<p><strong>ಪುರಿ (ಒಡಿಶಾ):</strong> ‘ಮಾಘ ಸಪ್ತಮಿ’ಯ ಪ್ರಯುಕ್ತ ಇಂದು (ಮಂಗಳವಾರ) ಒಡಿಶಾದ ಪುರಿ ಜಿಲ್ಲೆಯ ಕೊನಾರ್ಕ್ನಲ್ಲಿರುವ ಚಂದ್ರಭಾಗ ಸಮುದ್ರ ತೀರದಲ್ಲಿ ಸಾವಿರಾರು ಜನರು ಪವಿತ್ರ ಸ್ನಾನ ಮಾಡಿದ್ದಾರೆ.</p><p>ಸ್ನಾನದ ಬಳಿಕ ಭಕ್ತರು ಮಹಾದೇವನಿಗೆ ಪೂಜೆ ಸಲ್ಲಿಸಿದ್ದು, ಕೊನಾರ್ಕ್ನ ಸೂರ್ಯ ದೇವಾಲಯದ ಆವರಣದಲ್ಲಿರುವ ‘ನವ ಗ್ರಹ’ಗಳಿಗೂ ಪ್ರಾರ್ಥನೆ ಸಲ್ಲಿಸಿದ್ದಾರೆ.</p><p>ಇಂದು ಬೆಳಿಗ್ಗೆ 4.37ರಿಂದಲೇ ಪವಿತ್ರ ಸ್ನಾನಕ್ಕೆ ಅವಕಾಶ ನೀಡಲಾಗಿತ್ತು. </p><p>ಚಂದ್ರಭಾಗ ಸಮುದ್ರ ತೀರದಲ್ಲಿ ಪವಿತ್ರ ಸ್ನಾನ ಮಾಡಿದರೆ ಚರ್ಮ ರೋಗಗಳು ಗುಣವಾಗುತ್ತದೆ ಮತ್ತು ಪಾಪಗಳನ್ನು ತೊಳೆಯುತ್ತದೆ ಎಂದು ಭಕ್ತರು ನಂಬಿದ್ದಾರೆ.</p><p>ಚಂದ್ರಭಾಗ ಸಮುದ್ರ ತೀರದಲ್ಲಿ ಹಬ್ಬದ ಆಚರಣೆಗಾಗಿ ಪುರಿ ಜಿಲ್ಲಾಡಳಿತವು ಎಲ್ಲಾ ವ್ಯವಸ್ಥೆಗಳನ್ನು ಏರ್ಪಡಿಸಿತ್ತು. ಪುರಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳದಲ್ಲೆಯೇ ಇದ್ದು ವ್ಯವಸ್ಥೆಗಳ ಮೇಲ್ವಿಚಾರಣೆ ನಡೆಸಿದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ಪೊಲೀಸರನ್ನು ನಿಯೋಜಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನದಿಯ ಬಳಿ 20 ಜೀವರಕ್ಷಕರನ್ನು ಸಹ ನಿಯೋಜಿಸಲಾಗಿತ್ತು. ಸೂಕ್ತ ಸಂಚಾರ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಮಾಘ ಸಪ್ತಮಿಯನ್ನು ಸೂರ್ಯ ದೇವರ ಜನ್ಮದಿನವೆಂದು ಆಚರಿಸಲಾಗುತ್ತದೆ. ಹಿಂದೂ ಕ್ಯಾಲೆಂಡರ್ನ ‘ಮಾಘ’ ತಿಂಗಳ ಏಳನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುರಿ (ಒಡಿಶಾ):</strong> ‘ಮಾಘ ಸಪ್ತಮಿ’ಯ ಪ್ರಯುಕ್ತ ಇಂದು (ಮಂಗಳವಾರ) ಒಡಿಶಾದ ಪುರಿ ಜಿಲ್ಲೆಯ ಕೊನಾರ್ಕ್ನಲ್ಲಿರುವ ಚಂದ್ರಭಾಗ ಸಮುದ್ರ ತೀರದಲ್ಲಿ ಸಾವಿರಾರು ಜನರು ಪವಿತ್ರ ಸ್ನಾನ ಮಾಡಿದ್ದಾರೆ.</p><p>ಸ್ನಾನದ ಬಳಿಕ ಭಕ್ತರು ಮಹಾದೇವನಿಗೆ ಪೂಜೆ ಸಲ್ಲಿಸಿದ್ದು, ಕೊನಾರ್ಕ್ನ ಸೂರ್ಯ ದೇವಾಲಯದ ಆವರಣದಲ್ಲಿರುವ ‘ನವ ಗ್ರಹ’ಗಳಿಗೂ ಪ್ರಾರ್ಥನೆ ಸಲ್ಲಿಸಿದ್ದಾರೆ.</p><p>ಇಂದು ಬೆಳಿಗ್ಗೆ 4.37ರಿಂದಲೇ ಪವಿತ್ರ ಸ್ನಾನಕ್ಕೆ ಅವಕಾಶ ನೀಡಲಾಗಿತ್ತು. </p><p>ಚಂದ್ರಭಾಗ ಸಮುದ್ರ ತೀರದಲ್ಲಿ ಪವಿತ್ರ ಸ್ನಾನ ಮಾಡಿದರೆ ಚರ್ಮ ರೋಗಗಳು ಗುಣವಾಗುತ್ತದೆ ಮತ್ತು ಪಾಪಗಳನ್ನು ತೊಳೆಯುತ್ತದೆ ಎಂದು ಭಕ್ತರು ನಂಬಿದ್ದಾರೆ.</p><p>ಚಂದ್ರಭಾಗ ಸಮುದ್ರ ತೀರದಲ್ಲಿ ಹಬ್ಬದ ಆಚರಣೆಗಾಗಿ ಪುರಿ ಜಿಲ್ಲಾಡಳಿತವು ಎಲ್ಲಾ ವ್ಯವಸ್ಥೆಗಳನ್ನು ಏರ್ಪಡಿಸಿತ್ತು. ಪುರಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳದಲ್ಲೆಯೇ ಇದ್ದು ವ್ಯವಸ್ಥೆಗಳ ಮೇಲ್ವಿಚಾರಣೆ ನಡೆಸಿದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ಪೊಲೀಸರನ್ನು ನಿಯೋಜಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನದಿಯ ಬಳಿ 20 ಜೀವರಕ್ಷಕರನ್ನು ಸಹ ನಿಯೋಜಿಸಲಾಗಿತ್ತು. ಸೂಕ್ತ ಸಂಚಾರ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಮಾಘ ಸಪ್ತಮಿಯನ್ನು ಸೂರ್ಯ ದೇವರ ಜನ್ಮದಿನವೆಂದು ಆಚರಿಸಲಾಗುತ್ತದೆ. ಹಿಂದೂ ಕ್ಯಾಲೆಂಡರ್ನ ‘ಮಾಘ’ ತಿಂಗಳ ಏಳನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>