<p><strong>ನವದೆಹಲಿ:</strong>‘ಬಿಜೆಪಿ ತೊರೆದುಕಾಂಗ್ರೆಸ್ ಸೇರಿದ ಮುಖಂಡರ ವಿರುದ್ಧ ಹರಿಹಾಯ್ದ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್, ‘ಶೀಘ್ರದಲ್ಲಿ ಅವರೆಲ್ಲ ಅತ್ಯಂತ ಹಳೆ ಪಕ್ಷದಿಂದ ವಂಚನೆಗೆ ಒಳಗಾಗಲಿದ್ದು, #MeToo ಅಭಿಯಾನ ಪ್ರಾರಂಭಿಸುತ್ತಾರೆ’ ಎಂದು ಹೇಳಿದರು.</p>.<p>‘ಒಂದು ವೇಳೆ ಎಲ್ಲಾ ವಿರೋಧ ಪಕ್ಷಗಳು ಒಂದಾದರೆ,ಈಗ ಕಾಂಗ್ರೆಸ್ ಸೇರಿರುವವರನ್ನು ಕಾಪಾಡಲು ಯಾರಿಂದಲೂ ಸಾಧ್ಯವಾಗುವುದಿಲ್ಲ.ಕಾಂಗ್ರೆಸ್ನಿಂದ ದ್ರೋಹ ಅನುಭವಿಸಿದ ನಂತರ, ಅವರೆಲ್ಲಒಟ್ಟಾಗಿ #MeToo ಅಭಿಯಾನನಡೆಸುವ ಸ್ಥಿತಿ ಬರುತ್ತದೆ’ ಎಂದರು.</p>.<p>ಇತ್ತೀಚೆಗೆ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಪುತ್ರ ಮಾನವೇಂದ್ರ ಸಿಂಗ್ ಮತ್ತು ಮಹಾರಾಷ್ಟ್ರ ಬಿಜೆಪಿ ಮಾಜಿ ಶಾಸಕ ಆಶಿಶ್ ದೇಶ್ಮುಖ್ ಕಾಂಗ್ರೆಸ್ ಪಕ್ಷ ಸೇರಿದ್ದರು. ಈ ಇಬ್ಬರು ರಫೇಲ್ ಹಗರಣದ ಕಾರಣ ನೀಡಿ ಬಿಜೆಪಿ ತೊರೆದಿದ್ದರು.</p>.<p>ಎಲ್ಲಾ ಕ್ಷೇತ್ರಗಳಲ್ಲಿನ ಮಹಿಳೆಯರು ತಾವು ಅನುಭವಿಸಿದ ಲೈಂಗಿಕ ಕಿರುಕುಳದ ಬಗ್ಗೆ #MeToo ಅಭಿಯಾನದ ಮೂಲಕಧೈರ್ಯವಾಗಿ ಹೇಳಿಕೊಳ್ಳುತ್ತಿರುವ ಸಂದರ್ಭದಲ್ಲಿಯೇ ರಾಜನಾಥ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ಎಂ.ಜೆ. ಅಕ್ಬರ್ ಅವರೂ ಲೈಂಗಿಕಕಿರುಕುಳದ ಆರೋಪದಿಂದ ಸಚಿವ ಸ್ಥಾನ ತೊರೆಯಬೇಕಾಯಿತು.</p>.<p>ಆಶ್ಚರ್ಯಕರ ಸಂಗತಿ ಎಂದರೆ, #MeToo ಪ್ರಕರಣಗಳನ್ನುಇತ್ಯರ್ಥಗೊಳಿಸುವುದಕ್ಕೆ ಕಾನೂನು ಮತ್ತು ಸಾಂಸ್ಥಿಕ ಚೌಕಟ್ಟು ಇದೆಯೇ ಎಂಬ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರ ಗೃಹಸಚಿವರ ನೇತೃತ್ವದಲ್ಲಿ ಸಚಿವರ ಸಮಿತಿಯೊಂದನ್ನು ರಚಿಸಿದೆ. ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್ ಮತ್ತು ಮನೇಕಾ ಗಾಂಧಿ ಅವರೂ ಸಮಿತಿಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>‘ಬಿಜೆಪಿ ತೊರೆದುಕಾಂಗ್ರೆಸ್ ಸೇರಿದ ಮುಖಂಡರ ವಿರುದ್ಧ ಹರಿಹಾಯ್ದ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್, ‘ಶೀಘ್ರದಲ್ಲಿ ಅವರೆಲ್ಲ ಅತ್ಯಂತ ಹಳೆ ಪಕ್ಷದಿಂದ ವಂಚನೆಗೆ ಒಳಗಾಗಲಿದ್ದು, #MeToo ಅಭಿಯಾನ ಪ್ರಾರಂಭಿಸುತ್ತಾರೆ’ ಎಂದು ಹೇಳಿದರು.</p>.<p>‘ಒಂದು ವೇಳೆ ಎಲ್ಲಾ ವಿರೋಧ ಪಕ್ಷಗಳು ಒಂದಾದರೆ,ಈಗ ಕಾಂಗ್ರೆಸ್ ಸೇರಿರುವವರನ್ನು ಕಾಪಾಡಲು ಯಾರಿಂದಲೂ ಸಾಧ್ಯವಾಗುವುದಿಲ್ಲ.ಕಾಂಗ್ರೆಸ್ನಿಂದ ದ್ರೋಹ ಅನುಭವಿಸಿದ ನಂತರ, ಅವರೆಲ್ಲಒಟ್ಟಾಗಿ #MeToo ಅಭಿಯಾನನಡೆಸುವ ಸ್ಥಿತಿ ಬರುತ್ತದೆ’ ಎಂದರು.</p>.<p>ಇತ್ತೀಚೆಗೆ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಪುತ್ರ ಮಾನವೇಂದ್ರ ಸಿಂಗ್ ಮತ್ತು ಮಹಾರಾಷ್ಟ್ರ ಬಿಜೆಪಿ ಮಾಜಿ ಶಾಸಕ ಆಶಿಶ್ ದೇಶ್ಮುಖ್ ಕಾಂಗ್ರೆಸ್ ಪಕ್ಷ ಸೇರಿದ್ದರು. ಈ ಇಬ್ಬರು ರಫೇಲ್ ಹಗರಣದ ಕಾರಣ ನೀಡಿ ಬಿಜೆಪಿ ತೊರೆದಿದ್ದರು.</p>.<p>ಎಲ್ಲಾ ಕ್ಷೇತ್ರಗಳಲ್ಲಿನ ಮಹಿಳೆಯರು ತಾವು ಅನುಭವಿಸಿದ ಲೈಂಗಿಕ ಕಿರುಕುಳದ ಬಗ್ಗೆ #MeToo ಅಭಿಯಾನದ ಮೂಲಕಧೈರ್ಯವಾಗಿ ಹೇಳಿಕೊಳ್ಳುತ್ತಿರುವ ಸಂದರ್ಭದಲ್ಲಿಯೇ ರಾಜನಾಥ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ಎಂ.ಜೆ. ಅಕ್ಬರ್ ಅವರೂ ಲೈಂಗಿಕಕಿರುಕುಳದ ಆರೋಪದಿಂದ ಸಚಿವ ಸ್ಥಾನ ತೊರೆಯಬೇಕಾಯಿತು.</p>.<p>ಆಶ್ಚರ್ಯಕರ ಸಂಗತಿ ಎಂದರೆ, #MeToo ಪ್ರಕರಣಗಳನ್ನುಇತ್ಯರ್ಥಗೊಳಿಸುವುದಕ್ಕೆ ಕಾನೂನು ಮತ್ತು ಸಾಂಸ್ಥಿಕ ಚೌಕಟ್ಟು ಇದೆಯೇ ಎಂಬ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರ ಗೃಹಸಚಿವರ ನೇತೃತ್ವದಲ್ಲಿ ಸಚಿವರ ಸಮಿತಿಯೊಂದನ್ನು ರಚಿಸಿದೆ. ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್ ಮತ್ತು ಮನೇಕಾ ಗಾಂಧಿ ಅವರೂ ಸಮಿತಿಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>