<p><strong>ಇಂಫಾಲ್:</strong> ‘ಜನಾಂಗೀಯ ಸಂಘರ್ಷ ಕುರಿತಂತೆ ನಾನು ಜನರ ಕ್ಷಮೆ ಕೋರಿದ್ದ ವಿಚಾರವಾಗಿ ರಾಜಕೀಯ ಮಾಡುತ್ತಿರುವವರು ರಾಜ್ಯದಲ್ಲಿ ಅಸ್ಥಿರತೆ ಮುಂದುವರಿಯಬೇಕು ಎಂಬುದಾಗಿ ಬಯಸುತ್ತಿದ್ದಾರೆ’ ಎಂದು ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಶುಕ್ರವಾರ ಹೇಳಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆ ನನ್ನ ಸರ್ಕಾರದ ಆದ್ಯತೆಯಾಗಿದೆ’ ಎಂದರು.</p>.<p>‘ಆಗಿದ್ದು ಆಗಿ ಹೋಯಿತು. ಎರಡೂ ಸಮುದಾಯದವರು ಒಟ್ಟಿಗೆ ಕುಳಿತು ಮಾತನಾಡಿ, ಈ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದು ರಾಜ್ಯದ ವಿವಿಧ ಸಮುದಾಯಗಳಿಗೆ ಅವರು ಮನವಿ ಮಾಡಿದರು.</p>.<p>‘ವಿರೋಧ ಪಕ್ಷಗಳಿಗೆ ಸಿದ್ಧಾಂತವೆಂಬುದೇ ಇಲ್ಲ. ನಾನು ದುಃಖಿತನಾಗಿರುವ ಬಗ್ಗೆ ಹೇಳಿದ್ದೆ. ತಮ್ಮವರನ್ನು ಕಳೆದುಕೊಂಡವರಿಗೆ ಹಾಗೂ ಜನಾಂಗೀಯ ಸಂಘರ್ಷದಿಂದಾಗಿ ನೋವು ಅನುಭವಿಸುತ್ತಿರುವವರಲ್ಲಿ ಕ್ಷಮೆ ಯಾಚಿಸಿದ್ದೆ’ ಎಂದ ಅವರು, ‘ಉಗ್ರರಲ್ಲಿ ನಾನೇಕೆ ಕ್ಷಮೆ ಯಾಚಿಸಲಿ’ ಎಂದು ಪ್ರಶ್ನಿಸಿದರು.</p>.<p>‘ರಾಜ್ಯದಲ್ಲಿರುವ ವಿವಿಧ ಸಮುದಾಯಗಳ ಜನರಿಗೆ ನಾನು ಶಾಂತಿಯ ಸಂದೇಶ ರವಾನಿಸಿದ್ದೇನೆ. ಹಳೆಯದನ್ನು ಮರೆಯಬೇಕು ಹಾಗೂ ಕ್ಷಮಿಸಬೇಕು. ಮಾತುಕತೆ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದರು.</p>.ಮಣಿಪುರ ಹಿಂಸಾಚಾರ: ರಾಜ್ಯದ ಜನರ ಕ್ಷಮೆಯಾಚಿಸಿದ ಸಿಎಂ ಬಿರೇನ್ ಸಿಂಗ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್:</strong> ‘ಜನಾಂಗೀಯ ಸಂಘರ್ಷ ಕುರಿತಂತೆ ನಾನು ಜನರ ಕ್ಷಮೆ ಕೋರಿದ್ದ ವಿಚಾರವಾಗಿ ರಾಜಕೀಯ ಮಾಡುತ್ತಿರುವವರು ರಾಜ್ಯದಲ್ಲಿ ಅಸ್ಥಿರತೆ ಮುಂದುವರಿಯಬೇಕು ಎಂಬುದಾಗಿ ಬಯಸುತ್ತಿದ್ದಾರೆ’ ಎಂದು ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಶುಕ್ರವಾರ ಹೇಳಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆ ನನ್ನ ಸರ್ಕಾರದ ಆದ್ಯತೆಯಾಗಿದೆ’ ಎಂದರು.</p>.<p>‘ಆಗಿದ್ದು ಆಗಿ ಹೋಯಿತು. ಎರಡೂ ಸಮುದಾಯದವರು ಒಟ್ಟಿಗೆ ಕುಳಿತು ಮಾತನಾಡಿ, ಈ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದು ರಾಜ್ಯದ ವಿವಿಧ ಸಮುದಾಯಗಳಿಗೆ ಅವರು ಮನವಿ ಮಾಡಿದರು.</p>.<p>‘ವಿರೋಧ ಪಕ್ಷಗಳಿಗೆ ಸಿದ್ಧಾಂತವೆಂಬುದೇ ಇಲ್ಲ. ನಾನು ದುಃಖಿತನಾಗಿರುವ ಬಗ್ಗೆ ಹೇಳಿದ್ದೆ. ತಮ್ಮವರನ್ನು ಕಳೆದುಕೊಂಡವರಿಗೆ ಹಾಗೂ ಜನಾಂಗೀಯ ಸಂಘರ್ಷದಿಂದಾಗಿ ನೋವು ಅನುಭವಿಸುತ್ತಿರುವವರಲ್ಲಿ ಕ್ಷಮೆ ಯಾಚಿಸಿದ್ದೆ’ ಎಂದ ಅವರು, ‘ಉಗ್ರರಲ್ಲಿ ನಾನೇಕೆ ಕ್ಷಮೆ ಯಾಚಿಸಲಿ’ ಎಂದು ಪ್ರಶ್ನಿಸಿದರು.</p>.<p>‘ರಾಜ್ಯದಲ್ಲಿರುವ ವಿವಿಧ ಸಮುದಾಯಗಳ ಜನರಿಗೆ ನಾನು ಶಾಂತಿಯ ಸಂದೇಶ ರವಾನಿಸಿದ್ದೇನೆ. ಹಳೆಯದನ್ನು ಮರೆಯಬೇಕು ಹಾಗೂ ಕ್ಷಮಿಸಬೇಕು. ಮಾತುಕತೆ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದರು.</p>.ಮಣಿಪುರ ಹಿಂಸಾಚಾರ: ರಾಜ್ಯದ ಜನರ ಕ್ಷಮೆಯಾಚಿಸಿದ ಸಿಎಂ ಬಿರೇನ್ ಸಿಂಗ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>