ಚಿಶ್ತಿ ಅವರ 811ನೇ ಉರುಸ್ ಅಂಗವಾಗಿ ಪ್ರಪಂಚದಾದ್ಯಂತ ಇರುವ ಅವರ ಅನುಯಾಯಿಗಳಿಗೆ ಶುಭಕೋರಿದ್ದ ಪ್ರಧಾನಿ ಮೋದಿ, ದೇಶದ ಸಾಮರಸ್ಯ ಪರಂಪರೆಯ ಬಗ್ಗೆ ಉಲ್ಲೇಖ ಮಾಡಿದ್ದರು. ಜ. 11ರಂದು ತಮ್ಮನ್ನು ಭೇಟಿ ಮಾಡಲು ಬಂದಿದ್ದ ದರ್ಗಾದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಪ್ರಧಾನಿ, ಚಾದರ್ ಅರ್ಪಿಸಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಅಲ್ಪಸಂಖ್ಯಾತ ಇಲಾಖೆಯ ಸಚಿವೆ ಸ್ಮೃತಿ ಇರಾನಿ ಹಾಗೂ ಜಮಾಲ್ ಸಿದ್ಧಿಕಿ ಇದ್ದರು.
ಉರುಸ್ ಅಂಗವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಕೂಡ ಚಾದರ್ ಅರ್ಪಿಸಿದ್ದಾರೆ. ಮಾಜಿ ಸಚಿವ ನಾಸಿರ್ ಅಖ್ತರ್ ಅವರು ಗೆಹಲೋತ್ ಪರವಾಗಿ ಚಾದರ್ ನೀಡಿದ್ದಾರೆ.