ದನಗಳನ್ನು ಸಾಗಿಸುತ್ತಿದ್ದ ರಕ್ಬರ್ ಖಾನ್ ಅವರನ್ನು ಹತ್ಯೆ ಮಾಡಲಾಗಿದೆ ಎನ್ನುವ ಆರೋಪ ಹೊತ್ತಿದ್ದ ಧರ್ಮೇಂದ್ರ ಯಾದವ್, ವಿಜಯ್ ಕುಮಾರ್, ಪರಮಜೀತ್ ಸಿಂಗ್ ಮತ್ತು ನರೇಶ್ ಕುಮಾರ್ ಅವರಿಗೆ ಅಲ್ವಾರ್ ನ್ಯಾಯಾಲಯವು ಗುರುವಾರ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆದರೆ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ವಿಎಚ್ಪಿ ನಾಯಕ ನವಲ್ ಕಿಶೋರ್ ಅವರನ್ನು ಖುಲಾಸೆಗೊಳಿಸಿದೆ.