ನವದೆಹಲಿ: ಪಂಜಾಬ್-ಹರಿಯಾಣ ಗಡಿಯಲ್ಲಿ 1,200 ಟ್ರ್ಯಾಕ್ಟರ್, 300 ಕಾರುಗಳು, 10 ಮಿನಿ ಬಸ್ಗಳು ಮತ್ತು ಸಣ್ಣ ವಾಹನಗಳೊಂದಿಗೆ ಸುಮಾರು 14,000 ಜನ ರೈತರು ಮೊಕ್ಕಾಂ ಹೂಡಿದ್ದಾರೆ ಎಂದು ಕೇಂದ್ರವು ಅಂದಾಜಿಸಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಕ್ಷೀಣಿಸುತ್ತಿದ್ದು, ಕಾಳಜಿಯ ವಿಷಯವಾಗಿದೆ. ಹೀಗಾಗಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯವು ಹೇಳಿದೆ ಪಂಜಾಬ್ ಸರ್ಕಾರ ತಿಳಿಸಿದೆ.
ರೈತರ ಸೋಗಿನಲ್ಲಿ ಅನೇಕ ಕಿಡಿಗೇಡಿಗಳು ಹರಿಯಾಣ ಮತ್ತು ಪಂಜಾಬ್ನ ಗಡಿಯಲ್ಲಿರುವ ಶಂಭುವಿನುದ್ದಕ್ಕೂ ಭಾರೀ ಯಂತ್ರೋಪಕರಣಗಳನ್ನು ಸಜ್ಜುಗೊಳಿಸಿದ್ದಾರೆ ಅಲ್ಲದೆ ಅಲ್ಲಲ್ಲಿ ಕಲ್ಲು ತೂರಾಟದಲ್ಲಿ ತೊಡಗಿದ್ದಾರೆ ಎಂದು ಗೃಹ ಸಚಿವಾಲಯ ಹೇಳಿದೆ.