<p><strong>ನವದೆಹಲಿ</strong>: ಟಿ.ವಿ. ವಾಹಿನಿಯೊಂದರ ಚರ್ಚೆಯಲ್ಲಿ ಬಿಜೆಪಿಯ ಮಾಧ್ಯಮ ವಕ್ತಾರರೊಬ್ಬರು ‘ರಾಹುಲ್ ಗಾಂಧಿಯ ಎದೆಗೆ ಗುಂಡಿಕ್ಕಬೇಕು‘ ಎಂದಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.</p>.<p>‘ಪಕ್ಷದ ತಳಹಂತದ ಪದಾಧಿಕಾರಿಯೊಬ್ಬರು ನೀಡಿರುವ ಕ್ಷುಲ್ಲಕ ಹೇಳಿಕೆ ಇದು ಎಂದು ಅಸಡ್ಡೆ ತೋರಬಾರದು. ಲೋಕಸಭೆಯ ವಿರೋಧ ಪಕ್ಷದ ನಾಯಕನನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ನೀಡಿರುವ ದ್ವೇಷದ ಹೇಳಿಕೆ ಇದಾಗಿದೆ’ ಎಂದಿದೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಬಿಜೆಪಿಯ ಮಾಧ್ಯಮ ವಕ್ತಾರರಾಗಿ ಟಿ.ವಿ. ವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸುವ ಎಬಿವಿಪಿಯ ಮಾಜಿ ಕಾರ್ಯಕರ್ತ ಪ್ರಿಂಟು ಮಹದೇವ್ ಹೇಳಿಕೆಯನ್ನು ನಿರ್ಲಕ್ಷ್ಯದಿಂದ ನೋಡಬಾರದು. ಅದು ಜೀವ ಬೆದರಿಕೆ’ ಎಂದಿರುವ ವೇಣುಗೋಪಾಲ್, ಆತನ ವಿರುದ್ಧ ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.</p>.<p>ರಾಜಕೀಯ ಭಿನ್ನಾಭಿಪ್ರಾಯಗಳನ್ನು ಸಾಂವಿಧಾನಿಕ ಚೌಕಟ್ಟಿನೊಳಗೆ ಪರಿಹರಿಸಿಕೊಳ್ಳಬೇಕು. ಆದರೆ ಬಿಜೆಪಿ ನಾಯಕರು ತಮ್ಮ ವಿರೋಧಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಟಿ.ವಿ. ವಾಹಿನಿಯೊಂದರ ಚರ್ಚೆಯಲ್ಲಿ ಬಿಜೆಪಿಯ ಮಾಧ್ಯಮ ವಕ್ತಾರರೊಬ್ಬರು ‘ರಾಹುಲ್ ಗಾಂಧಿಯ ಎದೆಗೆ ಗುಂಡಿಕ್ಕಬೇಕು‘ ಎಂದಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.</p>.<p>‘ಪಕ್ಷದ ತಳಹಂತದ ಪದಾಧಿಕಾರಿಯೊಬ್ಬರು ನೀಡಿರುವ ಕ್ಷುಲ್ಲಕ ಹೇಳಿಕೆ ಇದು ಎಂದು ಅಸಡ್ಡೆ ತೋರಬಾರದು. ಲೋಕಸಭೆಯ ವಿರೋಧ ಪಕ್ಷದ ನಾಯಕನನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ನೀಡಿರುವ ದ್ವೇಷದ ಹೇಳಿಕೆ ಇದಾಗಿದೆ’ ಎಂದಿದೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಬಿಜೆಪಿಯ ಮಾಧ್ಯಮ ವಕ್ತಾರರಾಗಿ ಟಿ.ವಿ. ವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸುವ ಎಬಿವಿಪಿಯ ಮಾಜಿ ಕಾರ್ಯಕರ್ತ ಪ್ರಿಂಟು ಮಹದೇವ್ ಹೇಳಿಕೆಯನ್ನು ನಿರ್ಲಕ್ಷ್ಯದಿಂದ ನೋಡಬಾರದು. ಅದು ಜೀವ ಬೆದರಿಕೆ’ ಎಂದಿರುವ ವೇಣುಗೋಪಾಲ್, ಆತನ ವಿರುದ್ಧ ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.</p>.<p>ರಾಜಕೀಯ ಭಿನ್ನಾಭಿಪ್ರಾಯಗಳನ್ನು ಸಾಂವಿಧಾನಿಕ ಚೌಕಟ್ಟಿನೊಳಗೆ ಪರಿಹರಿಸಿಕೊಳ್ಳಬೇಕು. ಆದರೆ ಬಿಜೆಪಿ ನಾಯಕರು ತಮ್ಮ ವಿರೋಧಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>