ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ದೇಗುಲಗಳಿಗೆ ಸಮಿತಿ ನೇಮಕ ಮಾಡಿದ್ದನ್ನು ಪರಿಶೀಲಿಸಲು ಸುಪ್ರೀಂ ಒಪ್ಪಿಗೆ

ಕರ್ನಾಟಕ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಾಲಯ
Last Updated 12 ಜುಲೈ 2021, 13:48 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರಿನ ಮೂರು ಪುರಾತನ ದೇವಾಲಯಗಳಿಗೆ ವ್ಯವಸ್ಥಾಪಕ ಸಮಿತಿಗಳನ್ನು ನೇಮಿಸುವ ಮೂಲಕ ಕರ್ನಾಟಕ ಸರ್ಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿರ್ಧಾರವನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್‌ ಸೋಮವಾರ ತಿಳಿಸಿದೆ.

ನ್ಯಾಯಮೂರ್ತಿಗಳಾದ ಯು.ಯು. ಲಲಿತ್‌ ಮತ್ತು ಅಜಯ್‌ ರಸ್ತೋಗಿ ಅವರನ್ನೊಳಗೊಂಡ ಪೀಠವು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

ಎಂ. ಪ್ರಶಾಂತ್‌ ಮತ್ತು ಇತರರ ಪರವಾಗಿ ವಕೀಲ ಬಾಲಾಜಿ ಶ್ರೀನಿವಾಸನ್‌ ಅವರು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಲಾಗಿದೆ.

ಬೆಂಗಳೂರಿನ ಆಂಜನೇಯ ಸ್ವಾಮಿ ದೇವಾಲಯ, ಚನ್ನರಾಯಸ್ವಾಮಿ ದೇವಾಲಯ ಮತ್ತು ವೆಂಕಟರಾಮಣಸ್ವಾಮಿ ದೇವಾಲಯದ ಪ್ರಧಾನ ಅರ್ಚಕರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಇತರರು.

ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ಚಾರಿಟಬಲ್‌ ಸಂಸ್ಥೆ ತಿದ್ದುಪಡಿ ಕಾಯ್ದೆ–2021ರ ಸೆಕ್ಷನ್‌ 25ರ ಅನ್ವಯ ವ್ಯವಸ್ಥಾಪಕ ಸಮಿತಿಗಳನ್ನು ರಚಿಸಿ ಕರ್ನಾಟಕ ಸರ್ಕಾರ 2021ರ ಮಾರ್ಚ್‌ 21ರಂದು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ‘ಸಿ’ ವಿಭಾಗದಲ್ಲಿ 137 ದೇವಾಲಯಗಳಿವೆ. ಆದರೆ, ಸರ್ಕಾರದ ಬೆಂಗಳೂರು ಪೂರ್ವ ತಾಲ್ಲೂಕಿನ ಮೂರು ದೇವಾಲಯಗಳಿಗೆ ಮಾತ್ರ ಆದೇಶ ಹೊರಡಿಸಿದೆ ಎಂದು ಅರ್ಜಿದಾರರು ದೂರಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT