<p><strong>ಅಹಮದಾಬಾದ್</strong>: ದೇಶಕ್ಕಾಗಿ ಮಡಿಯುವ ಅಗತ್ಯವಿಲ್ಲ. ದೇಶಕ್ಕಾಗಿ ಜೀವಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p><p>ಗುಜರಾತ್ ಅಭಿವೃದ್ಧಿಗೆ ಕಡ್ವ ಪಾಟಿದಾರ್ ಸಮುದಾಯದ ಕೊಡುಗೆಯನ್ನು ಶ್ಲಾಘಿಸುವ ಸಂದರ್ಭ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ.</p><p>ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮ್ಮುಖದಲ್ಲಿ ಪಾಟಿದಾರ್ ಸಮುದಾಯಕ್ಕೆ ನಿರ್ಮಾಣ ಮಾಡಲಾಗಿರುವ ಹಾಸ್ಟೆಲ್ವೊಂದನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ನೀವು ಒಳ್ಳೆಯ ಐಎಎಸ್, ಐಪಿಎಸ್, ಸಿಎ, ವೈದ್ಯ, ಒಳ್ಳೆಯ ನಾಗರಿಕರಾಗಿರಬಹುದು. ಆದರೆ, ನೀವು ದೇಶಕ್ಕಾಗಿ ಕೆಲಸ ಮಾಡಬೇಕಿದೆ’ಎಂದಿದ್ದಾರೆ. </p> <p>‘ಗುಜರಾತ್ ಅಭಿವೃದ್ಧಿ ಮತ್ತು ಪಾಟಿದಾರ್ ಸಮುದಾಯದ ಅಭಿವೃದ್ಧಿ ಎರಡೂ ಒಂದೇ. ತಮ್ಮ ಪರಿಶ್ರಮದ ಮೂಲಕ ಪಾಟಿದಾರ್ ಸಮುದಾಯ ತಮ್ಮ ಅಭಿವೃದ್ಧಿ ಜೊತೆಗೆ ರಾಜ್ಯ ಮತ್ತು ದೇಶದ ಬೆಳವಣಿಗೆಗೆ ಕೊಡುಗೆ ನೀಡಿದೆ’ಎಂದಿದ್ದಾರೆ.</p><p>‘ಉತ್ತರ ಗುಜರಾತ್ನಲ್ಲಿ ಓದಿದ ಪಾಟಿದಾರ್ ಸಮುದಾಯದ ಹಲವರು ದೇಶಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ನೀಡುವುದು ಮುಖ್ಯ. ಶಿಕ್ಷಣವು ಅಭಿವೃದ್ಧಿಯ ಅಡಿಪಾಯ. ಶಿಕ್ಷಣ ಕ್ಷೇತ್ರವನ್ನು ಬಲಿಷ್ಠಗೊಳಿಸುವ ಮೂಲಕ ದೇಶದ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರ ಶ್ರಮಿಸುತ್ತಿದೆ’ಎಂದಿದ್ದಾರೆ.</p><p>ಇದೇವೇಳೆ, ಅಹಮದಾಬಾದ್ನಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಎಸ್ಎಲ್ಐಎಂಎಸ್ ಆಸ್ಪತ್ರೆಯನ್ನು ಶಾ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ದೇಶಕ್ಕಾಗಿ ಮಡಿಯುವ ಅಗತ್ಯವಿಲ್ಲ. ದೇಶಕ್ಕಾಗಿ ಜೀವಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p><p>ಗುಜರಾತ್ ಅಭಿವೃದ್ಧಿಗೆ ಕಡ್ವ ಪಾಟಿದಾರ್ ಸಮುದಾಯದ ಕೊಡುಗೆಯನ್ನು ಶ್ಲಾಘಿಸುವ ಸಂದರ್ಭ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ.</p><p>ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮ್ಮುಖದಲ್ಲಿ ಪಾಟಿದಾರ್ ಸಮುದಾಯಕ್ಕೆ ನಿರ್ಮಾಣ ಮಾಡಲಾಗಿರುವ ಹಾಸ್ಟೆಲ್ವೊಂದನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ನೀವು ಒಳ್ಳೆಯ ಐಎಎಸ್, ಐಪಿಎಸ್, ಸಿಎ, ವೈದ್ಯ, ಒಳ್ಳೆಯ ನಾಗರಿಕರಾಗಿರಬಹುದು. ಆದರೆ, ನೀವು ದೇಶಕ್ಕಾಗಿ ಕೆಲಸ ಮಾಡಬೇಕಿದೆ’ಎಂದಿದ್ದಾರೆ. </p> <p>‘ಗುಜರಾತ್ ಅಭಿವೃದ್ಧಿ ಮತ್ತು ಪಾಟಿದಾರ್ ಸಮುದಾಯದ ಅಭಿವೃದ್ಧಿ ಎರಡೂ ಒಂದೇ. ತಮ್ಮ ಪರಿಶ್ರಮದ ಮೂಲಕ ಪಾಟಿದಾರ್ ಸಮುದಾಯ ತಮ್ಮ ಅಭಿವೃದ್ಧಿ ಜೊತೆಗೆ ರಾಜ್ಯ ಮತ್ತು ದೇಶದ ಬೆಳವಣಿಗೆಗೆ ಕೊಡುಗೆ ನೀಡಿದೆ’ಎಂದಿದ್ದಾರೆ.</p><p>‘ಉತ್ತರ ಗುಜರಾತ್ನಲ್ಲಿ ಓದಿದ ಪಾಟಿದಾರ್ ಸಮುದಾಯದ ಹಲವರು ದೇಶಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ನೀಡುವುದು ಮುಖ್ಯ. ಶಿಕ್ಷಣವು ಅಭಿವೃದ್ಧಿಯ ಅಡಿಪಾಯ. ಶಿಕ್ಷಣ ಕ್ಷೇತ್ರವನ್ನು ಬಲಿಷ್ಠಗೊಳಿಸುವ ಮೂಲಕ ದೇಶದ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರ ಶ್ರಮಿಸುತ್ತಿದೆ’ಎಂದಿದ್ದಾರೆ.</p><p>ಇದೇವೇಳೆ, ಅಹಮದಾಬಾದ್ನಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಎಸ್ಎಲ್ಐಎಂಎಸ್ ಆಸ್ಪತ್ರೆಯನ್ನು ಶಾ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>