<p><strong>ನವದೆಹಲಿ:</strong> ‘ಕೋವಿಡ್ ಮೂರನೇ ಅಲೆಯ ಸಿದ್ಧತೆಯ ಭಾಗವಾಗಿ 5,000 ಯುವಕರನ್ನು ಆರೋಗ್ಯ ಸಹಾಯಕರಾಗಿ ತರಬೇತಿ ನೀಡಲು ನಿರ್ಧರಿಸಲಾಗಿದೆ’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಬುಧವಾರ ತಿಳಿಸಿದರು.</p>.<p>‘ವೈದ್ಯರು ಮತ್ತು ದಾದಿಯರಿಗೆ ನೆರವಾಗುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಯುವ ಅಭ್ಯರ್ಥಿಗಳಿಗೆ ಆರೋಗ್ಯ ಸಹಾಯಕರು ಅಥವಾ ಸಮುದಾಯ ಶೂಶ್ರೂಷಕರಾಗಿ ಎರಡು ವಾರಗಳ ಕಾಲ ತರಬೇತಿಯನ್ನು ನೀಡಲಾಗುವುದು. ಪ್ರತಿ ಬ್ಯಾಚ್ನಲ್ಲಿ 500 ಅಭ್ಯರ್ಥಿಗಳಿರಲಿದ್ದು, ಜೂನ್ 28 ರಿಂದ ತರಬೇತಿ ಪ್ರಾರಂಭವಾಗಲಿದೆ’ ಎಂದು ಅವರು ಹೇಳಿದರು.</p>.<p>‘ಅಭ್ಯರ್ಥಿಗಳು ಕಡ್ಡಾಯವಾಗಿ 12ನೇ ತರಗತಿ ಉತೀರ್ಣರಾಗಿರಬೇಕು ಮತ್ತು 18 ವರ್ಷ ಮೇಲ್ಪಟ್ಟವರಾಗಿರಬೇಕು. ಆನ್ಲೈನ್ ಅರ್ಜಿಗಳನ್ನು ಜೂನ್ 17ರಿಂದ ಆಹ್ವಾನಿಸಲಾಗುವುದು. ಮೊದಲು ಅರ್ಜಿ ಸಲ್ಲಿಸಿದವರಿಗೆ, ಮೊದಲ ಆದ್ಯತೆ’ ಎಂದು ಮಾಹಿತಿ ನೀಡಿದರು.</p>.<p>‘ಮೂರನೇ ಅಲೆಯ ವೇಳೆ ಅಗತ್ಯವಿದ್ದಾಗ ಆರೋಗ್ಯ ಸಹಾಯಕರನ್ನು ಸೇವೆಗೆ ಕರೆಸಿಕೊಳ್ಳುತ್ತೇವೆ. ಕೆಲಸ ಮಾಡಿದ ದಿನಕ್ಕೆ ಅನುಗುಣವಾಗಿ ಅವರಿಗೆ ವೇತನ ನೀಡಲಾಗುವುದು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೋವಿಡ್ ಮೂರನೇ ಅಲೆಯ ಸಿದ್ಧತೆಯ ಭಾಗವಾಗಿ 5,000 ಯುವಕರನ್ನು ಆರೋಗ್ಯ ಸಹಾಯಕರಾಗಿ ತರಬೇತಿ ನೀಡಲು ನಿರ್ಧರಿಸಲಾಗಿದೆ’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಬುಧವಾರ ತಿಳಿಸಿದರು.</p>.<p>‘ವೈದ್ಯರು ಮತ್ತು ದಾದಿಯರಿಗೆ ನೆರವಾಗುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಯುವ ಅಭ್ಯರ್ಥಿಗಳಿಗೆ ಆರೋಗ್ಯ ಸಹಾಯಕರು ಅಥವಾ ಸಮುದಾಯ ಶೂಶ್ರೂಷಕರಾಗಿ ಎರಡು ವಾರಗಳ ಕಾಲ ತರಬೇತಿಯನ್ನು ನೀಡಲಾಗುವುದು. ಪ್ರತಿ ಬ್ಯಾಚ್ನಲ್ಲಿ 500 ಅಭ್ಯರ್ಥಿಗಳಿರಲಿದ್ದು, ಜೂನ್ 28 ರಿಂದ ತರಬೇತಿ ಪ್ರಾರಂಭವಾಗಲಿದೆ’ ಎಂದು ಅವರು ಹೇಳಿದರು.</p>.<p>‘ಅಭ್ಯರ್ಥಿಗಳು ಕಡ್ಡಾಯವಾಗಿ 12ನೇ ತರಗತಿ ಉತೀರ್ಣರಾಗಿರಬೇಕು ಮತ್ತು 18 ವರ್ಷ ಮೇಲ್ಪಟ್ಟವರಾಗಿರಬೇಕು. ಆನ್ಲೈನ್ ಅರ್ಜಿಗಳನ್ನು ಜೂನ್ 17ರಿಂದ ಆಹ್ವಾನಿಸಲಾಗುವುದು. ಮೊದಲು ಅರ್ಜಿ ಸಲ್ಲಿಸಿದವರಿಗೆ, ಮೊದಲ ಆದ್ಯತೆ’ ಎಂದು ಮಾಹಿತಿ ನೀಡಿದರು.</p>.<p>‘ಮೂರನೇ ಅಲೆಯ ವೇಳೆ ಅಗತ್ಯವಿದ್ದಾಗ ಆರೋಗ್ಯ ಸಹಾಯಕರನ್ನು ಸೇವೆಗೆ ಕರೆಸಿಕೊಳ್ಳುತ್ತೇವೆ. ಕೆಲಸ ಮಾಡಿದ ದಿನಕ್ಕೆ ಅನುಗುಣವಾಗಿ ಅವರಿಗೆ ವೇತನ ನೀಡಲಾಗುವುದು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>