ನವದೆಹಲಿ: ಒಡಿಶಾ ರೈಲು ದುರಂತವನ್ನು ಸಿಬಿಐ ತನಿಖೆಗೆ ವಹಿಸುವಂತೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ ಈ ಕುರಿತು ಅವರು ಸುದ್ದಿಗಾರರ ಜೊತೆ ಮಾತನಾಡಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಕೋರಮಂಡಲ್ ಎಕ್ಸ್ಪ್ರೆಸ್ ರೈಲಿನ ಚಾಲಕನ ತಪ್ಪು ಕಂಡು ಬಂದಿಲ್ಲ ಹಾಗೂ ರೈಲ್ವೆ ಎಲೆಕ್ಟ್ರಾನಿಕ್ ಉಪಕರಣಗಳಲ್ಲೂ ದೋಷಗಳು ಇರಲಿಲ್ಲ ಎಂದು ತಿಳಿದು ಬಂದಿದ್ದು, ಇದರ ಹಿಂದೆ ವಿಧ್ವಂಸಕ ಕೃತ್ಯದ ಸಂಚಿರಬಹುದೇ? ಎಂಬ ದೃಷ್ಟಿಕೋನದಲ್ಲಿ ಗಂಭಿರವಾಗಿ ಚಿಂತಿಸಲಾಗುತ್ತಿದೆ ಎಂದು ಈ ಮೊದಲು ವೈಷ್ಣವ್ ಹೇಳಿದ್ದರು.