<p><strong>ನವದೆಹಲಿ:</strong> ಬೆಂಗಳೂರಿನ ಮೂರು ಪುರಾತನ ದೇವಾಲಯಗಳಿಗೆ ವ್ಯವಸ್ಥಾಪಕ ಸಮಿತಿಗಳನ್ನು ನೇಮಿಸುವ ಮೂಲಕ ಕರ್ನಾಟಕ ಸರ್ಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿರ್ಧಾರವನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.</p>.<p>ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಅಜಯ್ ರಸ್ತೋಗಿ ಅವರನ್ನೊಳಗೊಂಡ ಪೀಠವು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.</p>.<p>ಎಂ. ಪ್ರಶಾಂತ್ ಮತ್ತು ಇತರರ ಪರವಾಗಿ ವಕೀಲ ಬಾಲಾಜಿ ಶ್ರೀನಿವಾಸನ್ ಅವರು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಲಾಗಿದೆ.</p>.<p>ಬೆಂಗಳೂರಿನ ಆಂಜನೇಯ ಸ್ವಾಮಿ ದೇವಾಲಯ, ಚನ್ನರಾಯಸ್ವಾಮಿ ದೇವಾಲಯ ಮತ್ತು ವೆಂಕಟರಾಮಣಸ್ವಾಮಿ ದೇವಾಲಯದ ಪ್ರಧಾನ ಅರ್ಚಕರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಇತರರು.</p>.<p>ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ಚಾರಿಟಬಲ್ ಸಂಸ್ಥೆ ತಿದ್ದುಪಡಿ ಕಾಯ್ದೆ–2021ರ ಸೆಕ್ಷನ್ 25ರ ಅನ್ವಯ ವ್ಯವಸ್ಥಾಪಕ ಸಮಿತಿಗಳನ್ನು ರಚಿಸಿ ಕರ್ನಾಟಕ ಸರ್ಕಾರ 2021ರ ಮಾರ್ಚ್ 21ರಂದು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.</p>.<p>ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ‘ಸಿ’ ವಿಭಾಗದಲ್ಲಿ 137 ದೇವಾಲಯಗಳಿವೆ. ಆದರೆ, ಸರ್ಕಾರದ ಬೆಂಗಳೂರು ಪೂರ್ವ ತಾಲ್ಲೂಕಿನ ಮೂರು ದೇವಾಲಯಗಳಿಗೆ ಮಾತ್ರ ಆದೇಶ ಹೊರಡಿಸಿದೆ ಎಂದು ಅರ್ಜಿದಾರರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬೆಂಗಳೂರಿನ ಮೂರು ಪುರಾತನ ದೇವಾಲಯಗಳಿಗೆ ವ್ಯವಸ್ಥಾಪಕ ಸಮಿತಿಗಳನ್ನು ನೇಮಿಸುವ ಮೂಲಕ ಕರ್ನಾಟಕ ಸರ್ಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿರ್ಧಾರವನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.</p>.<p>ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಅಜಯ್ ರಸ್ತೋಗಿ ಅವರನ್ನೊಳಗೊಂಡ ಪೀಠವು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.</p>.<p>ಎಂ. ಪ್ರಶಾಂತ್ ಮತ್ತು ಇತರರ ಪರವಾಗಿ ವಕೀಲ ಬಾಲಾಜಿ ಶ್ರೀನಿವಾಸನ್ ಅವರು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಲಾಗಿದೆ.</p>.<p>ಬೆಂಗಳೂರಿನ ಆಂಜನೇಯ ಸ್ವಾಮಿ ದೇವಾಲಯ, ಚನ್ನರಾಯಸ್ವಾಮಿ ದೇವಾಲಯ ಮತ್ತು ವೆಂಕಟರಾಮಣಸ್ವಾಮಿ ದೇವಾಲಯದ ಪ್ರಧಾನ ಅರ್ಚಕರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಇತರರು.</p>.<p>ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ಚಾರಿಟಬಲ್ ಸಂಸ್ಥೆ ತಿದ್ದುಪಡಿ ಕಾಯ್ದೆ–2021ರ ಸೆಕ್ಷನ್ 25ರ ಅನ್ವಯ ವ್ಯವಸ್ಥಾಪಕ ಸಮಿತಿಗಳನ್ನು ರಚಿಸಿ ಕರ್ನಾಟಕ ಸರ್ಕಾರ 2021ರ ಮಾರ್ಚ್ 21ರಂದು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.</p>.<p>ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ‘ಸಿ’ ವಿಭಾಗದಲ್ಲಿ 137 ದೇವಾಲಯಗಳಿವೆ. ಆದರೆ, ಸರ್ಕಾರದ ಬೆಂಗಳೂರು ಪೂರ್ವ ತಾಲ್ಲೂಕಿನ ಮೂರು ದೇವಾಲಯಗಳಿಗೆ ಮಾತ್ರ ಆದೇಶ ಹೊರಡಿಸಿದೆ ಎಂದು ಅರ್ಜಿದಾರರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>