<p><strong>ನವದೆಹಲಿ</strong>: ಹೈದರಾಬಾದ್-ದೆಹಲಿ-ಹೈದರಾಬಾದ್ ಮಾರ್ಗದಲ್ಲಿ ಬಾಲೇಶ್ವರ ರೀತಿ ರೈಲು ದುರಂತ ಸಂಭವಿಸಬಹುದು ಎಂಬ ಅನಾಮಧೇಯ ಪತ್ರ ಬಂದ ಹಿನ್ನಲೆಯಲ್ಲಿ ಸರ್ಕಾರ ರೈಲ್ವೆ ಇಲಾಖೆಯನ್ನು ಎಚ್ಚರಿಸಿದೆ. </p>.<p>‘ಮುಂದಿನ ವಾರ ಬಾಲೇಶ್ವರ ರೀತಿಯಲ್ಲಿ ರೈಲು ದುರಂತ ಸಂಭವಿಸಬಹುದು’ ಎಂದು ದಕ್ಷಿಣ ಮಧ್ಯ ರೈಲ್ವೆಯ ಸಿಕಂದರಾಬಾದ್ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಜೂನ್ 30 ರಂದು ಪತ್ರ ಬಂದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. </p>.<p>ಈ ಪತ್ರವನ್ನು ರೈಲ್ವೆ ಮಂಡಳಿಗೆ ಕಳುಹಿಸಲಾಗಿದೆ. ಮಂಡಳಿಯು ಎಲ್ಲಾ ವಲಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ರೈಲ್ವೆ ಸುರಕ್ಷತಾ ಪಡೆ (ಆರ್ಪಿಎಫ್) ಮತ್ತು ರೈಲ್ವೆ ಪೊಲೀಸ್ (ಜಿಆರ್ಪಿ) ಘಟಕಗಳನ್ನು ಸಹ ಎಚ್ಚರಿಸಲಾಗಿದೆ. ಪತ್ರದ ಬಗ್ಗೆ ರಾಜ್ಯ ಸರ್ಕಾರಕ್ಕೂ ತಿಳಿಸಲಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. </p>.<p>ಪ್ರಯಾಣಿಕರ ಸುರಕ್ಷತೆ ವಿಷಯಕ್ಕೆ ಬಂದಾಗ ಯಾವುದೇ ಬೆದರಿಕೆಯನ್ನು ಲಘುವಾಗಿ ತೆಗೆದುಕೊಳ್ಳದ ಕಾರಣ ರೈಲ್ವೆ ರೆಡ್ ಅಲರ್ಟ್ ಘೋಷಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಬಾಲೇಶ್ವರ ರೈಲು ದುರಂತ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿರುವ ಸಂದರ್ಭದಲ್ಲೇ ಈ ಅನಾಮಧೇಯ ಪತ್ರ ಬಂದಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹೈದರಾಬಾದ್-ದೆಹಲಿ-ಹೈದರಾಬಾದ್ ಮಾರ್ಗದಲ್ಲಿ ಬಾಲೇಶ್ವರ ರೀತಿ ರೈಲು ದುರಂತ ಸಂಭವಿಸಬಹುದು ಎಂಬ ಅನಾಮಧೇಯ ಪತ್ರ ಬಂದ ಹಿನ್ನಲೆಯಲ್ಲಿ ಸರ್ಕಾರ ರೈಲ್ವೆ ಇಲಾಖೆಯನ್ನು ಎಚ್ಚರಿಸಿದೆ. </p>.<p>‘ಮುಂದಿನ ವಾರ ಬಾಲೇಶ್ವರ ರೀತಿಯಲ್ಲಿ ರೈಲು ದುರಂತ ಸಂಭವಿಸಬಹುದು’ ಎಂದು ದಕ್ಷಿಣ ಮಧ್ಯ ರೈಲ್ವೆಯ ಸಿಕಂದರಾಬಾದ್ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಜೂನ್ 30 ರಂದು ಪತ್ರ ಬಂದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. </p>.<p>ಈ ಪತ್ರವನ್ನು ರೈಲ್ವೆ ಮಂಡಳಿಗೆ ಕಳುಹಿಸಲಾಗಿದೆ. ಮಂಡಳಿಯು ಎಲ್ಲಾ ವಲಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ರೈಲ್ವೆ ಸುರಕ್ಷತಾ ಪಡೆ (ಆರ್ಪಿಎಫ್) ಮತ್ತು ರೈಲ್ವೆ ಪೊಲೀಸ್ (ಜಿಆರ್ಪಿ) ಘಟಕಗಳನ್ನು ಸಹ ಎಚ್ಚರಿಸಲಾಗಿದೆ. ಪತ್ರದ ಬಗ್ಗೆ ರಾಜ್ಯ ಸರ್ಕಾರಕ್ಕೂ ತಿಳಿಸಲಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. </p>.<p>ಪ್ರಯಾಣಿಕರ ಸುರಕ್ಷತೆ ವಿಷಯಕ್ಕೆ ಬಂದಾಗ ಯಾವುದೇ ಬೆದರಿಕೆಯನ್ನು ಲಘುವಾಗಿ ತೆಗೆದುಕೊಳ್ಳದ ಕಾರಣ ರೈಲ್ವೆ ರೆಡ್ ಅಲರ್ಟ್ ಘೋಷಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಬಾಲೇಶ್ವರ ರೈಲು ದುರಂತ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿರುವ ಸಂದರ್ಭದಲ್ಲೇ ಈ ಅನಾಮಧೇಯ ಪತ್ರ ಬಂದಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>