<p><strong>ಲಖನೌ:</strong> ಉತ್ತರ ಪ್ರದೇಶದಲ್ಲಿ ಕೋಮು ಸಾಮರಸ್ಯ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ರಾಜ್ಯದಲ್ಲಿ ಆರಂಭವಾಗಿರುವ 'ಐ ಲವ್ ಮೊಹಮ್ಮದ್' ಪೋಸ್ಟರ್ ವಿವಾದದ ಬೆನ್ನಲ್ಲೇ, ಈ ರೀತಿಯ ಎಚ್ಚರಿಕೆ ನೀಡಿದ್ದಾರೆ.</p><p>ಬಲರಾಮ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಯೋಗಿ, 'ಯಾರೆಲ್ಲ ಘಜ್ವಾ–ಎ–ಹಿಂದ್ (ಭಾರತದಲ್ಲಿ ಇಸ್ಲಾಮಿ ಆಳ್ವಿಕೆ ತರುವುದು) ಕನಸು ಕಾಣುತ್ತಿದ್ದಾರೋ ಅವರಿಗೆ ನರಕದ ಟಿಕೆಟ್ ನೀಡುತ್ತೇವೆ' ಎಂದಿದ್ದಾರೆ.</p><p>'ಕೆಲವರು ಭಾರತದಲ್ಲಿ ಬದುಕುತ್ತಿದ್ದಾರೆ. ಆದರೆ, ದೇಶವಿರೋಧಿ ಹೇಳಿಕೆಗಳನ್ನು ನೀಡುತ್ತಾ, ರಾಷ್ಟ್ರದ್ರೋಹದ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ. ಭಾರತದ ಮಣ್ಣಲ್ಲಿ ಇದಕ್ಕೆಲ್ಲ ಅವಕಾಶ ನೀಡುವುದಿಲ್ಲ. ಇಂತಹ ಶಕ್ತಿಗಳ ವಿರುದ್ಧ ಹೇಗೆ ವ್ಯವಹರಿಸಬೇಕು ಎಂಬುದು ನಮಗೆ ಗೊತ್ತಿದೆ' ಎಂದು ಹೇಳಿದ್ದಾರೆ.</p><p>ಬರೇಲಿಯಲ್ಲಿ ಪೋಸ್ಟರ್ ವಿಚಾರವಾಗಿ ಶುಕ್ರವಾರ ನಡೆದ ಪ್ರತಿಭಟನೆ ಕುರಿತು ಮಾತನಾಡಿರುವ ಸಿಎಂ, ನಂಬಿಕೆ ಎಂಬುದು ರಸ್ತೆಗಳಲ್ಲಿ ಪ್ರದರ್ಶನಕ್ಕೆ ಇಡುವಂತಹದ್ದಲ್ಲ ಎಂದಿದ್ದಾರೆ. 'ಬರೇಲಿಯಲ್ಲಿ ಜನರಿಗೆ ತೊಂದರೆ ನೀಡುತ್ತಿರುವವರನ್ನು ನಮ್ಮದೇ ರೀತಿಯಲ್ಲಿ ನಿಭಾಯಿಸುತ್ತೇವೆ' ಎಂದೂ ಕಟುವಾಗಿ ಹೇಳಿದ್ದಾರೆ.</p><p>'ಐ ಲವ್ ಮೊಹಮ್ಮದ್' ಪೋಸ್ಟರ್ಗಳನ್ನು ಮಕ್ಕಳ ಕೈಗೆ ಕೊಡುವ ಮೂಲಕ ದೇಶದ ಭವಿಷ್ಯವನ್ನು ಹಾಳುಮಾಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಸಾಕಷ್ಟು ಮಕ್ಕಳು ಭಾಗವಹಿಸಿದ್ದರು.</p><p>ಪ್ರತಿಭಟನೆಗೆ ಕರೆ ನೀಡಿದ್ದ ಮುಸ್ಲಿಂ ಧರ್ಮಗುರು ಮೌಲಾನಾ ತೌಕಿರ್ ರಜಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನೂರಾರು ಅಪರಿಚಿತ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಘರ್ಷಣೆ ಸಂದರ್ಭದ 20ಕ್ಕೂ ಹೆಚ್ಚು ಪೊಲೀಸರೂ ಗಾಯಗೊಂಡಿದ್ದಾರೆ.</p><p>ತೌಕಿರ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.‘ಐ ಲವ್ ಮಹಮ್ಮದ್’ ಜಾಥಾಗೆ ಸಿಗದ ಅನುಮತಿ |ಬರೇಲಿಯಲ್ಲಿ ಹಿಂಸಾಚಾರ: ಹಲವರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದಲ್ಲಿ ಕೋಮು ಸಾಮರಸ್ಯ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ರಾಜ್ಯದಲ್ಲಿ ಆರಂಭವಾಗಿರುವ 'ಐ ಲವ್ ಮೊಹಮ್ಮದ್' ಪೋಸ್ಟರ್ ವಿವಾದದ ಬೆನ್ನಲ್ಲೇ, ಈ ರೀತಿಯ ಎಚ್ಚರಿಕೆ ನೀಡಿದ್ದಾರೆ.</p><p>ಬಲರಾಮ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಯೋಗಿ, 'ಯಾರೆಲ್ಲ ಘಜ್ವಾ–ಎ–ಹಿಂದ್ (ಭಾರತದಲ್ಲಿ ಇಸ್ಲಾಮಿ ಆಳ್ವಿಕೆ ತರುವುದು) ಕನಸು ಕಾಣುತ್ತಿದ್ದಾರೋ ಅವರಿಗೆ ನರಕದ ಟಿಕೆಟ್ ನೀಡುತ್ತೇವೆ' ಎಂದಿದ್ದಾರೆ.</p><p>'ಕೆಲವರು ಭಾರತದಲ್ಲಿ ಬದುಕುತ್ತಿದ್ದಾರೆ. ಆದರೆ, ದೇಶವಿರೋಧಿ ಹೇಳಿಕೆಗಳನ್ನು ನೀಡುತ್ತಾ, ರಾಷ್ಟ್ರದ್ರೋಹದ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ. ಭಾರತದ ಮಣ್ಣಲ್ಲಿ ಇದಕ್ಕೆಲ್ಲ ಅವಕಾಶ ನೀಡುವುದಿಲ್ಲ. ಇಂತಹ ಶಕ್ತಿಗಳ ವಿರುದ್ಧ ಹೇಗೆ ವ್ಯವಹರಿಸಬೇಕು ಎಂಬುದು ನಮಗೆ ಗೊತ್ತಿದೆ' ಎಂದು ಹೇಳಿದ್ದಾರೆ.</p><p>ಬರೇಲಿಯಲ್ಲಿ ಪೋಸ್ಟರ್ ವಿಚಾರವಾಗಿ ಶುಕ್ರವಾರ ನಡೆದ ಪ್ರತಿಭಟನೆ ಕುರಿತು ಮಾತನಾಡಿರುವ ಸಿಎಂ, ನಂಬಿಕೆ ಎಂಬುದು ರಸ್ತೆಗಳಲ್ಲಿ ಪ್ರದರ್ಶನಕ್ಕೆ ಇಡುವಂತಹದ್ದಲ್ಲ ಎಂದಿದ್ದಾರೆ. 'ಬರೇಲಿಯಲ್ಲಿ ಜನರಿಗೆ ತೊಂದರೆ ನೀಡುತ್ತಿರುವವರನ್ನು ನಮ್ಮದೇ ರೀತಿಯಲ್ಲಿ ನಿಭಾಯಿಸುತ್ತೇವೆ' ಎಂದೂ ಕಟುವಾಗಿ ಹೇಳಿದ್ದಾರೆ.</p><p>'ಐ ಲವ್ ಮೊಹಮ್ಮದ್' ಪೋಸ್ಟರ್ಗಳನ್ನು ಮಕ್ಕಳ ಕೈಗೆ ಕೊಡುವ ಮೂಲಕ ದೇಶದ ಭವಿಷ್ಯವನ್ನು ಹಾಳುಮಾಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಸಾಕಷ್ಟು ಮಕ್ಕಳು ಭಾಗವಹಿಸಿದ್ದರು.</p><p>ಪ್ರತಿಭಟನೆಗೆ ಕರೆ ನೀಡಿದ್ದ ಮುಸ್ಲಿಂ ಧರ್ಮಗುರು ಮೌಲಾನಾ ತೌಕಿರ್ ರಜಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನೂರಾರು ಅಪರಿಚಿತ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಘರ್ಷಣೆ ಸಂದರ್ಭದ 20ಕ್ಕೂ ಹೆಚ್ಚು ಪೊಲೀಸರೂ ಗಾಯಗೊಂಡಿದ್ದಾರೆ.</p><p>ತೌಕಿರ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.‘ಐ ಲವ್ ಮಹಮ್ಮದ್’ ಜಾಥಾಗೆ ಸಿಗದ ಅನುಮತಿ |ಬರೇಲಿಯಲ್ಲಿ ಹಿಂಸಾಚಾರ: ಹಲವರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>