<p><strong>ತಿರುವನಂತಪುರ</strong>: ಕೇರಳ ರಾಜ್ಯದಲ್ಲಿ ಬಿಜೆಪಿಯಿಂದ ಮೊದಲ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ತಿರುವನಂತಪುರದ ಬಿಜೆಪಿ ನಾಯಕ ವಿವಿ ರಾಜೇಶ್ ಇತಿಹಾಸ ನಿರ್ಮಿಸಿದರು.</p><p>ಇತ್ತೀಚೆಗೆ ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ರಾಜಧಾನಿ ತಿರುವನಂತರಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿತ್ತು. 101 ವಾರ್ಡುಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳಲ್ಲಿ ಜಯ ದಾಖಲಿಸಿ ಕೇರಳದ ಎಡಪಕ್ಷಗಳಿಗೆ ಹಾಗೂ ಕಾಂಗ್ರೆಸ್ಗೆ ಬಿಸಿ ಮುಟ್ಟಿಸಿತ್ತು.</p><p>ಈ ಹಿನ್ನೆಲೆಯಲ್ಲಿ ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಮೇಯರ್ ಆಯ್ಕೆಗೆ ಇಂದು ಚುನಾವಣೆ ನಡೆಯಿತು. ಬಿಜೆಪಿಗೆ ಮೇಯರ್ ಗದ್ದುಗೆ ಹಿಡಿಯಲು ಒಂದು ಸ್ಥಾನ ಕೊರತೆ ಇತ್ತು. ಈ ವೇಳೆ ಪಕ್ಷೇತರ ಸದಸ್ಯರೊಬ್ಬರು ಬಿಜೆಪಿ ಬೆಂಬಲಿಸುವ ಮೂಲಕ (51) ವಿವಿ ರಾಜೇಶ್ ಮೇಯರ್ ಆಗಿ ಗೆಲುವಿನ ನಗೆ ಬೀರಲು ಕಾರಣರಾದರು.</p><p>ಮೇಯರ್ ಚುನಾವಣೆಯಲ್ಲಿ ವಿವಿ ರಾಜೇಶ್ ವಿರುದ್ಧ ಎಲ್ಡಿಎಫ್ನ ಅಭ್ಯರ್ಥಿ 29, ಯುಡಿಎಫ್ನ ಅಭ್ಯರ್ಥಿ 19 ಮತಗಳನ್ನು ಪಡೆದು ಪರಾಭವಗೊಂಡರು.</p><p>ಬಳಿಕ ಮೇಯರ್ ಆಗಿ ರಾಜೇಶ್ ಅವರು ಪ್ರಮಾಣವಚನ ಸ್ವೀಕರಿದರು. ಈ ವೇಳೆ ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ಬಿಜೆಪಿ ಮುಖಂಡರಾದ ಕೆ. ಸುರೇಂದ್ರನ್, ವಿ. ಮುರುಳಿಧರನ್ ಅವರು ಉಪಸ್ಥಿತರಿದ್ದರು.</p><p>ತಿರುವನಂತಪುರ ಸಿಟಿ ಕಾರ್ಪೊರೇಷನ್ನ ರಚನೆ ಆದ ಮೇಲೆ (40 ವರ್ಷಗಳ ಹಿಂದೆ) ಹಾಗೂ ಕೇರಳದ ಇತರ ಸಿಟಿ ಕಾರ್ಪೊರೇಷನ್ಗಳನ್ನೂ ಒಳಗೊಂಡಂತೆ ಇದೇ ಮೊದಲ ಬಾರಿಗೆ ಬಿಜೆಪಿಯ ಅಭ್ಯರ್ಥಿ ಮೇಯರ್ ಆಗಿ ದಾಖಲೆ ನಿರ್ಮಾಣವಾಗಿದೆ.</p><p>ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಿರುವನಂತಪುರದ ಜೊತೆ, ತ್ರಿಪುನಿತುರ ಹಾಗೂ ಪಾಲಕ್ಕಾಡ್ನಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ.</p>.ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಜಯ: ಧನ್ಯವಾದ ಸಲ್ಲಿಸಿದ ಮೋದಿ.ಕೇರಳ: ಸ್ಥಳೀಯ ಚುನಾವಣೆಗಳಲ್ಲಿ ಕ್ರಿಶ್ಚಿಯನ್ ಅಭ್ಯರ್ಥಿಗಳಿಗೆ ಬಿಜೆಪಿ ಮಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳ ರಾಜ್ಯದಲ್ಲಿ ಬಿಜೆಪಿಯಿಂದ ಮೊದಲ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ತಿರುವನಂತಪುರದ ಬಿಜೆಪಿ ನಾಯಕ ವಿವಿ ರಾಜೇಶ್ ಇತಿಹಾಸ ನಿರ್ಮಿಸಿದರು.</p><p>ಇತ್ತೀಚೆಗೆ ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ರಾಜಧಾನಿ ತಿರುವನಂತರಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿತ್ತು. 101 ವಾರ್ಡುಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳಲ್ಲಿ ಜಯ ದಾಖಲಿಸಿ ಕೇರಳದ ಎಡಪಕ್ಷಗಳಿಗೆ ಹಾಗೂ ಕಾಂಗ್ರೆಸ್ಗೆ ಬಿಸಿ ಮುಟ್ಟಿಸಿತ್ತು.</p><p>ಈ ಹಿನ್ನೆಲೆಯಲ್ಲಿ ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಮೇಯರ್ ಆಯ್ಕೆಗೆ ಇಂದು ಚುನಾವಣೆ ನಡೆಯಿತು. ಬಿಜೆಪಿಗೆ ಮೇಯರ್ ಗದ್ದುಗೆ ಹಿಡಿಯಲು ಒಂದು ಸ್ಥಾನ ಕೊರತೆ ಇತ್ತು. ಈ ವೇಳೆ ಪಕ್ಷೇತರ ಸದಸ್ಯರೊಬ್ಬರು ಬಿಜೆಪಿ ಬೆಂಬಲಿಸುವ ಮೂಲಕ (51) ವಿವಿ ರಾಜೇಶ್ ಮೇಯರ್ ಆಗಿ ಗೆಲುವಿನ ನಗೆ ಬೀರಲು ಕಾರಣರಾದರು.</p><p>ಮೇಯರ್ ಚುನಾವಣೆಯಲ್ಲಿ ವಿವಿ ರಾಜೇಶ್ ವಿರುದ್ಧ ಎಲ್ಡಿಎಫ್ನ ಅಭ್ಯರ್ಥಿ 29, ಯುಡಿಎಫ್ನ ಅಭ್ಯರ್ಥಿ 19 ಮತಗಳನ್ನು ಪಡೆದು ಪರಾಭವಗೊಂಡರು.</p><p>ಬಳಿಕ ಮೇಯರ್ ಆಗಿ ರಾಜೇಶ್ ಅವರು ಪ್ರಮಾಣವಚನ ಸ್ವೀಕರಿದರು. ಈ ವೇಳೆ ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ಬಿಜೆಪಿ ಮುಖಂಡರಾದ ಕೆ. ಸುರೇಂದ್ರನ್, ವಿ. ಮುರುಳಿಧರನ್ ಅವರು ಉಪಸ್ಥಿತರಿದ್ದರು.</p><p>ತಿರುವನಂತಪುರ ಸಿಟಿ ಕಾರ್ಪೊರೇಷನ್ನ ರಚನೆ ಆದ ಮೇಲೆ (40 ವರ್ಷಗಳ ಹಿಂದೆ) ಹಾಗೂ ಕೇರಳದ ಇತರ ಸಿಟಿ ಕಾರ್ಪೊರೇಷನ್ಗಳನ್ನೂ ಒಳಗೊಂಡಂತೆ ಇದೇ ಮೊದಲ ಬಾರಿಗೆ ಬಿಜೆಪಿಯ ಅಭ್ಯರ್ಥಿ ಮೇಯರ್ ಆಗಿ ದಾಖಲೆ ನಿರ್ಮಾಣವಾಗಿದೆ.</p><p>ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಿರುವನಂತಪುರದ ಜೊತೆ, ತ್ರಿಪುನಿತುರ ಹಾಗೂ ಪಾಲಕ್ಕಾಡ್ನಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ.</p>.ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಜಯ: ಧನ್ಯವಾದ ಸಲ್ಲಿಸಿದ ಮೋದಿ.ಕೇರಳ: ಸ್ಥಳೀಯ ಚುನಾವಣೆಗಳಲ್ಲಿ ಕ್ರಿಶ್ಚಿಯನ್ ಅಭ್ಯರ್ಥಿಗಳಿಗೆ ಬಿಜೆಪಿ ಮಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>