<p><strong>ಚೆನ್ನೈ:</strong> ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ನಾವಾಗಲಿ, ಎಡಪಕ್ಷಗಳಾದ ಸಿಪಿಐ ಮತ್ತು ಸಿಪಿಐ(ಎಂ) ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ವಿಡುದಲೈ ಚಿರುಥೈಗಳ್(ವಿಸಿಕೆ) ಪಕ್ಷದ ಸಂಸ್ಥಾಪಕ ದೋಳ್ ತಿರುಮಾವಳವನ್ ಅವರು ಮಂಗಳವಾರ(ಮೇ 5) ಹೇಳಿದ್ದಾರೆ. </p><p>234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದರೆ, ಬಹುಮತ ಪಡೆಯಲು 118 ಸ್ಥಾನಗಳ ಅಗತ್ಯವಿದೆ. ಹೀಗಾಗಿ ವಿಜಯ್ ಅವರು ಎಡಪಕ್ಷಗಳೊಂದಿಗೆ ಮೈತ್ರಿಗೆ ಮುಂದಾಗುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ. </p><p>ಈ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ತಿರುಮಾವಳವನ್, ‘ಮೂರು ಪಕ್ಷಗಳು ಕೂಡ ಬಹುಕಾಲದಿಂದ ಜಾತ್ಯತೀತ ರಾಜಕೀಯ ಮಾಡುತ್ತಿದ್ದೇವೆ. ಭವಿಷ್ಯದಲ್ಲೂ ನಾವೆಲ್ಲರೂ ಸೇರಿಕೊಂಡು ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ. </p><p>ತಮಿಳುನಾಡಿನಲ್ಲಿ ಡಿಎಂಕೆ 59, ಎಐಎಡಿಎಂಕೆ 47, ಕಾಂಗ್ರೆಸ್ 5, ಪಿಎಂಕೆ 4, ಐಯುಎಂಎಲ್ 2, ಸಿಪಿಐ 2, ಸಿಪಿಐ(ಎಂ) 2 ಹಾಗೂ ವಿಸಿಕೆ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ಪಕ್ಷಗಳು ತಲಾ 1 ಸ್ಥಾನದಲ್ಲಿ ಗೆಲುವು ಸಾಧಿಸಿವೆ. </p><p>ಚುನಾವಣೆಗೂ ಮುನ್ನ ವಿಸಿಕೆ ಹಾಗೂ ಎಡಪಕ್ಷಗಳು ಡಿಎಂಕೆ ಮೈತ್ರಿಕೂಟದಲ್ಲಿದ್ದವು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ನಾವಾಗಲಿ, ಎಡಪಕ್ಷಗಳಾದ ಸಿಪಿಐ ಮತ್ತು ಸಿಪಿಐ(ಎಂ) ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ವಿಡುದಲೈ ಚಿರುಥೈಗಳ್(ವಿಸಿಕೆ) ಪಕ್ಷದ ಸಂಸ್ಥಾಪಕ ದೋಳ್ ತಿರುಮಾವಳವನ್ ಅವರು ಮಂಗಳವಾರ(ಮೇ 5) ಹೇಳಿದ್ದಾರೆ. </p><p>234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದರೆ, ಬಹುಮತ ಪಡೆಯಲು 118 ಸ್ಥಾನಗಳ ಅಗತ್ಯವಿದೆ. ಹೀಗಾಗಿ ವಿಜಯ್ ಅವರು ಎಡಪಕ್ಷಗಳೊಂದಿಗೆ ಮೈತ್ರಿಗೆ ಮುಂದಾಗುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ. </p><p>ಈ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ತಿರುಮಾವಳವನ್, ‘ಮೂರು ಪಕ್ಷಗಳು ಕೂಡ ಬಹುಕಾಲದಿಂದ ಜಾತ್ಯತೀತ ರಾಜಕೀಯ ಮಾಡುತ್ತಿದ್ದೇವೆ. ಭವಿಷ್ಯದಲ್ಲೂ ನಾವೆಲ್ಲರೂ ಸೇರಿಕೊಂಡು ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ. </p><p>ತಮಿಳುನಾಡಿನಲ್ಲಿ ಡಿಎಂಕೆ 59, ಎಐಎಡಿಎಂಕೆ 47, ಕಾಂಗ್ರೆಸ್ 5, ಪಿಎಂಕೆ 4, ಐಯುಎಂಎಲ್ 2, ಸಿಪಿಐ 2, ಸಿಪಿಐ(ಎಂ) 2 ಹಾಗೂ ವಿಸಿಕೆ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ಪಕ್ಷಗಳು ತಲಾ 1 ಸ್ಥಾನದಲ್ಲಿ ಗೆಲುವು ಸಾಧಿಸಿವೆ. </p><p>ಚುನಾವಣೆಗೂ ಮುನ್ನ ವಿಸಿಕೆ ಹಾಗೂ ಎಡಪಕ್ಷಗಳು ಡಿಎಂಕೆ ಮೈತ್ರಿಕೂಟದಲ್ಲಿದ್ದವು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>