನ ರಾಮ ಮಂದಿರದ ಗರ್ಭಗುಡಿಯೊಳಗೆ ಶ್ರೀರಾಮನ ಮೂರ್ತಿಯನ್ನು ತರಲಾಯಿತು. ಬುಧವಾರ ರಾತ್ರಿ ಕ್ರೇನ್ ಮೂಲಕ ಮೂರ್ತಿಯನ್ನು ಗರ್ಭಗುಡಿಯೊಳಗೆ ತರಲಾಯಿತು.</p><p>ಈ ವೇಳೆ ವಿಶೇಷ ಪೂಜೆಗಳು ಜರುಗಿದವು ಎಂದು ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.</p>.ಅಯೋಧ್ಯೆ | ಧಾರ್ಮಿಕ ಆಚರಣೆ ರಾಮ ಮಂದಿರ ಸಂಕೀರ್ಣಕ್ಕೆ ಸ್ಥಳಾಂತರ.<p>ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಕಪ್ಪು ಶಿಲೆಯ ಮೂರ್ತಿಯನ್ನು ಗರ್ಭಗುಡಿಯೊಳಗೆ ತರಲಾಯಿತು. 150–200 ಕೆ.ಜಿ ತೂಗುವ ಈ ಮೂರ್ತಿಯನ್ನು ಹೂವುಗಳಿಂದ ಅಲಂಕರಿಸಿದ ಟ್ರಕ್ ಮೂಲಕ ಮೆರವಣಿಗೆಯಲ್ಲಿ ದೇಗುಲದ ಆವರಣಕ್ಕೆ ತರಲಾಯಿತು. ದಾರಿ ಮಧ್ಯೆ ಹನುಮಾನ್ಗಡಿಯಲ್ಲಿ ಕೆಲ ಹೊತ್ತು ತಂಗಿ, ಮೆರವಣಿಗೆ ಮುಂದುವರಿಯಿತು.</p><p>ಇಂದು (ಗುರುವಾರ) ಮೂರ್ತಿಯ ಪ್ರತಿಷ್ಠಾಪನೆ ನಡೆಯುವ ಸಂಭವವಿದೆ ಎಂದು ಮಂದಿರ ನಿರ್ಮಾಣ ಸಮಿತಿಯ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.</p>.ರಾಮ ಮಂದಿರ ನಿರ್ಮಾಣ ಪೂರ್ಣ: ವಿವಾದಕ್ಕೆ ತೆರೆ ಎಳೆದ ಸಮಿತಿ ಮುಖ್ಯಸ್ಥ ನೃಪೇಂದ್ರ.<p>ಜ.22 ರಂದು ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಜ.23 ರಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ.</p><p>ಜ.22 ರಂದು ಮಧ್ಯಾಹ್ನ 12.20ರ ವೇಳೆಗೆ ಪ್ರಾಣ ಪ್ರತಿಷ್ಠಾಪನೆಯ ವಿಧಿ ವಿಧಾನಗಳು ಪ್ರಾರಂಭವಾಗಲಿದ್ದು, ಸುಮಾರು 1ಗಂಟೆವರೆಗೂ ನಡೆಯಲಿದೆ.</p> .ಶಿಡ್ಲಘಟ್ಟ | ರಾಮ ಮಂದಿರ ಆವರಣದಲ್ಲಿ ವಾಲ್ಮೀಕಿ ದೇಗುಲ ನಿರ್ಮಾಣಕ್ಕೆ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>