ಕರೆ ಮಾಡಿದ್ದ ವ್ಯಕ್ತಿಯು, ಮುಸ್ಲಿಮರ ವಿರುದ್ಧ ದ್ವೇಷ ಕಾರುತ್ತಿರುವ ತಮ್ಮನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೆ, ಆತಉಗ್ರ ದಾವೂದ್ ಇಬ್ರಾಹಿಂನ ಸೋದರ ಇಕ್ಬಾಲ್ ಕಸ್ಕರ್ನ ಮನುಷ್ಯ ಎಂದು ಪರಿಚಯಿಸಿಕೊಂಡಿದ್ದ ಎಂದು ಸಂಸದೆ ಪ್ರಜ್ಞಾಸಿಂಗ್ ಠಾಕೂರ್ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಈ ಕರೆಯು ದುಬೈನಿಂದಲೇ ಬಂದಿದೆಯೇ ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.