ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ದಾಳಿ: ಪ್ರಮುಖ ರೂವಾರಿಯ ಸುಳಿವು ನೀಡಿದವರಿಗೆ ₹ 35 ಕೋಟಿ ಬಹುಮಾನ

Last Updated 26 ನವೆಂಬರ್ 2018, 6:12 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ವಾಣಿಜ್ಯ ನಗರಿ ಮುಂಬೈ (26/11) ದಾಳಿ ಪ್ರಕರಣದಲ್ಲಿ ಭಾಗಿಯಾರುವ ಪ್ರಮುಖ ರೂವಾರಿ ಅಥವಾ ಸಂಚುಕೋರಯಾವುದೇ ದೇಶದಲ್ಲಿದ್ದರೂ ಅವನ ಬಗ್ಗೆ ಸುಳಿವು ನೀಡಿದವರಿಗೆ 35 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಅಮೆರಿಕ ಘೋಷಣೆ ಮಾಡಿದೆ.

ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ದಾಳಿ ಇದಾಗಿದ್ದು, ದಶಕ ಕಳೆದರೂ ಪ್ರಮುಖ ಆರೋಪಿಗಳು ಮತ್ತು ಸಂಚುಕೋರರಿಗೆ ಶಿಕ್ಷೆಯಾಗಿಲ್ಲ. ಈ ದಾಳಿಯಲ್ಲಿ 166 ಜನರು ಮೃತಪಟ್ಟಿದ್ದರು. ಇವರಲ್ಲಿ 6 ಜನ ಅಮೆರಿಕ ಪ್ರಜೆಗಳು ಸೇರಿದ್ದರು.

ಕೆಲವು ದಿನಗಳ ಹಿಂದಷ್ಟೆ ಸಿಂಗಪೂರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತುಮೈಕ್‌ ಪೆನ್ಸ್‌ ಮುಂಬೈ ದಾಳಿ ಕುರಿತಂತೆ ಚರ್ಚೆ ನಡೆಸಿದ್ದರು. ಈ ವೇಳೆದಾಳಿಯ ರೂವಾರಿ ಮತ್ತು ಸಂಚುಕೋರರ ವಿರುದ್ಧ ಅಗತ್ಯ ಕ್ರಮಕೈಗೊಳ್ಳುವಂತೆ ಅಮೆರಿಕದ ಉಪಾಧ್ಯಕ್ಷ ಮೈಕ್‌ ಪೆನ್ಸ್‌ ಪಾಕಿಸ್ತಾನಕ್ಕೆ ತಾಕಿತ್ತು ಮಾಡಿದ್ದರು.

ದಾಳಿಯ ಪ್ರಮುಖ ಸಂಚುಕೋರ ಎನ್ನಲಾದ, ನಿಷೇಧಿತ ಜಮಾತ್‌–ಉದ್‌– ದವಾ (ಜೆಯುಡಿ) ಮುಖ್ಯಸ್ಥ ಹಫೀಜ್‌ ಸಯೀದ್‌ ಪಾಕಿಸ್ತಾನದಲ್ಲಿ ಈಗ ಮುಕ್ತವಾಗಿ ಸಂಚರಿಸುತ್ತಿದ್ದಾನೆ. ಜತೆಗೆ, ಈ ದಾಳಿಗೆ ಸಂಬಂಧಪಟ್ಟ ಪಾಕಿಸ್ತಾನದ ಶಂಕಿತ ಏಳು ಮಂದಿಗೂ ಇನ್ನೂ ಯಾವುದೇ ರೀತಿಯ ಶಿಕ್ಷೆಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT