ನವದೆಹಲಿ: ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಈ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ನೀಡಬೇಕೆಂದು ಎರಡನೇ ಹಂತದ ಮತದಾನದ ಮುನ್ನಾ ದಿನವಾದ ಗುರುವಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿಡಿಯೊ ಸಂದೇಶದಲ್ಲಿ ಮೂಲಕ ಮನವಿ ಮಾಡಿದ್ದಾರೆ.
ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾಶಪಡಿಸಲು ಬಿಜೆಪಿ ಮತ್ತು ಆರ್ಎಸ್ಎಸ್ ಪ್ರಯತ್ನಿಸುತ್ತಿದೆ ಎಂದೂ ಅವರು ಆರೋಪಿಸಿದರು.
ನಿಮ್ಮ ಸಮಸ್ಯೆಗಳನ್ನು ಕೇಳಲು ನಾವು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಹಾಗೂ ಮಣಿಪುರದಿಂದ ಮಹಾರಾಷ್ಟ್ರಕ್ಕೆ ಯಾತ್ರೆ ನಡೆಸಿದ್ದೇವೆ. ಅವುಗಳನ್ನು ಪರಿಹರಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಿದ್ದೇವೆ ಎಂದರು.
ರಾಹುಲ್ ಅವರು ಸ್ಪರ್ಧಿಸುತ್ತಿರುವ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.